ಗ್ರಾಮದಲ್ಲಿ ಚುನಾವಣ ಬಹಿಷ್ಕಾರದ ಕೂಗು

ಅರಂತೋಡು: ಈಡೇರದ ಹಲವು ವರ್ಷದ ಬೇಡಿಕೆಗಳು

Team Udayavani, Sep 15, 2022, 11:05 AM IST

2

ಅರಂತೋಡು: ಅರಂತೋಡು ಕೃಷಿ ಪ್ರಧಾನವಾದ ಗ್ರಾಮ. ಅಡಿಕೆಯೇ ಇಲ್ಲಿಯ ಮುಖ್ಯ ಬೆಳೆ. ಅಡಿಕೆ ಮರಕ್ಕೆ ಎಲೆ ಹಳದಿ ರೋಗ ಬಾಧಿಸಿರುವುದರಿಂದ ಗ್ರಾಮದ ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಉಪ ಬೆಳೆಯಾಗಿ ಬೆಳೆಯುತ್ತಿರುವ ರಬ್ಬರ್‌ ಕೊಂಚ ಕೈ ಹಿಡಿದಿರುವುದು ಸಮಾಧಾನದ ಸಂಗತಿ.

ಗ್ರಾಮದಲ್ಲಿ ಆರು ತೋಡು ಇದ್ದ ಹಿನ್ನೆಲೆಯಲ್ಲಿ ಅರಂತೋಡು ಎಂದು ಹೆಸರು ಬಂದಿತು ಎಂಬುದು ಹಿರಿಯರ ಅಭಿಪ್ರಾಯ. ಸುಳ್ಯ ತಾಲೂಕು ಕೇಂದ್ರದಿಂದ ಅರಂತೋಡು ಗ್ರಾ.ಪಂ. ಕಚೇರಿ ಸುಮಾರು 11 ಕಿ.ಮೀ ದೂರದಲ್ಲಿದೆ. ಕೊಡಗು ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿ ಕೊಂಡಿರುವ ಗ್ರಾಮವೂ ಹೌದು.

1 ಸಂಯುಕ್ತ ಪದವಿ ಪೂರ್ವ ಕಾಲೇಜು, ಎರಡು ಹಿರಿಯ ಪ್ರಾಥ ಮಿಕ ಶಾಲೆಗಳು ಮೂರು ಕಿರಿಯ ಪ್ರಾಥಮಿಕ ಶಾಲೆಗಳಿವೆ. ಒಂದು ರಾಷ್ಟ್ರೀಕೃತ ಬ್ಯಾಂಕ್‌, ಸಹಕಾರಿ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೋಸ್ಟ್‌ ಆಫೀಸ್‌, ಪಶುಚಿಕಿತ್ಸಾ ಕೇಂದ್ರವಿದೆ.

ಗ್ರಾಮದ ರಸ್ತೆಗಳು ಅಭಿವೃದ್ಧಿ ಯಾಗಬೇಕಿವೆ ಎಂಬುದು ಗ್ರಾಮಸ್ಥರ ಬೇಡಿಕೆ. ಅಡ್ತಲೆ ಮೂಲಕ ಎಲಿಮಲೆಯನ್ನು ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಯೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಡ್ತಲೆ ಭಾಗದ ಜನರು ನಾಗರಿಕ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮುಂದಿನ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಅಡ್ತಲೆ ಎಲಿಮಲೆ ಸಂಪರ್ಕ ರಸ್ತೆ ಮಡಿಕೇರಿ ಭಾಗದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅತೀ ಪ್ರಮುಖ ರಸ್ತೆ. ಈ ರಸ್ತೆ ಕಿರಿದಾಗಿದ್ದು, ತಿರುವುಗಳಿಂದ ಕೂಡಿದೆ. ಜತೆಗೆ ಹದಗೆಟ್ಟಿದೆ ಹಾಗಾಗಿ ವಾಹನ ಸಂಚಾರ ತೀರಾ ಕಷ್ಟ ಎಂಬಂತಿದೆ.

ಅಡ್ತಲೆ ನೆಕ್ಕರೆ ಸಂಪರ್ಕ ರಸ್ತೆ ಅಭಿವೃದ್ಧಿಯಾಗಿಲ್ಲ. ಅರಂತೋಡು ಕುಕ್ಕುಂಬಳ ಅಂಗಡಿಮಜಲು ಸಂಪರ್ಕ ರಸ್ತೆ ಪೂರ್ಣವಾಗಿ ಅಭಿವೃದ್ಧಿಗೊಂಡಿಲ್ಲ. ಇರ್ನೆ ದೇರಾಜೆ ಸಂಪರ್ಕ ರಸ್ತೆ, ಅಂಗಡಿಮಜಲು ಬಿಳಿಯಾರು ರಸ್ತೆ ಅಭಿವೃದ್ಧಿಗೊಳ್ಳಬೇಕಾಗಿದೆ. ಅರಂತೋಡು ಪೇಟೆಯಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಫ‌ುಟ್‌ಪಾತ್‌ಗಳು, ಚರಂಡಿ, ರಸ್ತೆಯ ತಡೆಬೇಲಿಗಳು ಹಾಳಾಗಿ ಅಪಾಯಕಾರಿ ಸ್ಥಿತಿಯಲ್ಲಿವೆ.

