Belthangady ಹಾಡಹಗಲೇ ಮನೆಯಿಂದ ಕಳವು


Team Udayavani, Feb 1, 2024, 1:18 AM IST

Belthangady ಹಾಡಹಗಲೇ ಮನೆಯಿಂದ ಕಳವು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಜ. 31ರಂದು ಮಧ್ಯಾಹ್ನ ಸಂಭವಿಸಿದೆ.

ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಅವರ ಮನೆಯಿಂದ ಈ ಕಳ್ಳತನ ನಡೆದಿದೆ. ರಾಘವೇಂದ್ರ ಆಚಾರ್ಯ ಅವರು ಬೆಳ್ತಂಗಡಿಯಲ್ಲಿ ಚಿನ್ನಾಭರಣ ತಯಾರಿ ಕೆಲಸವನ್ನು ಮಾಡುತ್ತಿದ್ದು ಬೆಳಗ್ಗೆ ಅಲ್ಲಿಗೆ ಹೋಗಿದ್ದರು. ಪತ್ನಿ ಖಾಸಗಿಯಾಗಿ ಕೆಲಸಕ್ಕೆ ಹೋಗಿದ್ದು, ಮಕ್ಕಳು ಶಾಲೆಗೆ ಹೋಗಿರುವುದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಇದೇ ಸಂದರ್ಭವನ್ನು ನೋಡಿಕೊಂಡ ಕಳ್ಳರು ಮನೆಯ ಎದುರು ಬಾಗಿಲಿನ ಚಿಲಕವನ್ನು ಮುರಿದು ಒಳ ನುಗ್ಗಿ ಮೂರು ಬೀರುವನ್ನು ಓಪನ್‌ ಮಾಡಿ ಬಟ್ಟೆ-ಬರೆಗಳನ್ನು ಹೊರಗೆ ಎಳೆದು ಹಾಕಿ ಚೆಲ್ಲಾಪಿಲ್ಲಿಗೊಳಿಸಿ, ಚಿನ್ನಾಭರಣ ಹಾಗೂ ನಗದಿಗಾಗಿ ಹುಡುಕಾಡಿರುವುದು ಕಂಡುಬಂದಿದೆ.

ಬೀರುವಿನಲ್ಲಿದ್ದ 15 ಸಾವಿರ ರೂ. ನಗದು ಹಾಗೂ ಸುಮಾರು 50 ಸಾವಿರ ರೂ. ಮೌಲ್ಯದ ಒಂದು ಪವನ್‌ನ ಚಿನ್ನದ ಸರ ಹಾಗೂ ಬೆಳ್ಳಿಯ ಕೌಲಿಗೆಯನ್ನು ಕೊಂಡು ಹೋಗಿದ್ದಾರೆ ಎಂದು ಮನೆಯ ಮಾಲಕ ರಾಘವೇಂದ್ರ ಆಚಾರ್ಯ ತಿಳಿಸಿದ್ದಾರೆ. ನಗ-ನಗದು ಸೇರಿ ಸುಮಾರು 70 ಸಾವಿರ ಮೌಲ್ಯದ ಸೊತ್ತುಗಳು ಸೇರಿದೆ ಎಂದು ಅಂದಾಜಿಸಲಾಗಿದೆ.

ಮನೆಯ ಚಿಲಕವನ್ನು ಮುರಿದು ಒಳನುಗ್ಗಿ ಕಳ್ಳತನ ನಡೆಸಿ ಮರಳಿ ಹೋಗುವಾಗ ಎದುರಿನ ಬಾಗಿಲನ್ನು ಲಾಕ್‌ ಹಾಕಿಕೊಂಡು ಹೋಗಿದ್ದರು. ಮನೆಯ ದೇವರ ಕೋಣೆಯಲ್ಲಿದ್ದ ಬೆಳ್ಳಿಯ ದೀಪ ಫ್ರಿಜ್‌ನ ಮೇಲಿದ್ದು, ಕಳ್ಳರು ಅವಸರದಲ್ಲಿ ಇದನ್ನು ಬಿಟ್ಟು ಹೋಗಿರಬಹುದೆಂದು ಅಂದಾಜಿಸಲಾಗಿದೆ.

ಅಪರಿಚಿತ ಸುತ್ತಾಡಿದ್ದ
ಮಧ್ಯಾಹ್ನ ರಾಘವೇಂದ್ರ ಆಚಾರ್ಯ ಅವರು ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಸ್ಥಳೀಯ ಪರಿಸರದಲ್ಲಿ ಬೆಳಗ್ಗೆ ಅಪರಿಚತ ವ್ಯಕ್ತಿಯೋರ್ವ ಓಡಾಟ ನಡೆಸಿದ್ದನ್ನು ಸ್ಥಳೀಯರು ವಿಚಾರಿಸಿದಾಗ ಆತ ತಾನು ಜೋತಿಷ ಹೇಳುವವ ಎಂದು ಹೇಳಿದ್ದನೆನ್ನಲಾಗಿದೆ. ಈತನೇ ಈ ಕಳ್ಳತನ ನಡೆಸಿದನೇ ಅಥವಾ ಬೇರೆಯಾದರೂ ಈ ಕೃತ್ಯ ಎಸಗಿದರೇ, ಎಂಬ ಅನುಮಾನ ವ್ಯಕ್ತವಾಗಿದೆ. ರಾಘವೇಂದ್ರ ಆಚಾರ್ಯರು ಠಾಣೆಗೆ ಬಂದು ಮಾಹಿತಿ ನೀಡಿದ ಅನಂತರ ಸಂಜೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.