Uppinangady: ಅಪಾಯಕಾರಿ ಸ್ಥಳಗಳಲ್ಲಿ ಮೋಜು-ಮಸ್ತಿ, ಸೆಲ್ಫಿ ಬೇಡ

ದುಸ್ಸಾಹಸಕ್ಕೆ ಮುಂದಾಗಬೇಡಿ: ಮುಗಿಲನ್‌

Team Udayavani, Aug 2, 2024, 4:08 PM IST

Screenshot (78)

ಉಪ್ಪಿನಂಗಡಿ: ಉಪ್ಪಿನಂಗಡಿ ಪರಿಸರದಲ್ಲಿ ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್‌ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಮನೆ ಜಲಾವೃತಗೊಂಡವರನ್ನು ಸ್ಥಳಾಂತರಿಸಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕಂದಾಯ ಇಲಾಖೆ, ಪೊಲೀಸ್‌ ಇಲಾಖೆ, ಗ್ರಾ.ಪಂ. ಹಾಗೂ ಪ್ರವಾಹ ರಕ್ಷಣೆಯಲ್ಲಿ ತೊಡಗುವ ಇಲಾಖೆಗಳು ಹೊಂದಾಣಿಯಿಂದ ಕೆಲಸ ಮಾಡುತ್ತಿರುವುದರಿಂದ ಯಾವುದೇಸಮಸ್ಯೆಯಾಗಿಲ್ಲ. ಅಪಾಯಗಳು ಸಂಭವಿಸದಂತೆ ಇಲಾಖೆಗಳು ಮುನ್ನೆಚ್ಚರಿಕೆ ವಹಿಸಿದ್ದು, ಎಲ್ಲ ತಂಡಗಳು ಸನ್ನದ್ಧ ಸ್ಥಿತಿಯಲ್ಲಿವೆ. ವಿಕೋಪಗಳು ಸಂಭವಿಸಿದರೆ ನೆರವಾಗಲು ಎನ್‌ಡಿಆರ್‌ಎಫ್ ತಂಡವೂ ಇದೆ. ಪ್ರಾಕೃತಿಕ ವಿಕೋಪಗಳು ಯಾವಾಗ ಸಂಭವಿಸುತ್ತವೆ ಎಂದು ಹೇಳಲಾಗದು. ಯಾರೂ ಕೂಡಾ ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು ಎಂದರು.

ನದಿ ಬದಿ, ಕಾಲು ಸೇತುವೆ ಸೇರಿದಂತೆ ಅಪಾಯದ ಸ್ಥಳಗಳಲ್ಲಿ ಮೋಜು- ಮಸ್ತಿ ಮಾಡುವವರಿಗೆ, ಸೆಲ್ಫಿ ತೆಗೆದು ಸಂಭ್ರಮ ಪಡುವವರಿಗಾಗಿ ಆ ಸ್ಥಳಗಳಲ್ಲಿ ಮುನ್ನೆಚ್ಚರಿಕೆಫ‌ಲಕಗಳನ್ನು ಹಾಕಲಾಗಿದೆ. ಇದು ಎಚ್ಚರಿಕೆ ಮಾತ್ರವಲ್ಲ. ಕಾನೂನಾತ್ಮಕ ಆದೇಶವಾಗಿದೆ. ಇದನ್ನು ಉಲ್ಲಂ ಸಿದವರ ಎಫ್ಐಆರ್‌ ದಾಖಲು ಮಾಡಲಾಗುತ್ತದೆ. 24 ಗಂಟೆ ಜಲಾವೃತಗೊಂಡ ಮನೆಗಳಿಗೆ ಎನ್‌ ಡಿಆರ್‌ಎಫ್ನಿಂದ 10 ಸಾವಿರ ರೂಪಾಯಿ ಪರಿಹಾರ ದೊರೆಯಲಿದೆ. ಸಂಪೂರ್ಣ ನಾಶವಾದ ಮನೆಗಳಿಗೆ 1.20 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಹೇಳಿದರು.

ವಯನಾಡು ದುರಂತದಲ್ಲಿ ದ.ಕ. ಕನ್ನಡ ಜಿಲ್ಲೆಯವರು ಯಾರಾದರೂ ಸಿಕ್ಕಿ ಹಾಕಿಕೊಂಡಿರವ ಮಾಹಿತಿಯಿದ್ದರೆ ಜಿಲ್ಲಾಡಳಿತವನ್ನು ಸಂಪರ್ಕಿಸುವಂತೆ ಸೂಚಿಸಿದರು. ತಹಶೀಲ್ದಾರ್‌ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ಚಂದ್ರ ನಾಯ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್‌., ಪಿಡಿಒ ವಿಲ್ಫ್ರೆಡ್ ಲಾರೆನ್ಸ್‌ ರೋಡ್ರಿಗಸ್‌, ಕಾರ್ಯದರ್ಶಿ ಗೀತಾ ಶೇಖರ್‌, ಗೃಹ ರಕ್ಷಕದಳದ ಸಿಬಂದಿ, ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾೖಕ್‌, ಸದಸ್ಯ ಅರ್ತಿಲ ಕೃಷ್ಣ ರಾವ್‌, ಗ್ರಾ. ಪಂ. ಉಪಾಧ್ಯಾಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಪ್ರಮುಖರಾದ ಇಸ್ಮಾಯಿಲ್‌ ತಂಙಳ್‌‚ , ಕೆಂಪಿ ಮಹಮ್ಮದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.