ಬುಡಾ ಕಚೇರಿ ಬಿ.ಸಿ. ರೋಡ್‌ಗೆ ಸ್ಥಳಾಂತರ


Team Udayavani, Jun 23, 2020, 5:55 AM IST

ಬುಡಾ ಕಚೇರಿ ಬಿ.ಸಿ. ರೋಡ್‌ಗೆ ಸ್ಥಳಾಂತರ

ಬಂಟ್ವಾಳ: ಕಳೆದ 10 ವರ್ಷ ಗಳಿಂದ ಬಂಟ್ವಾಳ ಪುರಸಭೆ ಕಚೇರಿಯಲ್ಲಿ ಕಾರ್ಯಾಚರಿಸುತ್ತಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬುಡಾ) ಪ್ರಸ್ತುತ ಪೂರ್ಣ ಪ್ರಮಾಣದಲ್ಲಿ ಬಿ.ಸಿ. ರೋಡ್‌ನ‌ ಪುರಸಭೆ ಕಟ್ಟಡದಲ್ಲಿ ಪ್ರಾಧಿಕಾರಕ್ಕೆ ಮೀಸಲಿರಿಸಲಾದ ಕಚೇರಿಗೆ ಸ್ಥಳಾಂತರಗೊಂಡಿದೆ.

ಈ ಕುರಿತು ನೂತನ ಕಚೇರಿಯಲ್ಲಿ ಬುಡಾ ಅಧ್ಯಕ್ಷ ಬಿ. ದೇವದಾಸ್‌ ಶೆಟ್ಟಿ ಅವರು ಪತ್ರಕರ್ತರ ಜತೆ ಮಾತನಾಡಿ, ಕಳೆದ 2 ವರ್ಷಗಳ ಹಿಂದೆ ಬಿ.ಸಿ.ರೋಡ್‌ನ‌ ಪುರಸಭೆ ಕಟ್ಟಡದಲ್ಲಿ ಬುಡಾ ಕಚೇರಿ ಉದ್ಘಾಟನೆಗೊಂಡಿದ್ದರೂ ಪೂರ್ಣ ಪ್ರಮಾಣದ ಕಚೇರಿ ಸ್ಥಳಾಂತರ ಗೊಂಡಿರಲಿಲ್ಲ. ಕಳೆದ ಮಾರ್ಚ್‌ ತಿಂಗಳಲ್ಲಿ ಸರಕಾರ ಬುಡಾಕ್ಕೆ ತನ್ನನ್ನು ಅಧ್ಯಕ್ಷನನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಈ ಕಟ್ಟಡದಲ್ಲೇ ತಾನು ಅಧಿಕಾರ ಸ್ವೀಕರಿಸಿದ್ದೆ. ಪ್ರಸ್ತುತ ಕೋವಿಡ್ ಲಾಕ್‌ಡೌನ್‌ ಬಳಿಕ ಜೂ. 15ರಿಂದ ಪೂರ್ಣ ಪ್ರಮಾಣದ ಕಚೇರಿ ಸ್ಥಳಾಂತರಗೊಂಡಿದೆ.

ಮುಂದಿನ ದಿನಗಳಲ್ಲಿ ಯೋಜನಾ ಪ್ರಾಧಿಕಾರಕ್ಕೆ ಸಂಬಂಧಿಸಿದ ಎಲ್ಲ ಕೆಲಸ ಕಾರ್ಯಗಳು ಕೂಡ ಇದೇ ಕಚೇರಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಬಂಟ್ವಾಳ ಕಸ್ಬಾ, ಬಿ. ಮೂಡ, ಪಾಣೆಮಂಗಳೂರು ಗ್ರಾಮಗಳು ಹಾಗೂ ನರಿಕೊಂಬು, ಅಮಾಡಿ ಗ್ರಾಮಗಳ ಭಾಗಶಃ ವ್ಯಾಪ್ತಿಯನ್ನು ಈ ಕಚೇರಿ ಹೊಂದಿರುತ್ತದೆ ಎಂದರು.

ಸಮಸ್ಯೆಗಳ ಬಗ್ಗೆ ಚರ್ಚೆ
ತಾನು ಹಾಗೂ ಬುಡಾ ಸದಸ್ಯ ಕಾರ್ಯದರ್ಶಿಯವರು ಸಭೆಯಲ್ಲಿ ಭಾಗವಹಿಸಿ ಯೋಜನಾ ಪ್ರಾಧಿಕಾರದಿಂದ ಜನರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಕೂಡ ಚರ್ಚಿಸಿ, ಅದಕ್ಕೂ ಪರಿಹಾರ ಕಲ್ಪಿಸುವ ಭರವಸೆ ಸಿಕ್ಕಿದೆ. ಮುಂದೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಬುಡಾ ಕಾರ್ಯನಿರ್ವಹಿಸಲಿದೆ ಎಂದು ದೇವದಾಸ್‌ ಶೆಟ್ಟಿ ತಿಳಿಸಿದರು.

ಸಿಂಗಲ್‌ ಲೇಔಟ್‌ ಸಮಸ್ಯೆಗೆ ಮುಕ್ತಿ
ಜೂ. 19ರಂದು ಬೆಂಗಳೂರಿನಲ್ಲಿ ಸಚಿವರು ಹಾಗೂ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಭೆ ನಡೆದಿದ್ದು, ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಮೂಲಕ ತುಂಡು ಭೂಮಿಯ ಪರಿವರ್ತನೆ (ಸಿಂಗಲ್‌ ಲೇಔಟ್‌) ಏರಿಕೆಯಾದ ಅಭಿವೃದ್ಧಿ ಶುಲ್ಕವನ್ನು ಕಡಿಮೆ ಮಾಡುವ ಕುರಿತು ಸಂಬಂಧಪಟ್ಟವರ ಗಮನಕ್ಕೆ ತರಲಾಗಿದ್ದು, ಒಂದು ತಿಂಗಳೊಳಗೆ ಅದಕ್ಕೆ ಪರಿಹಾರ ಸಿಗಲಿದೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.