ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಯಂತ್ರಣ


Team Udayavani, Jul 9, 2021, 5:00 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಯಂತ್ರಣ

ಬಂಟ್ವಾಳ: ಕೋವಿಡ್‌ ಆತಂಕದ ಮಧ್ಯೆಯೂ ಡೆಂಗ್ಯೂ- ಮಲೇ ರಿಯಾ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಇಳಿದಿರುವುದು ಸಮಾಧಾನಕರ ವಿಚಾರ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಈ ವರ್ಷ ಜೂನ್‌ ಅಂತ್ಯಕ್ಕೆ ಜಿಲ್ಲೆಯಲ್ಲಿ 127 ಡೆಂಗ್ಯೂಹಾಗೂ 356 ಮಲೇರಿಯಾ ಪ್ರಕರಣಗಳು ಪತ್ತೆಯಾಗಿದೆ.

ರಾಜ್ಯದಲ್ಲಿ ದ.ಕ.ಜಿಲ್ಲೆಯಲ್ಲೇ ಹೆಚ್ಚಿನ ಮಲೇರಿಯಾ ಪ್ರಕರಣಗಳು ದಾಖ ಲಾಗುತ್ತಿದ್ದು, ಆರೋಗ್ಯ ಇಲಾಖೆಯ ಅಂಕಿಅಂಶವನ್ನು ಗಮನಿಸುವಾಗ ಇಡೀ ಜಿಲ್ಲೆಯಲ್ಲಿ ಮಂಗಳೂರು ನಗ ರವೇ ಮಲೇರಿಯಾಕ್ಕೆ ಹಾಟ್‌ಸ್ಪಾಟ್‌ ಎನಿಸಿಕೊಂಡಿದೆ. ಅಂದರೆ ಈ ವರ್ಷ ಪತ್ತೆಯಾದ ಜಿಲ್ಲೆಯ ಒಟ್ಟು 356 ಮಲೇ ರಿಯಾ ಪ್ರಕರಣಗಳಲ್ಲಿ 329 ಪ್ರಕರ ಣಗಳು ಮನಪಾ ವ್ಯಾಪ್ತಿಯಲ್ಲೇ ಪತ್ತೆಯಾಗಿವೆ. ಈ ವರ್ಷ ಜಿಲ್ಲೆಯಲ್ಲಿ ಡೆಂಗ್ಯೂ ಬಂಟ್ವಾಳದಲ್ಲೇ ಹೆಚ್ಚು ಪತ್ತೆ ಯಾಗಿದೆ.

ಪ್ರಕರಣಗಳ ಸಂಖ್ಯೆ ಇಳಿಕೆ:

ಕಳೆದ 4 ವರ್ಷಗಳ ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳನ್ನು ಗಮನಿಸಿದರೆ ಈ ವರ್ಷ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. 2017 ರಲ್ಲಿ 136(ಡೆಂಗ್ಯೂ), 4,741 (ಮಲೇರಿಯಾ), 2018ರಲ್ಲಿ 584 (ಡೆಂಗ್ಯೂ), 3,871(ಮಲೇರಿಯಾ), 2019ರಲ್ಲಿ 1,539(ಡೆಂಗ್ಯೂ), 2,797 (ಮಲೇರಿಯಾ), 2020ರಲ್ಲಿ 239 (ಡೆಂಗ್ಯೂ), 1,397(ಮಲೇರಿಯಾ), 2021(ಜೂನ್‌ವರೆಗೆ) 127(ಡೆಂಗ್ಯೂ), 356(ಮಲೇರಿಯಾ) ಪ್ರಕರಣಗಳು ಪತ್ತೆಯಾಗಿವೆ. ಡೆಂಗ್ಯೂವಿನಿಂದ 2019ರಲ್ಲಿ 4 ಮಂದಿ ಹಾಗೂ 2020ರಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷ ಈತನಕ ಸಾವಿನ ಪ್ರಕರಣ ದಾಖಲಾಗಿಲ್ಲ.

