![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 2, 2024, 8:23 PM IST
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಬರಬೈಲು ಬಸ್ ನಿಲ್ದಾಣದ ಬಳಿ ಓರ್ವ ವ್ಯಕ್ತಿಯು ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಾತನನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ನಿವಾಸಿ ಮಹಮ್ಮದ್ ರಫೀಕ್ (37) ಎಂಬಾತನನ್ನು ಪರಿಶೀಲಿಸಿದಾಗ ಆತನ ಬಳಿಯಿದ್ದ ಚೀಲದಲ್ಲಿ ಅಂದಾಜು 20,000 ರೂ. ಮೌಲ್ಯದ, 1,150 ಗ್ರಾಂ. ಮಾದಕ ವಸ್ತುವಾದ ಗಾಂಜಾ ಕಂಡುಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಕೇರಳದಿಂದ ತಂದಿರುವುದಾಗಿ ತಿಳಿಸಿದ್ದಾನೆ.
ಆರೋಪಿಯೊಂದಿಗೆ ಸೊತ್ತು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.