ಮೀನಿನ ತ್ಯಾಜ್ಯ ನೀರಲ್ಲೇ ನಳನಳಿಸುವ ಗಿಡಗಳು!

ಬೆಂಗಳೂರಿನಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಕೃಷಿ ಪ್ರೀತಿ

Team Udayavani, Dec 30, 2020, 5:42 AM IST

ಮೀನಿನ ತ್ಯಾಜ್ಯ ನೀರಲ್ಲೇ ನಳನಳಿಸುವ ಗಿಡಗಳು!

ಪುತ್ತೂರು: ಮೀನಿಗೆ ಆಹಾರ ಕೊಟ್ಟರೆ, ಕೃಷಿ ನಳನಳಿಸಿ ಇಬ್ಬಗೆಯಲ್ಲೂ ಆದಾಯ ಕೈ ಸೇರಬಹುದು. ಹೇಗೆಂದು ತಿಳಿಯಬೇಕಿದ್ದರೆ ಬೆಂಗಳೂರಿನಲ್ಲಿ ಆಧುನಿಕ ಪದ್ಧತಿಯ “ಅಕ್ವಾಪೋನಿಕ್ಸ್‌’ ಕೃಷಿಯಲ್ಲಿ ತೊಡಗಿರುವ ಸುಳ್ಯದ ಪೆರುವಾಜೆ ಗ್ರಾಮದ ಕಾನಾವಿನ ಸಾಫ್ಟ್ವೇರ್‌ ಎಂಜಿನಿಯರ್‌ ದಂಪತಿಯ ಸಾವಯವ ಕೃಷಿ ಕ್ಷೇತ್ರಕ್ಕೆ ಭೇಟಿ ನೀಡಬೇಕು. ಕಾನಾವು ತಿರುಮಲೇಶ್ವರ ಭಟ್‌-ಅನಿತಾ ಭಟ್‌ ದಂಪತಿಯ ಪುತ್ರ ಕಾನಾವು ನರಸಿಂಹ ತೇಜಸ್ವಿ ಮತ್ತು ಪತ್ನಿ ಶ್ವೇತಾ ಕಾನಾವು ಈ ಪ್ರಯೋಗಶೀಲ ಸಾಧಕರು.

ನಳನಳಿಸುತ್ತಿವೆ 5,800 ಗಿಡಗಳು
ಅಮೆರಿಕದ ಉದ್ಯೋಗ ತೊರೆದು 2015ರಲ್ಲಿ ಬೆಂಗಳೂರಿಗೆ ಆಗಮಿಸಿದ ತೇಜಸ್ವಿ ದಂಪತಿ ಕನಕಪುರ ರಸ್ತೆಯ ಎಡುಮಡು ಹಾರೋಹಳ್ಳಿ ಹತ್ತಿರ 3,000 ಚದರ ಅಡಿ ವಿಸ್ತೀರ್ಣದಲ್ಲಿ “ಕಾನಾವು ಜಲಜಶ್ರೀ ಫಾಮ್ಸ್‌ì ಅಕ್ವಾಫೋನಿಕ್ಸ್‌’ ಕೃಷಿ ಆರಂಭಿಸಿದರು. ಇಲ್ಲಿ 1,200 ಮೀನುಗಳನ್ನು ಮೂರು ತೊಟ್ಟಿಗಳಲ್ಲಿ ಸಾಕುತ್ತಿದ್ದಾರೆ.

ಅವುಗಳ ತ್ಯಾಜ್ಯ ಕೊಳವೆಯ ಮಾದರಿಯೊಳಗೆ ಹರಿ ಯುತ್ತ¤ ಗಿಡಗಳಿಗೆ ಆಹಾರವಾಗುತ್ತದೆ ಕೊಳವೆಯೊಳಗೇ ಗಿಡಗಳನ್ನು ಬೆಳೆಯಲಾಗುತ್ತಿದೆ. ಗಿಡವು ಅಗತ್ಯವಿರುವ ಆಹಾರವನ್ನು  ಹೀರಿದ ಬಳಿಕ ನೀರು ಮತ್ತೆ ಮೀನಿನ ತೊಟ್ಟಿಯನ್ನು ಸೇರುತ್ತದೆ. ಈ ಪ್ರಕ್ರಿಯೆ ನಿರಂತರವಾಗಿರುವ ಕಾರಣ ಗಿಡಗಳ ಬೆಳವಣಿಗೆ ಸಾದಾ ಕೃಷಿಗಿಂತ ಹೆಚ್ಚು ವೇಗವಾಗಿರುತ್ತದೆ. ಇದು ಸಂಪೂರ್ಣ ಸಾವಯವ ಕೃಷಿ ಎನ್ನುತ್ತಾರೆ ನರಸಿಂಹ ತೇಜಸ್ವಿ.

26 ಕಿ.ಮೀ. ಪಯಣ
ವಾಸ ಸ್ಥಳದಿಂದ 26 ಕಿ.ಮೀ. ದೂರದಲ್ಲಿ ಈ ಫಾಮ್ಸ್‌ì ಇದೆ. ನರಸಿಂಹ ತೇಜಸ್ವಿ ಸಾಫ್ಟ್ವೇರ್‌ ಉದ್ಯೋಗಿ. ಪತ್ನಿ ಶ್ವೇತಾ ಉದ್ಯೋಗ ತೊರೆದು ಕೃಷಿಯಲ್ಲಿ ತೊಡಗಿದ್ದಾರೆ. ಎರಡು ದಿನಗಳಿಗೊಮ್ಮೆ ಫಾಮ್ಸ್‌ìಗೆ ತೆರಳಿ ಕೃಷಿಯನ್ನು ಗಮನಿಸುತ್ತಾರೆ. ಓರ್ವ ಸಿಬಂದಿಯನ್ನು ನಿಯೋಜಿಸಿದ್ದಾರೆ. ಭವಿಷ್ಯದಲ್ಲಿ ಈ ಕೃಷಿಯನ್ನು ವಿಸ್ತರಿಸುವ ಕನಸು ಹೊಂದಿದ್ದಾರೆ.

