ಬೆಳ್ತಂಗಡಿ: ಎರಡು ಕಡೆ ಕೋತಿ ಶವ ಪತ್ತೆ  


Team Udayavani, Jan 12, 2019, 4:11 AM IST

monkey.jpg

ಬೆಳ್ತಂಗಡಿ: ಉಜಿರೆಯಲ್ಲಿ ಶುಕ್ರವಾರ ಕೋತಿಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತಾಲೂಕು ಪಶು ವೈದ್ಯಾಧಿಕಾರಿಗಳಲ್ಲಿ ವಿಚಾರಿಸಿದಾಗ ಜ.10ರಂದು ಕೂಡ ಸವಣಾಲು ಸಮೀಪದ ಕನ್ನಾಜೆಬೈಲಿನಲ್ಲಿ ಇನ್ನೊಂದು ಕೊಳೆತ ಶವ ಪತ್ತೆಯಾಗಿರುವುದನ್ನು ತಿಳಿಸಿದ್ದಾರೆ.

ಎರಡೂ ಕಡೆ ಶವಗಳು ಕೊಳೆತಿದ್ದುದರಿಂದ ಪರೀಕ್ಷೆ ನಡೆಸದೆ ಸುಟ್ಟು ಹಾಕಿದ್ದಾರೆ. ಜತೆಗೆ ಈ ಕುರಿತು ಆರೋಗ್ಯ ಹಾಗೂ ಪಶು ಸಂಗೋಪನ ಇಲಾಖೆಯಲ್ಲಿ ವಿಚಾರಿಸಿದಾಗ, ಸಾಮಾನ್ಯ ಸಾವು ಎಂಬ ಉತ್ತರ ಲಭಿಸಿದೆ. ಉಜಿರೆಯಲ್ಲಿ ಕೋತಿ ಸತ್ತ ಪ್ರದೇಶಕ್ಕೆ ವೈದ್ಯಾಧಿಕಾರಿ ಡಾ| ಅರ್ಚನಾ, ಹೆಲ್ತ್‌ ಇನ್ಸ್‌ಪೆಕ್ಟರ್‌ ಸ್ವತಂತ್ರ ರಾವ್‌, ಮಂಗನ ಕಾಯಿಲೆ ವಿಶೇಷಾಧಿಕಾರಿ ಅಶೋಕ್‌, ಗ್ರಾ.ಪಂ. ಅಧ್ಯಕ್ಷ ಶ್ರೀಧರ ಪೂಜಾರಿ, ಸಿಬಂದಿ ರಮೇಶ್‌, ಉಜಿರೆ ಪಶು ವೈದ್ಯಾಧಿಕಾರಿ ಡಾ| ಕಾರ್ತಿಕ್‌, ಅರಣ್ಯಾ ಧಿಕಾರಿಗಳು ಭೇಟಿ ನೀಡಿದ್ದಾರೆ.

ಕನ್ನಾಜೆಬೈಲು: ಮಾಹಿತಿಯೇ ಇಲ್ಲ
ಜ. 10ರಂದು ಕನ್ನಾಜೆಬೈಲಿನಲ್ಲೂ ಶವ ಪತ್ತೆ ಕುರಿತು ಪಶು ಸಂಗೋಪನ ಇಲಾಖೆಯವರು ತಿಳಿಸಿದ್ದಾರೆ. ಆದರೆ ಹಲವು ದಿನಗಳಿಂದ ಮಂಗನ ಕಾಯಿಲೆ ಸುದ್ದಿ ಮಾಡುತ್ತಿದ್ದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ.
ಕನ್ನಾಜೆಬೈಲಿಗೆ ತಾಲೂಕು ಪಶು ವೈದ್ಯಾಧಿಕಾರಿ ಡಾ| ರತ್ನಾಕರ ಮಲ್ಯ, ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಶವ ವನ್ನು ಪರಿಶೀಲಿಸಿ, ಸುಟ್ಟು ಹಾಕಿದ್ದಾರೆ.

