Belthangady: ಕಡೆಗೂ ಕಜಕ್ಕೆ ಶಾಲೆಯವರೆಗೆ ಬಂತು ಸರಕಾರಿ ಬಸ್‌

ಜನರ ಬೇಡಿಕೆಗೆ ಕೊನೆಗೂ ಸಿಕ್ಕಿತು ಮನ್ನಣೆ; ಹೂವಿನ ಅಲಂಕಾರ, ಸಿಹಿತಿಂಡಿ ಹಂಚಿ ಸ್ವಾಗತ

Team Udayavani, Oct 23, 2024, 4:37 PM IST

6

ಬಸ್ಸಿನೊಂದಿಗೆ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು.

ಬೆಳ್ತಂಗಡಿ: ಕಳೆದ ಅನೇಕ ವರ್ಷಗಳಿಂದ ಲಾೖಲ ದಿಡುಪೆ ಮಾರ್ಗವಾಗಿ ಸಂಚರಿಸುತ್ತಿರುವ ಸಾರಿಗೆ ಬಸ್‌ ಅನ್ನು ಕಜಕ್ಕೆ ಶಾಲೆಯವರೆಗೆ ವಿಸ್ತರಿಸಬೇಕೆಂಬ ಬೇಡಿಕೆಗೆ ಕಡೆಗೂ ಸ್ಪಂದನೆ ದೊರೆತಿದ್ದು, ಅ.22 ರಂದು ಬಸ್‌ ಆಗಮಿಸಿದೆ. ಹೂವಿನ ಅಲಂಕಾರ, ಸಿಹಿ ತಿಂಡಿ ಹಂಚಿ ಗ್ರಾಮಸ್ಥರು ಹಾಗೂ ಮಕ್ಕಳು ಬಸ್‌ ಅನ್ನು ಸ್ವಾಗತಿಸಿದರು.

ಬೆಳಗ್ಗೆ 7.30ಕ್ಕೆ ದಿಡುಪೆಯಿಂದ ಸುಮಾರು 2.5 ಕಿ.ಮೀ. ದೂರದ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಭಾಗಕ್ಕೆ ಬರುವ ಬಸ್ಸಿಗೆ ಮಲವಂತಿಗೆ ಗ್ರಾ.ಪಂ. ಉಪಾಧ್ಯಕ್ಷೆ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಚಾಲನೆ ನೀಡಿದರು.

ತಾಲೂಕಿನ ಒಟ್ಟಾರೆ ಸಾರಿಗೆ ಸಮಸ್ಯೆ ಜತೆಗೆ ಕಜಕೆಗೆ ಬಸ್‌ ಆವಶ್ಯಕತೆ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿ ಆಡಳಿತದ ಗಮನ ಸೆಳೆದಿತ್ತು. ಈ ಹಿನ್ನೆಲೆ ಶಾಸಕ ಹರೀಶ್‌ ಪೂಂಜ ಅವರು ಸಾರಿಗೆ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರ ಸಮ್ಮುಖದಲ್ಲಿ ಜನಸ್ಪಂದನ ಸಭೆ ಏರ್ಪಡಿಸಿದ್ದರು. ಸಭೆಯಲ್ಲಿ ಮಲವಂತಿಗೆ ಗ್ರಾಮದ ತೀಕ್ಷಿತ್‌ ಕೆ.ಕಲೆºಟ್ಟು ಮತ್ತಿತರರು ಕಜಕೆ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು 2.5 ಕಿ.ಮೀ. ನಡೆದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಈ ಭಾಗದಲ್ಲಿ 250 ಕ್ಕೂ ಅಧಿಕ ಮನೆಗಳೂ ಇವೆ ಬಸ್‌ ಅಗತ್ಯ ಎಂದು ಆಗ್ರಹಿಸಿದ್ದರು.

ಕರ್ನಾಟಕ ಸಾರಿಗೆ ವ್ಯವಸ್ಥೆಯ ಸಿಬಂದಿ ವರ್ಗದವರಾದ ನಾರಾಯಣ ಪೂಜಾರಿ ಮುಂಡಾಜೆ ಹಾಗೂ ಚಾಲಕ ಮತ್ತು ನಿರ್ವಾಹಕರಾದ ವಿನಯಚಂದ್ರ, ಕರುಣಾಕರ ಮತ್ತು ದಯಾನಂದ, ಬಂಗಾಡಿ ಸಿಎ ಬ್ಯಾಂಕ್‌ ನಿರ್ದೇಶಕ ಕೇಶವ ಎಂ.ಕೆ., ಮಲವಂತಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ನಾರಾಯಣ ಗೌಡ, ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷ ತೀಕ್ಷಿತ್‌ ಕೆ.ಕಲ್ಬೆಟ್ಟು, ಶ್ರೀ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್‌ನ ಅಧ್ಯಕ್ಷ ಸಂತೋಷ್‌ ಪೂಜಾರಿ, ಕಜಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ರಂಗನಾಥ ಮತ್ತು ಪರಮೇಶ್ವರ್‌, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಪೊದ್ಕೆತರು, ಗ್ರಾಮಸ್ಥರಾದ ಮಧುಸೂದನ್‌ ಮಲ್ಲ, ಶೇಕರ ಗೌಡ ಹೊಳೆಕೆರೆ, ರಾಧಾಕೃಷ್ಣ ಗೌಡ ಮಜಲು, ರಮೇಶ್‌ ಗೌಡ ವಿದ್ಯಾನಗರ, ಸಚಿನ್‌ ಗೌಡ ಬದ್ಲಾಯಿ, ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್‌ ಕಾರ್ಯದರ್ಶಿ ಹರಿ ಭಟ್‌, ಸಂಜೀವ ಗೌಡ ಪುನ್ಕೆದಡಿ, ರಮೇಶ್‌ ಗೌಡ, ಸಂಪತ್‌ ಪೂಜಾರಿ ಕಜಕ್ಕೆ, ಸಾಗರ್‌ ಅಡ್ಡಕೊಡಂಗೆ, ರಾಜೇಶ್‌ ಗೌಡ ಬರ್ಕಲಟ್ಟು ಭಾಗವಹಿಸಿದ್ದರು.

ವಾಣಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಮುಖ್ಯಸ್ಥ ಉಮೇಶ್‌ ಗೌಡ ಸ್ವಾಗತಿಸಿ, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಕಾರ್ಯದರ್ಶಿ ಜಯಂತ ಹೆಗ್ಡೆ ವಂದಿಸಿದರು.

ಟಾಪ್ ನ್ಯೂಸ್

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

1-a-yogi–bg

C.P.Yogeshwara; ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

10

The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್‌ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್‌ ಸ್ಟಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mudipinadka-ಸುಳ್ಯಪದವು: ರಸ್ತೆ ಹೊಂಡ ತಪ್ಪಿಸುವುದೇ ಸಾಹಸ!

1(1)

Puttur: ನಿಧಾನಕ್ಕೆ ಹೋಗಿ, ಇಲ್ಲಿ ಕೆಲಸವೂ ನಿಧಾನಗತಿಯಲ್ಲಿದೆ!

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

14

Katpadi – ಶಿರ್ವ: ರಸ್ತೆ ಗುಂಡಿಗೆ ತೇಪೆ

13(1)

Udupi: ಆಸ್ಪತ್ರೆ ಕಟ್ಟಡ ಹೊಂಡದಿಂದ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.