ಚುನಾವಣೆ ಹೊಸ್ತಿಲಲ್ಲಿ ಚಾಣಕ್ಯನ ಭೇಟಿ

ಗೆಲುವಿನ ರೂಪುರೇಷೆ ಚರ್ಚೆ ಸಂಭವ ; ಅಡಿಕೆ ಕೃಷಿಕರಿಗೆ ಸಿಹಿ ಸುದ್ದಿ ನಿರೀಕ್ಷೆ

Team Udayavani, Feb 11, 2023, 7:14 AM IST

ಚುನಾವಣೆ ಹೊಸ್ತಿಲಲ್ಲಿ ಚಾಣಕ್ಯನ ಭೇಟಿ

ಪುತ್ತೂರು: ಬಿಜೆಪಿಯ ಚುನಾವಣ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪುತ್ತೂರು ಭೇಟಿಯ ಹಿಂದೆ ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಯ ಕಹಳೆ ಊದುವ ತಂತ್ರಗಾರಿಕೆ ಅಡಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕೃಷಿ ವರ್ಗ, ಹಿಂದುತ್ವದ ಆಧಾರದಲ್ಲಿ ಮತ ಸೆಳೆಯಲು ಬಿಜೆಪಿಯ ಶಕ್ತಿ ಕೇಂದ್ರ ಎನಿಸಿರುವ ಕರಾವಳಿಯಲ್ಲೇ ತಂತ್ರಗಾರಿಕೆ ಹೆಣೆಯುವ ಲೆಕ್ಕಾಚಾರದಿಂದಲೇ ಈ ಭೇಟಿ ನಿಗದಿಪಡಿಸಲಾಗಿದೆ. ಸಹಕಾರ ಮತ್ತು ಅಡಿಕೆ ಬೆಳೆಗಾರರ ಸಮಾವೇಶ ರಾಜಕೀಯ ರಹಿತ ಎಂದು ಬಿಂಬಿಸಲಾಗಿದ್ದರೂ ಅಮಿತ್‌ ಶಾ ಭೇಟಿ ಬಿಜೆಪಿ ಸಂಘಟನೆಗೆ ಶಕ್ತಿ ತುಂಬುವ ಉದ್ದೇಶವೇ ಎಂದು ಹೇಳಲಾಗುತ್ತಿದೆ.

ಕರಾವಳಿಯ ಆರ್ಥಿಕ ಬೆನ್ನೆಲುಬು ಅಡಿಕೆ ಬೆಳೆಗಾರರು. ಇಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಅಡಿಕೆ ಕೃಷಿಕರಿದ್ದಾರೆ.

ಹೀಗಾಗಿ ಸುವರ್ಣ ಮಹೋತ್ಸವ ಬಿಜೆಪಿ ಪಾಲಿಗೆ ಕೃಷಿಕರನ್ನು ಸೆಳೆಯುವ ವೇದಿಕೆಯೂ ಆಗಬಹುದು. ಅಡಿಕೆ ಬೆಳೆಗಾರರ ಬಹು ಬೇಡಿಕೆ ಆಗಿರುವ ಅಡಿಕೆ ಕನಿಷ್ಠ ಆಮದು ಸುಂಕ ಏರಿಸಬೇಕೆಂಬ ಬೇಡಿಕೆಯನ್ನು ಸಮಾವೇಶದಲ್ಲಿ ಗೃಹ ಸಚಿವರು ಈಡೇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಡಿಕೆ ಕೃಷಿಗೆ ಭವಿಷ್ಯ ಇಲ್ಲ ಎಂಬರ್ಥದಲ್ಲಿ ರಾಜ್ಯ ಗೃಹ ಸಚಿವರು ಆಡಿದ ಮಾತಿನಿಂದ ಉಂಟಾಗಿರುವ ಹಾನಿಯನ್ನು ಸರಿ ಪಡಿಸುವ ಅನಿವಾರ್ಯವೂ ಬಿಜೆಪಿಗೆ ಇದೆ. ಹಾಗಾಗಿ ಬೆಳೆ ಗಾರರ ಒಲವು ಗಳಿಸಲು ಹೊಸ ಯೋಜನೆಗಳನ್ನು ಪ್ರಕಟಿ ಸುವ ಸಾಧ್ಯತೆಯೂ ಇದೆ. ದಶಕಗಳಿಂದ ಅಡಿಕೆ ಬೆಳೆಗಾರರನ್ನು ಕಾಡು ತ್ತಿರುವ ಸಮಸ್ಯೆಗಳನ್ನು ಶಾ ಮುಂದಿರಿಸಿ ಬಿಜೆಪಿಯು ರೈತ ಪರ ವಾಗಿದೆ ಎನ್ನುವ ಸಂದೇಶ ರವಾನಿಸುವ ಪ್ರಯತ್ನವೂ ಇದೆ.

