![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 26, 2023, 11:54 PM IST
ಬೆಳ್ತಂಗಡಿ: ಲಾರಿ ಹಾಗೂ ಬೈಕಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕನಿಗೆ ಬೆಳ್ತಂಗಡಿ ಜೆಎಂಎಫ್ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಆರೋಪಿಗೆ 2 ವರ್ಷ ಜೈಲು ಶಿಕ್ಷೆ, 1 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಘಟನೆಯು 2022ರ ಜ.17ರಂದು ಕುವೆಟ್ಟು ಗ್ರಾಮದ ಮದ್ದಡ್ಕ ಬಳಿ ಈಚರ್ ಲಾರಿಯು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮಿಸ್ಬಾವುದ್ದೀನ್ ಹಾಗೂ ಸಹಸವಾರ ಅಸಾ#ನ್ ಅವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.
ಈಚರ್ ಲಾರಿ ಚಾಲಕ ಮಹಮ್ಮದ್ ಸಿನಾನ್ ವಿರುದ್ಧ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ನೇತೃತ್ವದಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಲಾರಿ ಚಾಲಕ ಆರೋಪಿ ಎಂದು ಸಾಬೀತುಪಡಿಸಿ ಶಿಕ್ಷೆ ವಿಧಿಸಿದೆ.
You seem to have an Ad Blocker on.
To continue reading, please turn it off or whitelist Udayavani.