![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 24, 2022, 12:10 AM IST
ಬಂಟ್ವಾಳ: ಲೊರೆಟ್ಟೋಪದವಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಪಡಿಸಿದ್ದಾರೆ.
ಪಂಜಿಕಲ್ಲು ಗ್ರಾಮದ ನಿವಾಸಿ ಪೂವನಬೆಟ್ಟು ನಿವಾಸಿ ರಾಜೇಶ್ ಪೂಜಾರಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ.
ಬಂಟ್ವಾಳ ನಗರ ಠಾಣಾ ಪಿಎಸ್ಐ ಅವಿನಾಶ್ ಗೌಡ ಗಸ್ತು ತಿರುಗುತ್ತಿದ್ದ ವೇಳೆಗೆ ಬಂದ ಮಾಹಿತಿಯಂತೆ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
350 ಎಂಎಲ್ನ ಚಿಲ್ಲರೆ ಮಾರಾಟ ಮಾಡುವ 8 ಪಿಎಂ ಬಾಟಲಿ, 750 ಎಂಎಲ್ ಮದ್ಯ, 200 ರೂ. ನಗದು ವಶಕ್ಕೆ ಪಡೆದಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಮಂಜೂರಿನಲ್ಲಿ ಓರ್ವ ವಶ
ಮಂಗಳೂರು: ವಾಮಂಜೂರಿನಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪೂವಪ್ಪ ಶೆಟ್ಟಿ(68)ಯನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಸ್ಥಳಕ್ಕೆ ತೆರಳಿದಾಗ ಅಲ್ಲಿದ್ದ ಕೆಲವು ಮಂದಿ ಓಡಿ ಹೋಗಿದ್ದಾರೆ. ಪೂವಪ್ಪ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದು ಆತ ಗಂಜಿ ಊಟ ತಯಾರಿಸಿ ಮಾರಾಟ ಮಾಡುತ್ತಿರುವ ಶೆಡ್ನಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ. ಆತನ ಬಳಿ ಇದ್ದ 90 ಎಂಎಲ್ ಪ್ರಮಾಣದ ಒಟ್ಟು 1,620 ರೂ. ಮೌಲ್ಯದ 45 ವಿಸ್ಕಿ ಟೆಟ್ರಾ ಪ್ಯಾಕೆಟ್ ಹಾಗೂ 200 ರೂ. ನಗದನ್ನು ಪೊಲೀಸರು ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.