ಗ್ರಾ.ಪಂ. ವತಿಯಿಂದ ಕೊಡಂಕೇರಿಯಲ್ಲಿ ಸ್ವತ್ಛ ಸಂಕೀರ್ಣ ತೆರೆದು ಅರಂತೋಡು ಮತ್ತು ತೊಡಿಕಾನ ಗ್ರಾಮಗಳ ತ್ಯಾಜ್ಯಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ.

ಸೇತುವೆಯ ಬೇಡಿಕೆ

ಅರಮನೆಗಾಯ ಹೊಳೆಗೆ ಶಾಶ್ವತ ಸೇತುವೆ ನಿರ್ಮಿಸಬೇಕೆಂಬುದು ಸ್ಥಳೀಯರ ಹಲವು ವರ್ಷಗಳ ಬೇಡಿಕೆ. ಆದರೆ ಇದುವರೆಗೂ ಈಡೇರಿಲ್ಲ. ಸ್ಥಳೀಯರು ಮಳೆಗಾಲ ಅಡಿಕೆ ಮರದಿಂದ ನಿರ್ಮಿಸಿದ ತಾತ್ಕಾಲಿಕ ಸಂಕದ ಮೂಲಕ ಜೀವ ಕೈಯಲ್ಲಿ ಹಿಡಿದುಕೊಂಡು ಹೊಳೆ ದಾಟಬೇಕಾದ ಪರಿಸ್ಥಿತಿ ಇದೆ. ಇಲ್ಲಿನ ಜನರೂ ಮತದಾನ ಬಹಿಷ್ಕಾರದ ನಿರ್ಧಾರದಲ್ಲಿದ್ದಾರೆ.

ಜನಪ್ರತಿನಿಧಿಗಳ ಗಮನಕ್ಕೆ ತರಲಾಗುವುದು: ಗ್ರಾಮ ಪಂಚಾಯತ್‌ಗೆ ಬರುತ್ತಿರುವ ಅನುದಾನಗಳನ್ನು ಸೂಕ್ತ ರೀತಿಯಲ್ಲಿ ಬಳಸಿ ರಸ್ತೆ ಅಭಿವೃದ್ದಿ ಮಾಡಲಾಗುತ್ತಿದೆ. ದೊಡ್ಡ ಪ್ರಮಾಣದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಂಬಂಧಪಟ್ಟ ಜನಪ್ರತಿನಿಧಿಗಳ ಗಮನಕ್ಕೆ ತರಲಾಗುವುದು. –ಹರಿಣಿ ಡಿ.ಡಿ., ಅಧ್ಯಕ್ಷರು, ಅರಂತೋಡು ಗ್ರಾ.ಪಂ.

ರಸ್ತೆ ಅಭಿವೃದಿಯಾಗಲಿ: ಅರಂತೋಡು ಪೇಟೆಯಲ್ಲಿ ಸಮರ್ಪಕ ಚರಂಡಿಗಳಿಲ್ಲದೆ ರಸ್ತೆ ಬದಿಯಲ್ಲಿ ಅಲ್ಲಲ್ಲಿನೀರು ಶೇಖರಣೆಗೊಳ್ಳುತ್ತಿದೆ. ಸೂಕ್ತ ಚರಂಡಿ ವ್ಯವಸ್ಥೆಯಾಗಬೇಕಾಗಿದೆ. ಅರಮನೆಗಾಯಕ್ಕೆ ಸಂಪರ್ಕ ಕಲ್ಪಿಸುವ ಬಲ್ನಾಡು ಹೊಳೆಗೆ ಶಾಶ್ವತ ಸೇತುವೆ ನಿರ್ಮಾಣವಾಗಬೇಕು. ಅರಂತೋಡು- ಅಡ್ತಲೆ-ಎಲಿಮಲೆ ರಸ್ತೆ ಅಭಿವೃದ್ಧಿಯಾಬೇಕು. ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ಕೆಲವೊಂದು ರಸ್ತೆಗಳು ಅಭಿವೃದ್ಧಿಯಾದರೂ ಇನ್ನೂ ಕೆಲವೊಂದು ಒಳ ರಸ್ತೆಗಳು ಅಭಿವೃದ್ಧಿ ಯಾಗಲು ಬಾಕಿ ಉಳಿದುಕೊಂಡಿವೆ. ಇವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು – ತಾಜುದ್ದೀನ್‌, ಸಾಮಾಜಿಕ ಕಾರ್ಯಕರ್ತರು, ಅರಂತೋಡು

-ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

2-bng

Anekal: ನಗರದಲ್ಲಿ ಮತ್ತೆ ಮೂವರು ಪಾಕ್‌ ಪ್ರಜೆಗಳ ಬಂಧನ

1-munirathna

DNA Test: ಮುನಿರತ್ನಗೆ ಡಿಎನ್‌ಎ ಟೆಸ್ಟ್‌: ಎಸ್‌ಐಟಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(2)

Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್‌ ಟೈಗರ್‌!

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

8-bantwala-1

Bantwala: ದ್ವಿಚಕ್ರಗಳೆರಡರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

2(2)

Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್‌ ಟೈಗರ್‌!

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.