ಹ್ಯಾಂಡ್‌ಪಂಪ್‌ ಪರಿಶೀಲಿಸಿ, ಜಲಸಿರಿ ಯೋಜನೆ ಬಳಸಿ


Team Udayavani, May 19, 2019, 6:00 AM IST

a-9

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ನಿರುಪಯೋಗಿಯಾಗಿರುವ ಹ್ಯಾಂಡ್‌ಪಂಪ್‌ಗ್ಳನ್ನು ಮತ್ತೆ ಪರಿಶೀಲನೆ ನಡೆಸಬೇಕು. ಮರುಬಳಕೆಯ ಅವಕಾಶಗಳ ಕುರಿತು ಗ್ರಾ.ಪಂ.ಗಳಿಗೆ ತತ್‌ಕ್ಷಣ ನಿರ್ದೇಶನ ನೀಡಬೇಕು ಎಂದು ಶಾಸಕ ಸಂಜೀವ ಮಠಂದೂರು ನಿರ್ದೇಶನ ನೀಡಿದ್ದಾರೆ.

ಶನಿವಾರ ಮಿನಿ ವಿಧಾನ ಸೌಧದಲ್ಲಿರುವ ತಹಶೀಲ್ದಾರ್‌ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ನಿರ್ವಹಣೆ ಕುರಿತ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಅವರು ಮಾತನಾಡಿದರು. ಆಪತ್ಬಾಂಧವನೆನಿಸಿದ ಹ್ಯಾಂಡ್‌ಪಂಪ್‌ ಗಳನ್ನು ಪತ್ತೆ ಮಾಡಿ ಅವುಗಳಲ್ಲಿ ನೀರು ಇದ್ದರೆ ಮತ್ತೆ ಬಳಕೆಗೆ ಅವಕಾಶ ಮಾಡಿಕೊಡ ಬೇಕು. ಇದರ ನೀರು ಕುಡಿಯಲು ಸಾಧ್ಯವಿಲ್ಲದಿದ್ದರೂ ಇತರ ಉದ್ದೇಶಗಳಿಗೆ ಬಳಸಬಹುದು. ಈ ನಿಟ್ಟಿನಲ್ಲಿ ತತ್‌ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಲಸಿರಿ ಯೋಜನೆ ಬಳಸಿ
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಬರ ನೀಗಿಸಲು ನದಿ ನೀರನ್ನು ಬಳಕೆ ಮಾಡಿಕೊಳ್ಳಲು ಜಲಸಿರಿ ಯೋಜನೆ ಬಳಸಿಕೊಳ್ಳಬೇಕು. ಈ ಕುರಿತು ಬೇಡಿಕೆ ಸಲ್ಲಿಸುವಂತೆ ಶಾಸಕರು ಜಿ.ಪಂ. ಎಂಜಿನಿಯ ರಿಂಗ್‌ ಇಲಾಖಾಧಿಕಾರಿಗಳಿಗೆ ಶಾಸಕ ಮಠಂದೂರು ಸೂಚಿಸಿದರು.

ತೆರೆದ ಬಾವಿಗಳು ಕಾಣುವುದೇ ಇಲ್ಲ. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಆವಶ್ಯಕತೆ ಪೂರೈಸಲು ಪ್ರಮುಖ ನದಿಗಳಾದ ಕುಮಾರಧಾರಾ ಹಾಗೂ ನೇತ್ರಾವತಿ ನದಿಗಳಲ್ಲಿ ವೆಂಟೆಡ್‌ ಡ್ಯಾಂ ನಿರ್ಮಿಸಿ ಅವುಗಳ ಮುಖಾಂತರ ನೀರನ್ನು ಬಳಸಿಕೊಳ್ಳಲು ‘ಜಲಸಿರಿ ಯೋಜನೆ’ಯಲ್ಲಿ ಜೋಡಿಸಿಕೊಳ್ಳುವುದು ಸೂಕ್ತ ಎಂದು ಶಾಸಕರು ಸಲಹೆ ನೀಡಿದರು.

