ವಿಶ್ವಾಸಕ್ಕೆ ಪಡೆಯದೆ ಅನುದಾನ ಹಂಚಿಕೆ: ಆಕ್ಷೇಪ


Team Udayavani, May 30, 2020, 5:58 AM IST

ವಿಶ್ವಾಸಕ್ಕೆ ಪಡೆಯದೆ ಅನುದಾನ ಹಂಚಿಕೆ: ಆಕ್ಷೇಪ

ಬೆಳ್ತಂಗಡಿ: ತಾ.ಪಂ.ಗೆ 15ನೇ ಹಣಕಾಸು ಯೋಜನೆಯಲ್ಲಿ ಬಿಡುಗಡೆಯಾದ ಹಣವನ್ನು ಯಾರನ್ನೂ ವಿಶ್ವಾಸಕ್ಕೆ ಪಡೆಯದೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ತಾ.ಪಂ.ಉಪಾಧ್ಯಕ್ಷರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ತಾ.ಪಂ.ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು.

ತಾ.ಪಂ. ಅಧ್ಯಕ್ಷೆ ದಿವ್ಯ ಜ್ಯೋತಿ ಅವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಆರಂಭದಲ್ಲೇ ಸದಸ್ಯರು ಮತ್ತು ಅಧ್ಯಕ್ಷರ ಮಧ್ಯೆ ಮಾತುಕತೆಗೆ ಕಾರಣವಾಯಿತು.

ಬಿಡುಗಡೆಯಾದ ಹಣವನ್ನು ಕ್ಷೇತ್ರವಾರು ಹಂಚಿಕೆ ಮಾಡುವಾಗ ಉಪಾಧ್ಯಕ್ಷರನ್ನು, ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಕರೆದು ಚರ್ಚಿಸಿ ಸಮಾನ ಹಂಚಿಕೆ ಮಾಡುವುದು ಕ್ರಮ. ಆದರೆ ಅಧ್ಯಕ್ಷರು ಯಾವುದನ್ನೂ ಮಾಡದೇ ಪಟ್ಟಿ ತಯಾರಿಸಿದ್ದಾರೆ. ಇದು ನಮ್ಮನ್ನು ಕಡೆಗಣಿಸಿದಂತೆ ಎಂದು ಉಪಾ ಧ್ಯಕ್ಷೆ ವೇದಾವತಿ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ ಆರೋಪಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ಧ್ವನಿಗೂಡಿಸಿದರು.

ಈ ವೇಳೆ ಕಾಂಗ್ರೆಸ್‌ ಸದಸ್ಯರು ಅಧ್ಯಕ್ಷರ ಪರವಾಗಿ ಏರುಧ್ವನಿಯ ಪ್ರತಿಕ್ರಿಯಿಗೆ ತಿರುಗೇಟು ನೀಡಿದರು.ದಿವ್ಯಜ್ಯೋತಿ ಪ್ರತಿಕ್ರಿಯಿಸಿ, ಲಾಕ್‌ಡೌನ್‌ ಮತ್ತು ಸಮಯಾ ವಕಾಶ ಕೊರತೆಯಿಂದ ಪಟ್ಟಿ ತಯಾರಿಸಲಾಗಿದೆ. ಅನುದಾನ ಹಂಚಿಕೆಯ ಕರಡು ಪಟ್ಟಿಯನ್ನಷ್ಟೇ ಸಿದ್ಧಪಡಿಸಲಾಗಿದೆ.
ಅಂತಿಮಗೊಳಿಸಿಲ್ಲ. ಬದಲಾವಣೆಗೆ ಅವಕಾಶವಿದೆ. ಹಿಂದಿನ ವರ್ಷ ಚರ್ಚೆ ನಡೆಸಿ ಸಿದ್ಧ ಪಡಿಸಿದ ಪಟ್ಟಿಯೂ ಅನುಷ್ಠಾನವೇನು ಆಗಿಲ್ಲ ಎಂದರು. ಅನುದಾನ ಹಂಚಿಕೆ ಯಲ್ಲಿ ತಾರತಮ್ಯದ ಉದ್ದೇಶವಿಲ್ಲ ಎಂದರು.

15ನೇ ಹಣಕಾಸು ಯೋಜನೆ
2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ತಾ.ಪಂ. ಅನುದಾನ 2,23,83,497 ರೂ. ನಿಗದಿ ಪಡಿಸಲಾಗಿದೆ. ಇದರಲ್ಲಿ ಶೇ.50ರಷ್ಟು (1,11,91,748 ರೂ.) ತಾ.ಪಂ.ಗೆ ವಹಿಸಿರುವ ಪ್ರಕಾರ್ಯಗಳಿಗೆ, ಶೇ.25 ರಷ್ಟು (27,97,937 ರೂ.) ಪ.ಜಾತಿ ಮತ್ತು ಪ.ಪಂಗಡದ ಕಾಮ ಗಾರಿಗಳಿಗೆ, ಶೇ.5ರಷ್ಟು (5,59,587 ರೂ.) ವಿಶೇಷ ಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಮತ್ತು 78,34,224 ರೂ. ಇತರ ಕಾಮಗಾರಿಗಳಿಗೆ ಇಡಲಾಗಿದೆ.

ತಾ.ಪಂ. ಉಪಾಧ್ಯಕ್ಷೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್‌ ಎಂ.ಕಲ್ಮಂಜ, ತಾ.ಪಂ. ಇಒ ಕೆ.ಇ. ಜಯರಾಮ್‌ ಉಪಸ್ಥಿತರಿದ್ದರು.

ಅನುಮೋದನೆ
ನಿರ್ಬಂಧಿತ ಅನುದಾನ 1,11,91,748 ರೂ.ನಲ್ಲಿ ಶೇ. 50ರಷ್ಟು (55,95,874 ರೂ.) ನೈರ್ಮಲ್ಯ ಕಾಮಗಾರಿಗಳಿಗೆ, ಶೇ.50ರಷ್ಟು (55,95,874 ರೂ.)ಕುಡಿಯುವ ನೀರಿಗೆ ಕಾದಿರಿಸುವಂತೆ ಸರಕಾರ ಮಾರ್ಗಸೂಚಿ ನೀಡಿದೆ. ಇದರಲ್ಲಿ ಶೇ.25ರಷ್ಟು ಪ.ಜಾತಿ ಹಾಗೂ ಪ.ಪಂಗಡ ಅಭಿವೃದ್ಧಿ ಕಾಮಗಾರಿಗೆ ಮತ್ತು ಶೇ. 5 ಅನ್ನು ಅಂಗವಿಕಲರ ಕಲ್ಯಾಣಕ್ಕೆ ಮೀಸಲಿಟ್ಟು ಕ್ರಿಯಾ ಯೋಜನೆ ತಯಾರಿಸಲು ಅನುಮೋದನೆ ನೀಡಲಾಯಿತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.