ಹಿಂದುತ್ವ ಡ್ಯಾಮೇಜ್‌ ಕಂಟ್ರೋಲ್‌
ಕರಾವಳಿಯಲ್ಲಿ ಬಿಜೆಪಿ ಗೆಲುವಿನ ಪ್ರಮುಖ ಅಸ್ತ್ರ ಹಿಂದುತ್ವ. ಇತ್ತೀಚೆಗಿನ ಕೆಲವು ವರ್ಷಗಳಿಂದ ಸಂಘ ಪರಿವಾರ ಹಾಗೂ ಬಿಜೆಪಿ ಮಧ್ಯೆ ಸಂಬಂಧ ಹಿಂದಿನಂತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಸಂಘ ಪರಿವಾರದ ಪ್ರಮುಖ ನಾಯಕರು ಬಿಜೆಪಿ ವಿರುದ್ಧ ಧ್ವನಿ ಎತ್ತುತ್ತಿರುವುದು, ಪ್ರವೀಣ್‌ ನೆಟ್ಟಾರು ಹತ್ಯೆ ವೇಳೆ ಬಿಜೆಪಿ ಜನಪ್ರತಿನಿಧಿಗಳ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರ ಬಹಿರಂಗ ಆಕ್ರೋಶ, ಸಂಘ ಪರಿವಾರದವರಿಗೆ ಟಿಕೆಟ್‌ ನೀಡಬೇಕೆಂಬ ಒತ್ತಡ ಹೆಚ್ಚು ತ್ತಿರುವುದು- ಇವೆಲ್ಲ ಬೆಳವಣಿಗೆಗಳಿಗೆ ಪರಿಹಾರ ಹುಡುಕ ಬೇಕಿದೆ. ಕರಾವಳಿಯಲ್ಲಿ ಬಿಜೆಪಿ ತನ್ನ ಸ್ಥಾನಗಳನ್ನು ಕಳೆದು ಕೊಳ್ಳದಂತೆ ಪರಿಸ್ಥಿತಿ ನಿರ್ವಹಿಸುವಲ್ಲಿ ಅಮಿತ್‌ ಶಾ ಭೇಟಿ ಮಹತ್ವ ಪಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಜಾತಿ ಲೆಕ್ಕಾಚಾರ
ಹಿಂದುತ್ವದ ಆಧಾರದಲ್ಲಿಯೇ ಬಿಜೆಪಿಯ ಚುನಾವಣೆ ಲೆಕ್ಕಾಚಾರ ನಡೆಯುತ್ತಿದ್ದ ಕರಾವಳಿಯಲ್ಲಿ ಈ ಬಾರಿ ಜಾತಿ ಅಸ್ತ್ರವೂ ಮುನ್ನೆಲೆಗೆ ಬರುತ್ತಿದೆ. ಪ್ರಬಲ ಸಮುದಾಯಗಳು ಬೇರೆಬೇರೆ ರೂಪದಲ್ಲಿ ಶಕ್ತಿ ಪ್ರದರ್ಶನ ನಡೆಸಿರುವುದೂ ಬಿಜೆಪಿ ಗಮನಿಸಿದೆ. ಜಾತಿ ಬಲ ಆಧಾರಿತವಾಗಿ ಅಭ್ಯರ್ಥಿಗಳ ಆಯ್ಕೆಗೆ ಒತ್ತಡ ಬಂದರೆ ಏನು ಮಾಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಮುಳುಗಿದೆ. ಇಂತಹ ಸಂದಿಗ್ಧ ಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಅಮಿತ್‌ ಶಾ ಬಿಜೆಪಿ ನಾಯಕರಿಗೆ ಮಾರ್ಗದರ್ಶನ ನೀಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.