ದಿನಬಳಕೆಯ ತರಕಾರಿಗಳನ್ನು ಮನೆಯ ತಾರಸಿಯಲ್ಲಿ ಬೆಳೆಯುತ್ತಿದ್ದ ಈ ದಂಪತಿ, ಹೊಸ ಕೃಷಿಯ ಅನ್ವೇಷಣೆಯಲ್ಲಿ ತೊಡಗಿದಾಗ ಅಕ್ವಾಫೋನಿಕ್ಸ್‌ ಕೃಷಿ ಪದ್ಧತಿಯ ಮಾಹಿತಿ ದೊರೆಯಿತು. ಗ್ರೋ ಅಕ್ವಾಫೋನಿಕ್ಸ್‌ನ ಸತ್ಯನಾರಾಯಣ ಸಹಕಾರ ನೀಡಿದರು. ತರಬೇತಿ ಕಾರ್ಯಾಗಾರಗಳಲ್ಲಿ ಮಾಹಿತಿ ಪಡೆದುಕೊಂಡರು.

ಮಣ್ಣಿನ ಸ್ಪರ್ಶವಿಲ್ಲ
ಈ ಕೃಷಿಯಲ್ಲಿ ಮಣ್ಣಿನ ಸಂಪರ್ಕವೇ ಇಲ್ಲ. ಮೀನು ಸಾಕಣೆಯೇ ಮುಖ್ಯ ಭಾಗ. ಮೀನಿಗಷ್ಟೇ ಆಹಾರ ಕೊಟ್ಟರಾಯಿತು. ಅವುಗಳ ವಿಸರ್ಜನೆ ಬೆಳೆಗೆ ಆಹಾರ. ಬ್ಯಾಕ್ಟೀರಿಯ ಬಳಸಿ ಅಮೋನಿಯಾವನ್ನು ಬೆಳೆಗೆ ಬೇಕಾದ ರೂಪಕ್ಕೆ ಶೋಧಿಸಿ ನೀಡಲಾಗುತ್ತದೆ. ಮನೆಯ ತಾರಸಿ ಮೇಲೂ ಈ ಕೃಷಿ ಮಾಡಬಹುದು. ಆದಾಯ ಗಳಿಕೆ ಉದ್ದೇಶವಿದ್ದರೆ ವಿಸ್ತೃತ ಜಾಗದಲ್ಲಿ ಸೂಕ್ತ.

ಎರಡು ರೀತಿಯ ಆದಾಯ
ಇಲ್ಲಿ ಮೀನು ಮತ್ತು ಕೃಷಿಯಿಂದ ಆದಾಯ ದೊರೆಯುತ್ತದೆ. ಆರು ತಿಂಗಳಿಗೊಮ್ಮೆ ಅಕ್ವೇರಿಯಂ ಮೀನು (ಯಾವುದೇ ಮೀನು) ಮಾರಾಟ ಸಾಧ್ಯವಾಗುತ್ತದೆ. ಬೆಳೆಯುವ ಗಿಡವು ಫಸಲು ಕೊಡುವ ಕಾಲಮಾನ ಆಧರಿಸಿ ಆದಾಯ ಸಿಗುತ್ತದೆ. ಆದಾಯದ ದೃಷ್ಟಿಯಿಂದ ಒನಿಯನ್‌ ಚೈಪ್ಸ್‌, ಬೊಕ್‌ ಚಾಯ್‌ ಮುಖ್ಯ ಕೃಷಿ. ಇದಕ್ಕೆ ಸ್ಥಳೀಯ ಮತ್ತು ವಿದೇಶಗಳ ಮಾರುಕಟ್ಟೆಗಳಲ್ಲಿ ಬೇಡಿಕೆಯಿದೆ. ಟೊಮೊಟೋ, ಪುದಿನ ಮೊದಲಾದವುಗಳನ್ನು ಬೆಳಸಲಾಗುತ್ತಿದೆ.

ನಮ್ಮದು ಕೃಷಿ ಕುಟುಂಬ. ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿರುವ ಮಗ ಮತ್ತು ಸೊಸೆ ಬೆಂಗಳೂರಿನಲ್ಲಿ ಅಕ್ವಾಫೋನಿಕ್ಸ್‌ ಕೃಷಿ ಮೂಲಕ ಯಶಸ್ಸು ಕಂಡುಕೊಂಡಿದ್ದಾರೆ. ಊರಲ್ಲೂ ಅನುಷ್ಠಾನಿಸುವ ಇರಾದೆ ಹೊಂದಿದ್ದಾರೆ. ಅದಕ್ಕೆ ನಮ್ಮ ಪೂರ್ಣ ಬೆಂಬಲ ಇದೆ. – ತಿರುಮಲೇಶ್ವರ ಭಟ್‌ ಕಾನಾವು ನರಸಿಂಹ ತೇಜಸ್ವಿ ಅವರ ತಂದೆ

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.