ತಾಲೂಕುವಾರು ವಿವರ:

ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಮಲೇರಿಯಾ ಪ್ರಕರಣಗಳಿದ್ದು, 2021ರ ಜೂನ್‌ 30ರ ವರೆಗೆ ಮನಪಾ 10 ಡೆಂಗ್ಯೂ, 329 ಮಲೇರಿಯಾ, ಮಂಗಳೂರು ತಾ|(ಮನಪಾ ಹೊರತು) 15 ಡೆಂಗ್ಯೂ, 13 ಮಲೇರಿಯಾ, ಬಂಟ್ವಾಳ 38 ಡೆಂಗ್ಯೂ, 6 ಮಲೇರಿಯಾ, ಪುತ್ತೂರು 28 ಡೆಂಗ್ಯೂ, 2 ಮಲೇರಿಯಾ, ಬೆಳ್ತಂಗಡಿ 13 ಡೆಂಗ್ಯೂ, 6 ಮಲೇರಿಯಾ, ಸುಳ್ಯ 23 ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳಿಲ್ಲ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಸುಳ್ಯದಲ್ಲಿ 2017ರಲ್ಲಿ 3 ಮಲೇರಿಯಾ ಪ್ರಕರಣ ಪತ್ತೆಯಾಗಿದ್ದು, 2018ರ ಬಳಿಕ ಯಾವುದೇ ಮಲೇರಿಯಾ ಪ್ರಕರಣಗಳು ದಾಖಲಾಗಿಲ್ಲ. ಸಾಮಾನ್ಯವಾಗಿ ಸುಳ್ಯದ ವ್ಯಕ್ತಿ ಮಂಗಳೂರಿಗೆ ಬಂದು ಹೋಗಿದ್ದು, ಆತನಲ್ಲಿ ಮಲೇರಿಯಾ ಪತ್ತೆಯಾಗಿದ್ದರೆ ಅದು ಮಂಗಳೂರಿನ ಲೆಕ್ಕಕ್ಕೆ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಸುಳ್ಯದಲ್ಲೇ ಹರಡುತ್ತಿರುವ ಮಲೇರಿಯಾ ಕಳೆದ 3 ವರ್ಷಗಳಿಂದ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಕಳೆದ ವರ್ಷ ಹಾಗೂ ಈ ವರ್ಷ ಜಿಲ್ಲೆಯಲ್ಲಿ ಯಾವುದೇ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿಲ್ಲ. 2019ರಲ್ಲಿ ಜಿಲ್ಲೆ ಯಲ್ಲಿ ಒಟ್ಟು 17 ಚಿಕುನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಬೇರೆ ಜಿಲ್ಲೆಗಳಲ್ಲಿ ಚಿಕುನ್‌ಗುನ್ಯಾ ಪ್ರಕರಣಗಳಿದ್ದು, ಅವುಗಳು ನಮ್ಮ ಜಿಲ್ಲೆಯತ್ತ ಬರದಂತೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯವಾಗಿದೆ.

ಆರೋಗ್ಯ ಇಲಾಖೆಯ ಸಂಘಟಿತ ಹೋರಾಟದಿಂದ ಕಳೆದ ಮೂರು ವರ್ಷಗಳಿಂದ ಮಲೇರಿಯಾ ನಿಯಂತ್ರಣದಲ್ಲಿದೆ. ಆದರೆ ಇಡೀ ರಾಜ್ಯಕ್ಕೆ ಹೋಲಿಸಿದರೆ ನಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆ ಯಾಗುತ್ತಿರುವುದು ಬೇಸರದ ವಿಚಾರ. -ಡಾ| ನವೀನ್‌ಚಂದ್ರ, ಮಲೇರಿಯಾ ನಿಯಂತ್ರಣಾಧಿಕಾರಿ, ದ.ಕ. ಜಿಲ್ಲೆ

 

– ವಿಶೇಷ  ವರದಿ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.