‘ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಕ್ಷಣಗಣನೆ’


Team Udayavani, Apr 21, 2018, 2:07 PM IST

21-April-8.jpg

ಸುಳ್ಯ: ಅಭಿವೃದ್ಧಿ ವಿರೋಧಿ ಧೋರಣೆಯ ಕಾಂಗ್ರೆಸ್‌ ಪಕ್ಷ ದೇಶದ ಹಿತಾಸಕ್ತಿಗೆ ಮಾರಕ. ಈ ಚುನಾವಣೆ ಮೂಲಕ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಕ್ಷಣಗಣನೆ ಆರಂಭಗೊಂಡಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ನಗರದ ಪುರಭವನದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಎಸ್‌.ಅಂಗಾರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪ್ರಯುಕ್ತ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರಂತಹ ಮುಖ್ಯಮಂತ್ರಿಗಳನ್ನು ಎಂದೂ ಕಂಡಿಲ್ಲ. ಟಿಪ್ಪು ಜಯಂತಿ ಮೂಲಕ ಹಿಂದೂ- ಮುಸ್ಲಲ್ಮಾನರ ನಡುವೆ ದ್ವೇಷ ಸೃಷ್ಟಿ, ರಾಷ್ಟ್ರ ವಿರೋಧಿ ಕೃತ್ಯದಲ್ಲಿ ತೊಡಗಿದ್ದವರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂತೆಗೆತ, ಹಿಂದೂ ಕಾರ್ಯಕರ್ತರ ಸಾಲು-ಸಾಲು ಹತ್ಯೆಗಳು ಸಿದ್ದರಾಮಯ್ಯ ಅವರ ಬಹು ಸಂಖ್ಯಾಕರ ಮೇಲಿನ ದಬ್ಟಾಳಿಕೆಗೆ ಸಾಕ್ಷಿ ಎಂದರು.

ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಸಿದ್ದರಾಮಯ್ಯ, ರಮಾನಾಥ ರೈ ಅವರದ್ದು ನಕಲಿ ಹಿಂದುತ್ವ. ಅಂತಹವರು ನಮಗೆ ಬೇಕಿಲ್ಲ. ಹಾಗಾಗಿ ಕಾಂಗ್ರೆಸ್‌ ಪಕ್ಷವನ್ನು ತೊಲಗಿಸಿ ಜಾತಿ, ಧರ್ಮ ಮೀರಿದ ರಾಷ್ಟ್ರೀಯತೆಯ ಚಿಂತೆನೆಯುಳ್ಳ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಶಾಸಕ ಎಸ್‌.ಅಂಗಾರ ಮಾತನಾಡಿ, ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಜನರಿಗೆ ತಿಳಿದಿದೆ. ಆದರೂ ಕಾಂಗ್ರೆಸ್‌ ಅಪಪ್ರಚಾರದ ರಾಜಕಾರಣ ಮಾಡುತ್ತಿದೆ. ನನ್ನನ್ನು ಗೆಲ್ಲಿಸಿದ್ದು ಕಾಂಗ್ರೆಸ್‌ ಪಕ್ಷ ಅಲ್ಲ. ಅದು ಕ್ಷೇತ್ರದ ಪ್ರಜ್ಞಾವಂತ ಮತದಾರರು. ಅಪಪ್ರಚಾರಕ್ಕೆ ಕಿವಿಗೊಡುವ ಅಗತ್ಯ ಇಲ್ಲ ಎಂದರು.

ವಾಗ್ಮಿ ಆದರ್ಶ ಗೋಖಲೆ ಮಾತನಾಡಿ, ಧರ್ಮ, ಮಹಿಳೆ, ಗೋವಿನ ರಕ್ಷಣೆಯಿಂದ ಉತ್ತಮ ಸಮಾಜ ನಿರ್ಮಾಣ ಆಗುತ್ತದೆ. ಅಂತಹ ರಕ್ಷಕರನ್ನು ನಾವೆಲ್ಲರೂ ಬೆಂಬಲಿಸಬೇಕು ಎಂದು ಹೇಳಿದರು.

ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕೇರಳ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್‌, ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ ಸುಧಾಮ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ ವಳಲಂಬೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎಪಿಎಂಸಿ ಅಧ್ಯಕ್ಷ ದೇರಣ್ಣ ಗೌಡ, ನಗರ ಪಂಚಾಯತ್‌ ಅಧ್ಯಕ್ಷೆ ಶೀಲಾವತಿ ಮಾಧವ, ಎನ್‌.ಎ. ರಾಮಚಂದ್ರ, ಕಿಶೋರ್‌ ಶಿರಾಡಿ, ಜಿ.ಪಂ. ಸದಸ್ಯರಾದ ಪ್ರಮೀಳಾ ಜನಾರ್ದನ, ಪುಷ್ಪಾವತಿ ಬಾಳಿಲ, ಎಸ್‌.ಎನ್‌. ಮನ್ಮಥ, ಹರೀಶ್‌ ಕಂಜಿಪಿಲಿ ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ವಿಧಾನಸಭಾ ಕ್ಷೇತ್ರ ಚುನಾವಣ ಉಸ್ತುವಾರಿ ಎ.ವಿ. ತೀರ್ಥರಾಮ ಸ್ವಾಗತಿಸಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋಧ ಶೆಟ್ಟಿ ಮೇನಾಲ ವಂದಿಸಿದರು. ಜಿ.ಪಂ. ಮಾಜಿ ಸದಸ್ಯ ವೆಂಕಟ ದಂಬೆಕೋಡಿ ನಿರೂಪಿಸಿದರು. ಮಾಧ್ಯಮ ಪ್ರಮುಖ್‌ ಕೇಶವ ಮುಳಿಯ ಸಹಕರಿಸಿದರು.

ಆಕರ್ಷಕ ಮೆರವಣಿಗೆ
ಬೆಳಗ್ಗೆ ನಗರದ ಶ್ರೀಹರಿ ಕಾಂಪ್ಲೆಕ್ಸ್‌ ನಲ್ಲಿನ ಬಿಜೆಪಿ ಚುನಾವಣಾ ಪ್ರಚಾರ ಕಚೇರಿ ಬಳಿಯಿಂದ ಸಾವಿರಾರು ಕಾರ್ಯಕರ್ತರ ಉಪಸ್ಥಿತಿಯಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಧಾರ್ಮಿಕ ಕೇಂದ್ರಕ್ಕೆ ಭೇಟಿ
ನಾಮಪತ್ರಕ್ಕೆ ಸಲ್ಲಿಕೆ ಹಿನ್ನೆಲೆಯಲ್ಲಿ ಶಾಸಕ ಅಂಗಾರ ಅವರು ಬೆಳಗ್ಗೆ ಹೇಮಳದ ನಾಗಬ್ರಹ್ಮ ದೇವಸ್ಥಾನ, ನಗರದ ಶ್ರೀ ಚೆನ್ನಕೇಶವ ದೇವಾಲಯ, ಕಾಯರ್ ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನ, ಶ್ರೀರಾಮ ಭಜನ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಪ್ರಕಾಶ್‌ ಹೆಗ್ಡೆ ಆಗಮನ
ಕೆಲ ತಿಂಗಳ ಹಿಂದೆ ನಗರದಲ್ಲಿ ನಡೆದ ವಾಹನ ಅವಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು, ಇದೀಗ ಚೇತರಿಸಿಕೊಂಡಿರುವ ನಗರ ಪಂಚಾಯತ್‌ ಮಾಜಿ ಅಧ್ಯಕ್ಷ ಪ್ರಕಾಶ್‌ ಹೆಗ್ಡೆ ಅವರು ಪುರಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ ವೇದಿಕೆಯಲ್ಲಿ ಅತಿಥಿಯಾಗಿ ಭಾಗವಹಿಸಿ ಗಮನ ಸೆಳೆದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.