ಕೊಳವೆಬಾವಿ ನೀರಿನಲ್ಲಿ ಸೀಮೆಎಣ್ಣೆ !


Team Udayavani, Sep 24, 2021, 6:55 AM IST

ಕೊಳವೆಬಾವಿ ನೀರಿನಲ್ಲಿ ಸೀಮೆಎಣ್ಣೆ !

ಸುಳ್ಯ: ಕೊಳವೆ ಬಾವಿಯಿಂದ ಪೂರೈಕೆ ಯಾಗುತ್ತಿರುವ ನೀರು ಸೀಮೆ ಎಣ್ಣೆ ವಾಸನೆಯಿಂದ ಕೂಡಿದ್ದು ಉಪಯೋಗಿಸಲು ಸಾಧ್ಯವಾಗದ ಸನ್ನಿವೇಶ ಸುಳ್ಯ ನಗರ ಪಂಚಾಯತ್‌ ವ್ಯಾಪ್ತಿಯ ನಾಲ್ಕನೇ ವಾರ್ಡ್‌ ಬೆಟ್ಟಂಪಾಡಿಯಲ್ಲಿ ಉಂಟಾಗಿದೆ. ಒಂದೂವರೆ ತಿಂಗಳಿನಿಂದ ಈ ರೀತಿಯ ಅನುಭವ ಆಗುತ್ತಿದ್ದು ಜನರು ಕುಡಿಯುವ ನೀರಿಗೆ ಪರದಾಡುವಂತಾಗಿದೆ.

ನೀರನ್ನು ಬಿಸಿ ಮಾಡಿದರೂ ವಾಸನೆ ಹೋಗುತ್ತಿಲ್ಲ. ಅದರಲ್ಲಿ ಬೇಯಿಸಿದ ಆಹಾರವೂ ಸೀಮೆ ಎಣ್ಣೆ ವಾಸನೆ ಬೀರುತ್ತದೆ ಮತ್ತು ಬೇಗನೆ ಕೆಟ್ಟು ಹೋಗುತ್ತದೆ. ಮುಖ ತೊಳೆಯಲು, ಸ್ನಾನ ಮಾಡಲೂ ಆಗದ ಪರಿಸ್ಥಿತಿ ನಿರ್ಮಾಣ ಆಗಿದೆ ಎನ್ನುತ್ತಾರೆ ಸ್ಥಳೀಯರು.

150 ಮನೆಗಳಿಗೆ ಸರಬರಾಜು:

ಬೆಟ್ಟಂಪಾಡಿಯ ನಗರ ಪಂಚಾಯತ್‌ ಬೋರ್‌ವೆಲ್‌ನಿಂದ ನೀರೆತ್ತಿ ಟ್ಯಾಂಕ್‌ಗೆ ಹಾಕಿ ಅಲ್ಲಿಂದ ಮನೆಗಳಿಗೆ ಸರಬರಾಜು ಆಗುತ್ತದೆ. ಅಲ್ಲದೆ ಕೊಳವೆಬಾವಿಯಿಂದ ನೇರವಾಗಿಯೂ ಕೆಲವು ಮನೆಗಳ ಟ್ಯಾಂಕ್‌ಗಳಿಗೆ ನೀರು ಹೋಗುತ್ತದೆ. ಬೆಟ್ಟಂಪಾಡಿಯ 130 ಮನೆ ಮತ್ತು ಶಾಂತಿನಗರದ ಕೆಲವು ಮನೆಗಳು ಸೇರಿ 150ಕ್ಕೂ ಹೆಚ್ಚು ಮನೆಯರಿಗೆ ಈ ನೀರು ಸರಬರಾಜಾಗುತ್ತಿದೆ.

ಕೆಲವರು ಹತ್ತಿರದ ಬಾವಿಯ ನೀರು ತಂದು ಬಳಸುತ್ತಾರೆ. ನಗರ ಪಂಚಾಯತ್‌ ಸದಸ್ಯರು ಮತ್ತು ಅ ಧಿಕಾರಿಗಳು ಬಂದು ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ.

ಘಾಟು ವಾಸನೆ!:

ಸೀಮೆ ಎಣ್ಣೆ ವಾಸನೆಯ ಘಾಟು ಎಷ್ಟಿದೆಯೆಂದರೆ ಬೋರ್‌ವೆಲ್‌ ಮತ್ತು ಟ್ಯಾಂಕ್‌ ಸಮೀಪ ತೆರಳಿದರೆ ವಾಸನೆ ಮೂಗಿಗೆ ಬಡಿಯುತ್ತದೆ. ಪಾತ್ರೆಗಳಲ್ಲಿ ಶೇಖರಿಸಿಟ್ಟ ನೀರಿನ ಮೇಲ್ಪದರದಲ್ಲಿ ಎಣ್ಣೆಯ ಅಂಶ ಸೇರಿ ತೇಲುತ್ತಿರುತ್ತದೆ ಮತ್ತು ವಾಕರಿಕೆ ಬರುವಷ್ಟು ತೀವ್ರ ಸ್ವರೂಪದ ವಾಸನೆ ಬೀರುತ್ತಿರುತ್ತದೆ.

ಬದಲಿ ವ್ಯವಸ್ಥೆ ಕಲ್ಪಿಸಿ:

ಈ ನೀರನ್ನು ಉಪಯೋಗಿಸಿದರೆ ಆರೋಗ್ಯದ ಸಮಸ್ಯೆ ಉಂಟಾಗುವ ಭೀತಿ ಇದೆ. ಯಾಕೆ ಹೀಗೆ ಆಗಿದೆ ಎಂಬ ಬಗ್ಗೆ ಸೂಕ್ತ ಪರೀಕ್ಷೆ ಆಗಬೇಕು ಮತ್ತು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯರಾದ ಆನಂದ, ಶಂಕರ, ಸುಧಾಕರ ಮತ್ತು ಜನಾದ‌ìನ ಆಗ್ರಹಿಸಿದ್ದಾರೆ.

ಸೀಮೆ ಎಣ್ಣೆ ವಾಸನೆ ಬೀರುವ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು.ವಿನಯಕುಮಾರ್‌ ಕಂದಡ್ಕ, ಅಧ್ಯಕ್ಷ, ಸುಳ್ಯ ನಗರ ಪಂಚಾಯತ್‌

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.