ಪರವಾನಿಗೆ ಇಲ್ಲದ ಕ್ಲಿನಿಕ್ಗೆ ಬೀಗ ಜಡಿದ ಅಧಿಕಾರಿಗಳು
Team Udayavani, Jun 30, 2022, 1:24 AM IST
ಅರಂತೋಡು : ಪರವಾನಿಗೆ ಇಲ್ಲದೆ ಕಲ್ಲುಗುಂಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಮಾಂಬುಳಿ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆ ಮುಚ್ಚಿಸಿದ ಘಟನೆ ನಡೆದಿದೆ.
ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಲಾಗಿದೆ. ಕ್ಲಿನಿಕ್ನ ವಸ್ತುನ್ನು ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ತಿ ಮ್ಯಾಥ್ಯೂ ಪರವಾನಿಗೆ ಇಲ್ಲದೆ ಮಾಂಬುಳಿ ಕ್ಲಿನಿಕ್ ನಡೆಸುತ್ತಿದ್ದು, ಈ ಕುರಿತು ಆರೋಗ್ಯ ಇಲಾಖೆಗೆ ದೂರು ಹೋಗಿತ್ತು. ಬಳಿಕ ಆರೋಗ್ಯ ಇಲಾಖೆ ಕಡೆಯಿಂದ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಕರ್ನಾಟಕ ಆಯುರ್ವೇದ, ಯುವಾನಿ ವೈದ್ಯ ಮಂಡಳಿಯಿಂದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಲು ಜಿÇÉಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ 3 ಬಾರಿ ನೋಟಿಸ್ ನೀಡಲಾಗಿತ್ತು.
ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಕೆಪಿಎಂಇ ನೋಂದಣಿ ಇಲ್ಲದೆ ಕ್ಲಿನಿಕ್ ನಡೆಸುವುದು ಕೆಪಿಎಂಇ ಕಾಯ್ದೆ 19ರ ಪ್ರಕಾರ ಅಕ್ರಮವಾಗುತ್ತದೆ. ಈ ಬಗ್ಗೆ ಮಾಹಿತಿ ಪಡೆದ ಜಿÇÉಾ ಕು.ಕ. ಅಧಿಕಾರಿಗಳು, ಕೆಪಿಎಂಇ ನೋಡಲ್ ಅಧಿಕಾರಿ ಡಾ| ದೀಪಾ ಪ್ರಭು ನೇತೃತ್ವದ ತಂಡ ಕ್ಲಿನಿಕ್ ಮುಚ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.