![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 14, 2021, 7:50 AM IST
ಸುಳ್ಯ: ಸಂಸ್ಕೃತದಲ್ಲಿ ಸ್ಪಷ್ಟ ಹಾಗೂ ನಿರರ್ಗಳವಾಗಿ ಶ್ಲೋಕಗಳನ್ನು ಪಠಿ ಸುವ ಜಾಲೂÕರು ಗ್ರಾಮದ ಮಾಬಲಡ್ಕ ಸರಮಾ ಭಟ್ ಎಂ. ಅವರು ಚಿಕ್ಕ ವಯಸ್ಸಿ ನಲ್ಲಿಯೇ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ.
ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ 7ರ ಹರೆಯದ ಸರಮಾ ಒಟ್ಟು 40 ನಿತ್ಯ ಪಠಣದ ಶ್ಲೋಕಗಳನ್ನು ಹೇಳುತ್ತಾರೆ. ಕನಕಧಾರ ಸ್ತೋತ್ರ 21 ಚರಣಗಳು, ದೇವ್ಯಾಪರಾಧ ಕ್ಷಮಾಪಣ ಸ್ತೋತ್ರ 12 ಚರಣಗಳು, ಶಿವ ಮಾನಸಪೂಜಾ ಸ್ತೋತ್ರ 20 ಗೆರೆಗಳು ಇವೆ. 10 ಸಂಸ್ಕೃತ ಸುಭಾಷಿತಗಳು, 12 ಮಾಸಗಳ ಹೆಸರು ಸಂಸ್ಕೃತದಲ್ಲಿ, ಪಂಚಾಂಗದ ಪ್ರಕಾರದಲ್ಲಿ ಸಂಸ್ಕೃತದಲ್ಲಿ ಇರುವ 15 ದಿನಗಳ ಹೆಸರು, 7 ದಿನಗಳ ಹೆಸರನ್ನು ಸಂಸ್ಕೃತದಲ್ಲಿ ಸ್ಪಷ್ಟವಾಗಿ, ನಿರರ್ಗಳವಾಗಿ ಪಠಿಸುತ್ತಾರೆ.
ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಅವರ ಸಾಧನೆಯ ಹಿಂದಿನ ಪ್ರೇರಣೆಯಾಗಿದ್ದಾರೆ. ತನ್ನ 2ನೇ ವಯಸ್ಸಿನಿಂದಲೇ ಶ್ಲೋಕಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಬಂದಿರುವ ಸರಮಾ ನಿತ್ಯವೂ ಕರಾಗ್ರೆ ವಸತೇ ಲಕ್ಷಿ$¾à ಪಠಣದೊಂದಿಗೆ ದಿನವನ್ನು ಪ್ರಾರಂಭಿಸುತ್ತ ರಾಮಸ್ಕಂದಂ ಹನೂಮಂತಂನಲ್ಲಿ ಪೂರ್ಣಗೊಳಿಸುತ್ತಾರೆ. ಓದುವ ಮೊದಲು, ಊಟದ ಮೊದಲು, ದೀಪ ಹಚ್ಚುವಾಗ ಹೀಗೆ ದಿನದಲ್ಲಿ ಹಲವು ಬಾರಿ ದೇವರ ನಾಮ ಸ್ಮರಣೆ ಅವರ ನಿತ್ಯದ ರೂಢಿ. ಈಕೆ ಸುರೇಶ್ ಕುಮಾರ್ ಎಂ. ಮತ್ತು ರಮ್ಯಾ ಸುರೇಶ್ ದಂಪತಿಗಳ ಪುತ್ರಿ.
You seem to have an Ad Blocker on.
To continue reading, please turn it off or whitelist Udayavani.