Belthangady: ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಸಂಚಾರ ನಿಯಮ ಉಲ್ಲಂಘನೆ

ಸಂಚಾರ ನಿಯಮ ಉಲ್ಲಂಘನೆ: ಸಂಚಾರ ನಿಯಮ ಉಲ್ಲಂಘನೆ; ಟ್ರಾಫಿಕ್‌ ಜಾಮ್‌, ಅಪಘಾತಕ್ಕೂ ಕಾರಣ ಆಗುತ್ತಿರುವ ಕೆಲವು ಚಾಲಕರ ನಡೆ

Team Udayavani, Sep 13, 2024, 1:04 PM IST

ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಕೆಲವು ಚಾಲಕರ ಬೇಜವಾಬ್ದಾರಿ ವರ್ತನೆ

ಬೆಳ್ತಂಗಡಿ: ಅನೇಕ ಅಪಘಾತಗಳಲ್ಲಿ ತನ್ನದಲ್ಲದ ತಪ್ಪಿಗೆ ದ್ವಿಚಕ್ರ ವಾಹನ ಸವಾರರು, ಕಾರು ಸವಾರರು, ಪಾದಚಾರಿಗಳು ಬಲಿಪಶುಗಳಾಗುವುದುಂಟು. ಈ ರೀತಿ ಆಗಲು ಕೆಲವು ಸಂಚಾರಿ ನಿಯಮಗಳ ಉಲ್ಲಂಘನೆಯೂ ನೇರ ಕಾರಣ ಎಂಬುದಕ್ಕೆ ಸಾರಿಗೆ ಸಹಿತ ಖಾಸಗಿ ಬಸ್‌ ಚಾಲಕರ ಬೇಜವಾಬ್ದಾರಿ ನಡೆಗಳು ಸಾಕ್ಷಿಯಾಗಿದೆ.

ಬೆಳ್ತಂಗಡಿಯಲ್ಲಿ ಚಾರ್ಮಾಡಿಯಿಂದ ಪುಂಜಾಲಕಟ್ಟೆವರೆಗೆ, ಇತ್ತ ಕೊಕ್ಕಡದಿಂದ ಉಜಿರೆವರೆಗೆ, ಗುರುವಾಯನಕೆರೆಯಿಂದ ಮೂಡುಬಿದಿರೆ, ಕಾರ್ಕಳ, ಉಪ್ಪಿನಂಗಡಿ ಸಹಿತ ರಾಜ್ಯ, ರಾಷ್ಟ್ರೀಯ, ಗ್ರಾಮೀಣ ರಸ್ತೆಗಳ ಅಕ್ಕಪಕ್ಕ ಇರುವ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ನಿಲುಗಡೆಗೊಳಿಸುವ ಸರಕಾರಿ ಸಹಿತ ಖಾಸಗಿ ಬಸ್‌ಗಳು ರಸ್ತೆ ಮಧ್ಯೆಯೇ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು, ಇಳಿಸುವ ಮೂಲಕ ನಿರ್ಲಕ್ಷ್ಯದ ಚಾಲನೆಗೆ ಕಾರಣರಾಗಿದ್ದಾರೆ.

ವಿದೇಶಗಳಲ್ಲಿ ಪ್ರಯಾಣಿಕರನ್ನು ಪಿಕ್‌ಅಪ್‌ ಮತ್ತು ಡ್ರಾಪ್‌ ಮಾಡಲು ವ್ಯವಸ್ಥಿತ ಕ್ರಮ ಇದ್ದರೆ ನಮ್ಮ ದೇಶದ ಪಟ್ಟಣಗಳಲ್ಲಿ ಈ ಸೌಲಭ್ಯ ಮಾಡಿದರೂ ಅರೆ ಪಟ್ಟಣ ಭಾಗದಲ್ಲಿ ಇನ್ನೂ ಸುಧಾರಣೆ ಕಂಡಿಲ್ಲ. ಬೆಳ್ತಂಗಡಿ ಸಂತೆಕಟ್ಟೆ, ಉಜಿರೆ ಸಹಿತ ಕೆಲ ಭಾಗಗಳಲ್ಲಿ ಬಸ್‌ ಬೇ ನಿರ್ಮಿಸಲಾಗಿದೆ. ಆದರೆ ಸಾರಿಗೆ ಬಸ್‌ಗಳು ರಸ್ತೆಯಲ್ಲೇ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಏರಿಸುವ ಕಾರ್ಯ ಮಾಡುತ್ತಿದ್ದಾರೆ. ಇದರಿಂದ ಆ್ಯಂಬುಲೆನ್ಸ್‌ ಸಹಿತ, ತುರ್ತು ಸೇವೆಗೆ ತೆರಳುವ ವಾಹನಗಳು, ಮುಂಜಾನೆ ಶಾಲಾ ಕಾಲೇಜಿಗೆ ತೆರಳುವ ಶಿಕ್ಷಕರು, ಇನ್ನಿತರ ರಸ್ತೆ ಸವಾರರು ಬಸ್‌ನ ಹಿಂದೆ ಸಾಲುಗಟ್ಟಿ ನಿಲ್ಲಬೇಕಾಗಿ ಬರುವುದಲ್ಲದೆ ಟ್ರಾಫಿಕ್‌ ಸಮಸ್ಯೆಯೂ ಉಂಟಾಗುತ್ತಿದೆ.