1 ಕಿ.ಮೀ.ಯಲ್ಲಿ ಸರ್ವೆ
ಆರೋಗ್ಯ ಇಲಾಖೆ ಉಜಿರೆಯಲ್ಲಿ ಶವ ಪತ್ತೆಯಾಗಿರುವ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲ ಮನೆಗಳ ಸರ್ವೇಗೆ ಸಿದ್ಧತೆ ನಡೆಸಿದೆ. ಜ್ವರದ ಪ್ರಕರಣ ಕಂಡು ಬಂದರೆ ಸೂಕ್ತ ಪರೀಕ್ಷೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಲೂಕಿನ ಕರಾಳ ನೆನಪು
ಮಂಗನ ಕಾಯಿಲೆ ಎಂದರೆ ಬೆಳ್ತಂಗಡಿ ತಾಲೂಕಿನ ಜನತೆ ಬೆಚ್ಚಿಬೀಳುವ ಮಟ್ಟಿಗೆ ಇಲ್ಲಿ 1980ರ ದಶಕದಲ್ಲಿ ಅದು ಸಾವುನೋವುಗಳನ್ನು ತಂದಿದೆ. ಕೊಯ್ಯೂರು ಹಾಗೂ ಪಟ್ರಮೆ ಗ್ರಾಮಗಳಲ್ಲಿ ಹೆಚ್ಚಿನ ತೊಂದರೆ ನೀಡಿದ್ದು, ಹತ್ತಾರು ಮಂದಿಯ ಸಾವಿನ ಜತೆಗೆ, ನೂರಾರು ಮಂದಿ ಹಾಸಿಗೆ ಹಿಡಿದಿದ್ದರು. 

ಸರ್ವೇಗೆ ಕ್ರಮ
ಉಜಿರೆಯಲ್ಲಿ ಕೋತಿಯು ಕಾಯಿಲೆಯಿಂದ ಸತ್ತಿರುವ ಸಾಧ್ಯತೆ ಇಲ್ಲ. ಪ್ರಸ್ತುತ ಮುನ್ನೆಚ್ಚರಿಕೆಯಾಗಿ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಸರ್ವೆ ನಡೆಸುವುದಕ್ಕೆ ತಿಳಿಸಲಾಗಿದೆ. ಜ್ವರದ ಪ್ರಕರಣ ಕಂಡುಬಂದರೆ ಶೀಘ್ರ ಕ್ರಮಕೈಗೊಳ್ಳಲಾಗುತ್ತದೆ.
ಸ್ವತಂತ್ರ ರಾವ್‌, ಹೆಲ್ತ್‌ ಇನ್ಸ್‌ಪೆಕ್ಟರ್‌, ಉಜಿರೆ

ಸ್ಯಾಂಪಲ್‌ ಸಂಗ್ರಹ ಸಾಧ್ಯವಾಗಿಲ್ಲ
ಕೋತಿ ಶವ ಕೊಳೆತ ಸ್ಥಿತಿಯಲ್ಲಿದ್ದು, ಸ್ಯಾಂಪಲ್‌ ಸಂಗ್ರಹ ಸಾಧ್ಯವಾಗಿಲ್ಲ. ಸ್ಥಳೀಯ ಪಶುವೈದ್ಯಾಧಿಕಾರಿಗಳು ಮಂಗಗಳು ಜಗಳವಾಡಿ ಸತ್ತಿವೆ, ಕಾಯಿಲೆಯಿಂದ ಅಲ್ಲ ಎಂಬ ಮಾಹಿತಿ ನೀಡಿದ್ದಾರೆ. ಶವ ಸುಡಲಾಗಿದ್ದು, ಆತಂಕ ಅನಗತ್ಯ.
ಡಾ| ಕಲಾಮಧು, ತಾಲೂಕು ಆರೋಗ್ಯಾಧಿಕಾರಿ, ಬೆಳ್ತಂಗಡಿ

ಸಾಮಾನ್ಯ ಸಾವು ಸಾಧ್ಯತೆ
ಸವಣಾಲು ರಸ್ತೆಯ ಕನ್ನಾಜೆಬೈಲಿನ ಕಾಡಿನಲ್ಲಿ ಜ.10ರಂದು ಕೊಳೆತ ಸ್ಥಿತಿಯಲ್ಲಿ ಕೋತಿಯ ಶವ ಪತ್ತೆಯಾಗಿದ್ದು, ಕೊಳೆತಿರುವ ಕಾರಣ ಪರೀಕ್ಷೆ ಅಸಾಧ್ಯ. ಜಗಳ ಅಥವಾ ವಿದ್ಯುತ್‌ ಲೈನಿಗೆ ತಾಗಿ ಸತ್ತಿರುವ ಸಾಧ್ಯತೆ ಹೆಚ್ಚಿದೆ.
ಡಾ| ರತ್ನಾಕರ ಮಲ್ಯ, ಸ. ನಿರ್ದೇಶಕರು,  ಪ.ಸಂ. ಇಲಾಖೆ, ಬೆಳ್ತಂಗಡಿ

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.