ಪ್ರತಿಕ್ರಿಯಿಸಿದ ಜಿ.ಪಂ. ಎಂಜಿನಿಯ ರಿಂಗ್‌ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಸತ್ಯೇಂದ್ರ ಸಾಲಿಯಾನ್‌, ನೇತ್ರಾವತಿ, ಕುಮಾರಧಾರಾ ನದಿಗಳ ನೀರನ್ನು ನಗರ ಪ್ರದೇಶಗಳ ಬೇಡಿಕೆ ಪೂರೈಸಲು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದಾಗಿ ಗ್ರಾ.ಪಂ. ವ್ಯಾಪ್ತಿಯ ಬಳಕೆಗೆ ಸಾಧ್ಯತೆ ಕಡಿಮೆ ಎಂದರು.

ಬಂಟ್ವಾಳ ತಾಲೂಕಿನಲ್ಲಿ ಪ್ರಮುಖ ನದಿಗಳ ನೀರನ್ನು ಗ್ರಾಮೀಣ ಪ್ರದೇಶಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಅದೇ ರೀತಿ ಪುತ್ತೂರಿನಲ್ಲಿಯೂ ಕಾರ್ಯಗತವಾಗ ಬೇಕು. ಇದರ ಬಗ್ಗೆ ಸಂಬಂಧಪಟ್ಟ ಅಧಿ ಕಾರಿಗಳ ಮುಖಾಂತರ ಚರ್ಚಿಸಿ ಕ್ರಮ ಕೈಗೊಳ್ಳುವುದು ಆವಶ್ಯಕ ಎಂದರು.

ಸಮಸ್ಯೆ ಬಗೆಹರಿಸಿ
ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ನ ಸಮಸ್ಯೆಯಿದೆ. ಕೆಲವು ಕಡೆಗಳಲ್ಲಿ ತಾಂತ್ರಿಕ ತೊಂದರೆಗಳು ಇದೆ. ಈ ಕುರಿತು ಗ್ರಾ.ಪಂ. ಅಧಿಕಾರಿಗಳು ಹಾಗೂ ಅಧ್ಯಕ್ಷರೊಂದಿಗೆ ಚರ್ಚಿಸಿ ಪರಿಹರಿಸಿ ಕೊಳ್ಳಬೇಕು. ಒಳಮೊಗ್ರು ಸೇರಿದಂತೆ ಕೆಲವು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾಕಷ್ಟು ದೂರು ಬಂದಿದೆ. ಆವಶ್ಯವಿದ್ದಲ್ಲಿ ಪ್ರತ್ಯೇಕ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಿಕೊಳ್ಳು ವಂತೆ ಮೆಸ್ಕಾಂ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಕುಡಿಯುವ ನೀರಿನ ಪಂಪ್‌ಸೆಟ್‌ಗಳಿಗೆ ಪ್ರತ್ಯೇಕ ಟಿಸಿ ಅಳವಡಿಸುವುದು ಹೆಚ್ಚು ಸೂಕ್ತ ಎಂದು ಮೆಸ್ಕಾಂ ಅಧಿಕಾರಿ ರಾಮಚಂದ್ರ ತಿಳಿಸಿದರು. ಇನ್ನು ಕೆಲವೇ ದಿನಗಳಲ್ಲೇ ಮಳೆ ಬಂದರೆ ಒತ್ತಡ ಕಡಿಮೆಯಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿಯೂ ಕುಡಿಯುವ ನೀರಿಗೆ ಆದ್ಯತೆ ನೀಡಿ 24/7 ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಶಾಸಕರು ಸೂಚಿಸಿದರು.