ಇದರಿಂದ ಅಪಘಾತಗಳಿಗೂ ಕಾರಣವಾಗುತ್ತಿದೆ. ಈ ಕುರಿತು ಸಾರಿಗೆ ಇಲಾಖೆಗೆ ಸಾರ್ವಜನಿಕರು ದೂರು ನೀಡಿದರೂ ಕ್ಯಾರೇ ಎನ್ನದ ಸ್ಥಿತಿ ಇದೆ. ಬೆಳ್ತಂಗಡಿ ಸಂಚಾರ ಠಾಣೆ ಪೊಲೀಸರಲ್ಲಿ ಸಾರ್ವಜನಿಕರು ಪ್ರಶ್ನಿಸಿದರೆ ಈ ಕುರಿತು ಕೆಎಸ್‌ಆರ್‌ಟಿಸಿ ಡಿಪೋಗೆ ದೂರು ನೀಡಲಾಗಿದೆ ಎನ್ನುತ್ತಿದ್ದಾರೆ. ಆದರೆ ಸಾಮಾನ್ಯ ಜ್ಞಾನ ಇಲ್ಲದ ಚಾಲಕರು ತಮ್ಮಿಂದ ಇತರರಿಗೆ ತೊಂದರೆ ಆಗುತ್ತಿರುವ ಬಗ್ಗೆ ಯಾವುದೇ ಕಾಳಜಿ ಇಲ್ಲದೆ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದಾರೆ.

ಪರವಾನಿಗೆ ರದ್ದುಗೊಳಿಸಲು ಆಗ್ರಹ
ರಸ್ತೆ ಮಧ್ಯೆ ಬಸ್‌ ಅನ್ನು ಪ್ರಯಾಣಿಕರಿಗೆ ನಿಲುಗಡೆಗೊಳಿಸಿ ಇತರ ವಾಹನ ಸವಾರರಿಗೆ ತೊಂದರೆ ನೀಡುವ ಚಾಲಕರ ಪರವಾನಿಗೆ ರದ್ದುಗೊಳಿಸಬೇಕು ಇಲ್ಲವೇ ದಂಡ ವಿಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮತ್ತೂಂದೆಡೆ ಪರವಾನಿಗೆ ನೀಡುವ ಆರ್‌.ಟಿ.ಒ. ಚಾಲಕರಿಗೆ ಸಾರಿಗೆ ನಿಯಮಗಳನ್ನು ಸಮರ್ಪಕವಾಗಿ ಹೇಳದೆ ಪರವಾನಿಗೆ ನೀಡುವುದರಿಂದಲೂ ಈ ನಡೆಗೆ ಕಾರಣವಾಗಿದೆ ಎಂದು ದೂರಲಾಗುತ್ತಿದೆ.

ಉಜಿರೆಯಲ್ಲಿ ರಸ್ತೆಯಲ್ಲೇ ಪಾರ್ಕಿಂಗ್‌
ಉಜಿರೆ ದ್ವಾರದಿಂದ ಕಾಲೇಜು ರಸ್ತೆಗೆ ಸಾಗುವ ವಿರುದ್ಧ ದಿಕ್ಕಿನಲ್ಲಿ ಹಾಗೂ ಉಜಿರೆಯಿಂದ ಅನುಗ್ರಹ ಶಾಲೆ ವಠಾರದವರೆಗೆ ರಸ್ತೆಯಲ್ಲೇ ಪಾರ್ಕಿಂಗ್‌ ಮಾಡುತ್ತಿರುವುದರಿಂದ ಏಕಮುಖ ಸಂಚಾರದ ರಸ್ತೆಯಂತಾಗಿದೆ. ವಾಹನಗಳನ್ನು ರಸ್ತೆಯಲ್ಲೇ ಪಾರ್ಕಿಂಗ್‌ ಮಾಡಿ ಹೋಗುತ್ತಿರುವುದು ಕಂಡುಬಂದಿದೆ. ಆದರೆ ಸಂಚಾರ ಪೊಲೀಸರು ಕೇವಲ ಹೆಲ್ಮೆಟ್‌, ಸೀಟು ಬೆಲ್ಟ್ ಹಾಕದವರಿಗಷ್ಟೆ ದಂಡ ವಿಧಿಸಿದೆ. ಮಾರ್ಗ ಮಧ್ಯ ವಾಹನ ನಿಲ್ಲಿಸಿ ದುರ್ವರ್ತನೆ ತೋರುವ ಚಾಲಕ ಹಾಗೂ ನಿರ್ವಾಹಕರ ಮೇಲೂ ದಂಡ ವಿಧಿಸಿ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; ಲಕ್ಷಾಂತರ ನಷ್ಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.