3,008 ಕಡತಗಳ ವಿಲೇವಾರಿಗೆ ಸಪ್ತಾಹ


Team Udayavani, Jun 25, 2019, 5:00 AM IST

28

ಪುತ್ತೂರು: ಪುತ್ತೂರಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿ 3,008 ಕಡತಗಳು ಬಾಕಿಯಾಗಿರುವ ಹಿನ್ನೆಲೆ ಯಲ್ಲಿ ಜೂ. 24ರಿಂದ ಕಡತ ವಿಲೇವಾರಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.

ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕಡತಗಳು ನಿಗದಿತ ಅವಧಿಯೊಳಗೆ ವಿಲೇವಾರಿಯಾಗದೆ ಬಾಕಿ ಉಳಿದಿವೆ. ಈ ಕುರಿತು ಸಾರ್ವಜನಿಕರಿಂದ ದೂರು ಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯಲ್ಲಿ ಜೂ. 24ರಿಂದ 30ರ ವರೆಗೆ ಕಡತ ವಿಲೇವಾರಿ ಸಪ್ತಾಹವನ್ನು ಸರಕಾರದ ಸೂಚನೆಯಂತೆ ಹಮ್ಮಿಕೊಳ್ಳಲಾಗಿದೆ.

3,008 ಕಡತಗಳು ಬಾಕಿ
ಕಂದಾಯ ಇಲಾಖೆಯಲ್ಲಿ ಮೇ ತಿಂಗಳ ಅಂತ್ಯದವರೆಗೆ 3,008 ಕಡತಗಳು ಬಾಕಿಯಾಗಿವೆ. ಕಚೇರಿ ಕಡತಗಳು 1,720, ಮೇಲಧಿಕಾರಿಗಳ 90, ಅಧೀನ ಕಚೇರಿಗಳಲ್ಲಿ 1,190 ಹಾಗೂ ಇತರ 8 ಕಡತಗಳು ಬಾಕಿ ಉಳಿದಿವೆ. ಒಂದರಿಂದ ಮೂರು ತಿಂಗಳು ಹಳೆಯ 2,502, ಮೂರರಿಂದ ಆರು ತಿಂಗಳ ಹಳೆಯ 344, ಆರು ತಿಂಗಳಿಂದ 1 ವರ್ಷ ಹಳೆಯ 71 ಹಾಗೂ ಒಂದು ವರ್ಷ ಮೇಲ್ಪಟ್ಟ 91 ಕಡತಗಳು ಇದರಲ್ಲಿವೆ.

ರವಿವಾರವೂ ಕರ್ತವ್ಯ
ಸಪ್ತಾಹದ ಸಂದರ್ಭದಲ್ಲಿ ರವಿವಾರವೂ ಹಾಜರಾಗಿ ಕೆಲಸ ನಿರ್ವಹಿಸಲು ಮೇಲಧಿಕಾರಿಗಳು ಸೂಚಿಸಿದ್ದಾರೆ. ಕಂದಾಯ ಇಲಾಖೆ ಮುಂದಿನ ಒಂದು ವಾರ ನಿರಂತರ ಕೆಲಸ ನಿರ್ವಹಿಸಿ ಕಡತ ವಿಲೇವಾರಿ ಸಪ್ತಾಹವನ್ನು ಯಶಸ್ವಿಗೊಳಿಸಲಿದೆ ಎಂದು ಪ್ರಭಾರ ತಹಶೀಲ್ದಾರ್‌ ಅನಂತ್‌ ಶಂಕರ್‌ ತಿಳಿಸಿದ್ದಾರೆ.

150 ಕಡತ ವಿಲೇವಾರಿ
ಸುಳ್ಯ: ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ ಸೋಮವಾರ ಆರಂಭಗೊಂಡಿದ್ದು, ಸುಳ್ಯ ತಾಲೂಕು ಕಚೇರಿಯಲ್ಲಿ ಮೊದಲ ದಿನ 150 ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಸೋಮವಾರ 150 ಕಡತ ವಿಲೇ ಆಗಿದೆ. ಇನ್ನೂ 600 ಕಡತಗಳು ವಿಲೇವಾರಿಗೆ ಬಾಕಿ ಇವೆ. ಅದರ ಪರಿಶೀಲನೆ ಪ್ರಕ್ರಿಯೆ ನಡೆಸಿ ವಿಲೇಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಅಹ್ಮದ್‌ ಕುಂಞಿ “ಉದಯವಾಣಿ’ಗೆ ತಿಳಿಸಿದ್ದಾರೆ.

ವಾರದಲ್ಲಿ ವಿಲೇವಾರಿ
ಮೇಲಧಿಕಾರಿಗಳ ಸೂಚನೆಯಂತೆ ಕಂದಾಯ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡಲು ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸಭೆ ನಡೆಸಿ ವಿಎ ಹಾಗೂ ಆರ್‌ಐಗಳಿಗೆ ಸೂಚಿಸಲಾಗಿದೆ. ಒಂದು ವಾರದಲ್ಲಿ ಕಡತಗಳು ವಿಲೇವಾರಿಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದೇವೆ.
– ಅನಂತ್‌ ಶಂಕರ್‌ , ಪ್ರಭಾರ ತಹಶೀಲ್ದಾರ್‌, ಪುತ್ತೂರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.