ತಿಂಗಳಿಗೆ ಬೇಕಾದಷ್ಟು ನೀರಿದೆ
ನಗರಸಭೆ ಅಧಿಕಾರಿಗಳೊಂದಿಗೂ ಇದೇ ಸಂದರ್ಭ ಶಾಸಕರು ಸಭೆ ನಡೆಸಿದರು. ನಗರಸಭಾ ವ್ಯಾಪ್ತಿಗೆ ಇನ್ನೂ ಒಂದು ತಿಂಗಳಿಗೆ ಬೇಕಾದಷ್ಟು ನೀರು ಉಪ್ಪಿನಂಗಡಿಯ ನೆಕ್ಕಿಲಾಡಿ ನಗರಸಭಾ ಆಣೆಕಟ್ಟಿನಲ್ಲಿ ಸಂಗ್ರಹವಿದೆ. ಕೆಲ ದಿನಗಳ ಹಿಂದೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಬಂದಿರುವುದರಿಂದ ನೀರಿನ ಪ್ರಮಾಣ ಹೆಚ್ಚಾಗಿದೆ. ನೀರು ಆಣೆಕಟ್ಟಿನಲ್ಲಿ ಭರ್ತಿಯಾಗಿ ಹೊರ ಹೋಗುತ್ತಿದೆ ಎಂದರು.

7 ಕೊಳವೆಬಾವಿ ಕೊರೆಸಲಾಗಿದೆ
ಉಪ್ಪಿನಂಗಡಿಯಿಂದ ನಗರಕ್ಕೆ ನೀರು ಸರಬರಾಜಿಗೆ ವಿದ್ಯುತ್‌ಗೆ ಎಕ್ಸ್‌ಪ್ರೆಸ್‌ ಫೀಡರ್‌ ಇದೆ. ಅಲ್ಲಿಗೆ 33 ಕೆ.ವಿ. ವಿದ್ಯುತ್‌ನ ಆವಶ್ಯಕತೆಯಿದೆ. ನಗರದ ಐದು ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 10 ಕೊಳವೆ ಬಾವಿ ಮಂಜೂರಾಗಿದ್ದು, ಅವುಗಳಲ್ಲಿ 7 ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಉಳಿದ ಮೂರನ್ನು ಆವಶ್ಯಕತೆಗೆ ಅನುಗುಣವಾಗಿ ಬಳಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ತಹಶೀಲ್ದಾರ್‌ ಡಾ| ಪ್ರದೀಪ್‌ ಕುಮಾರ್‌, ಜಿ.ಪಂ. ಎಂಜಿನಿಯರಿಂಗ್‌ ಇಲಾಖೆಯ ಸಹಾಯಕ ಎಂಜಿನಿಯರ್‌ ಭರತ್‌, ಜೂನಿಯರ್‌ ಎಂಜಿನಿಯರ್‌ ಗೋವರ್ಧನ್‌ ಹಾಗೂ ಸಂದೀಪ್‌, ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ನವೀನ್‌ ಭಂಡಾರಿ, ಮೆಸ್ಕಾಂ ಅಧಿಕಾರಿ ರಾಮಚಂದ್ರ, ಶಾಸಕರ ಆಪ್ತ ಸಹಾಯಕ ರತ್ನಪ್ರಸಾದ್‌ ಉಪಸ್ಥಿತರಿದ್ದರು.

ರಾಜ ಕಾಲುವೆ ಪತ್ತೆ ಹಚ್ಚಿ
ನಗರದಲ್ಲಿರುವ ಎಲ್ಲ ರಾಜ ಕಾಲುವೆಗಳನ್ನು ಪತ್ತೆ ಮಾಡಬೇಕು. ಅವುಗಳನ್ನು ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿ ನೀರು ಹರಿದು ಹೋಗಲು ತೊಂದರೆಯಾಗುತ್ತಿದ್ದರೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಮತ್ತು ಅಂತಹ ಕಟ್ಟಡಗಳ ಪರವಾನಿಗೆ ರದ್ದುಗೊಳಿಸಬೇಕು. ದೇವಾಲಯದ ಪಕ್ಕದ ತಡೆಗೋಡೆ ಏರಿಸುವುದು, ಹಾಗೂ ಭವಿಷ್ಯದ ದೃಷ್ಟಿಯಿಂದ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ತ್ಯಾಜ್ಯ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ನಗರಸಭಾ ಅಧಿಕಾರಿಗಳಾದ ಅರುಣ್‌ ಹಾಗೂ ವಸಂತ್‌, ಸದಸ್ಯ ಅಶೋಕ್‌ ಶೆಣೈ ಸಭೆಯಲ್ಲಿದ್ದರು.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.