BJP ಕೋರ್‌ ಕಮಿಟಿ ಸಭೆ; ಯಾವುದೇ ನಿರ್ಧಾರಕ್ಕೆ ಬಾರದ ಮುಖಂಡರು!

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರ ಆಯ್ಕೆಗೆ ಅಸಮಾಧಾನ ಹಿನ್ನೆಲೆ

Team Udayavani, Feb 6, 2024, 11:38 PM IST

bjpBJP ಕೋರ್‌ ಕಮಿಟಿ ಸಭೆ; ಯಾವುದೇ ನಿರ್ಧಾರಕ್ಕೆ ಬಾರದ ಮುಖಂಡರು!

ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ನೇತೃತ್ವದಲ್ಲಿ ಸುಳ್ಯದಲ್ಲಿ ನಡೆದ ಕೋರ್‌ ಕಮಿಟಿ ಸಭೆ ಯಾವುದೇ ನಿರ್ಧಾರಕ್ಕೆ ಬಾರದೇ ಮುಕ್ತಾಯಗೊಂಡಿದೆ.

ಸಭೆಯಲ್ಲಿ ಪಕ್ಷ ಸಂಘಟನೆ, ಮುಂದಿನ ಲೋಕಸಭೆ ಚುನಾವಣೆ ತಯಾರಿ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಸುಳ್ಯ ಮಂಡಲದಲ್ಲಿ ಯಾವುದೇ ಅಸಮಾಧಾನ, ಗೊಂದಲ ಇಲ್ಲ ಎಂದು ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಮಂಗಳವಾರ ದಿನಪೂರ್ತಿ ಮ್ಯಾರಥಾನ್‌ ಸಭೆ ನಡೆದಿದೆ. ಕೋರ್‌ಕಮಿಟಿ ಸದಸ್ಯರು ಹಾಗೂ ಜಿಲ್ಲಾ ಮುಖಂಡರು ಮಧ್ಯೆ ತೀವ್ರ ಚರ್ಚೆ ನಡೆಯಿತು. ಕೋರ್‌ ಕಮಿಟಿ ಸದಸ್ಯರು ತಮ್ಮ ನಿಲುವನ್ನು ಬದಲಾ ಯಿ ಸದೆ ಪಟ್ಟು ಹಿಡಿದು ಚರ್ಚೆ ನಡೆಸಿದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದಲ್ಲಿ ಪ್ರಜಾಪ್ರಭುತ್ವ ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಬೇಕು. ಕೋರ್‌ಕಮಿಟಿ, ಮಂಡಲ ಸಮಿತಿ ಹಾಗೂ ಕಾರ್ಯಕರ್ತರ ತೀರ್ಮಾನಕ್ಕೆ ಬೆಲೆ ನೀಡಬೇಕು ಎಂದು ಸದಸ್ಯರು ಜಿಲ್ಲಾ ಪ್ರಮುಖರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನದ ಬಳಿಕ ನೂತನ ಅಧ್ಯಕ್ಷ ವೆಂಕಟ್‌ ವಳಲಂಬೆ ಸಭೆ ಯಲ್ಲಿ ಭಾಗವಹಿಸಿದ್ದರು. ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಒಟ್ಟಾಗಿ ಕೆಲಸ ಮಾಡಲಾಗುವುದು ಎಂದು ಅಧ್ಯಕ್ಷ ವೆಂಕಟ್‌ ವಳಲಂಬೆ ಹೇಳಿದರು.

ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್‌ ಶೆಟ್ಟಿ, ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಕೋರ್‌ಕಮಿಟಿ ಸದಸ್ಯರಾದ ಹರೀಶ್‌ ಕಂಜಿಪಿಲಿ, ಎಸ್‌.ಎನ್‌. ಮನ್ಮಥ, ಎ.ವಿ. ತೀರ್ಥರಾಮ, ವೆಂಕಟ್‌ ದಂಬೆಕೋಡಿ, ಸುಬೋಧ್‌ ಶೆಟ್ಟಿ ಮೇನಾಲ, ರಾಕೇಶ್‌ ರೈ ಕೆಡೆಂಜಿ, ಕೃಷ್ಣ ಶೆಟ್ಟಿ ಕಡಬ ಭಾಗವಹಿಸಿದ್ದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.