![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 25, 2024, 12:11 AM IST
ಬೆಳ್ತಂಗಡಿ: ಶಾಮಿಯಾನ ಉದ್ಯಮಿ, ಬೆಳ್ತಂಗಡಿ ಜೆಸಿಐ ಪೂರ್ವಾಧ್ಯಕ್ಷ ಬೆಳ್ತಂಗಡಿಯ ಪೃಥ್ವಿ ರಂಜನ್ ರಾವ್ (74) ಅವರು ಹೃದಯಾಘಾತದಿಂದ ಸೆ. 24ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕಿವಿ ನೋವೆಂದು ಸ್ಥಳೀಯ ಆಸ್ಪತ್ರೆಗೆ ತೆರಳಿ ಮನೆಗೆ ಬಂದವರು ಮನೆಯಲ್ಲಿ ಕುಸಿದು ಬಿದ್ದಿದ್ದರು. ಬಳಿಕ ಅಸ್ವಸ್ಥರಾದ ಅವರನ್ನು ತತ್ಕ್ಷಣ ಮನೆಮಂದಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಂಜೆ ನಿಧನ ಹೊಂದಿದ್ದಾರೆ.
ಹಲವು ದಶಕಗಳಿಂದ ಬೆಳ್ತಂಗಡಿಯಲ್ಲಿ ಶಾಮಿಯಾನದ ಉದ್ಯಮವನ್ನು ನಡೆಸುತ್ತಿದ್ದರು. ಮೃತರು ಪತ್ನಿ ಸರಕಾರಿ ಶಾಲೆಯ ನಿವೃತ್ತ ಶಿಕ್ಷಕಿ ಉಮಾ ರಾವ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.