ಭೂ ಮಾಲಕತ್ವಕ್ಕೆ ಇ-ಪ್ರಾಪರ್ಟಿ ಕಾರ್ಡ್‌

ಡ್ರೋನ್‌ ಮ್ಯಾಪಿಂಗ್‌ ಮೂಲಕ ಸರ್ವೇ ಕಾರ್ಯ

Team Udayavani, May 19, 2022, 9:22 AM IST

e-property

ಪುತ್ತೂರು: ಗ್ರಾಮಾಂತರದಲ್ಲಿ ಭೂ ದಾಖಲೆ ಇಲ್ಲದವರಿಗೆ ಮಾಲಕತ್ವದ ಹಕ್ಕು ನೀಡುವ ನಿಟ್ಟಿನಲ್ಲಿ ಭೂಮಾಪನ ಇಲಾಖೆ ಸಹ ಭಾಗಿತ್ವದಲ್ಲಿ ಡ್ರೋನ್‌ ಮ್ಯಾಪಿಂಗ್‌ ನಡೆ ಯುತ್ತಿದ್ದು ಈ ತನಕ ದ.ಕ.ಜಿಲ್ಲೆಯಲ್ಲಿ 1,500 ಫಲಾನುಭವಿಗಳಿಗೆ ಇ-ಪ್ರಾಪರ್ಟಿ ಕಾರ್ಡ್‌ ನೀಡಲಾಗಿದೆ.

2020 ಎಪ್ರಿಲ್‌ನಲ್ಲಿ ಕೇಂದ್ರ ಸರಕಾರವು ಸ್ವಾಮಿತ್ವ ಯೋಜನೆ ಆರಂಭಿಸಿತು. ಈ ಯೋಜನೆಯಡಿ ತಂತ್ರಜ್ಞಾನದ ಸಹಾಯದಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮತ್ತು ಮ್ಯಾಪಿಂಗ್‌ ಸಮೀಕ್ಷೆ ಆರಂಭಿಸಿ ಇ-ಪೋರ್ಟಲ್‌ ಪ್ರಮಾಣಪತ್ರ ನೀಡುವ ಕಾರ್ಯ ದೇಶದೆಲ್ಲೆಡೆ ಪ್ರಗತಿಯಲ್ಲಿದೆ.

ಏನಿದು ಸ್ವಾಮಿತ್ವ ಯೋಜನೆ?

ನೂರಾರು ವರ್ಷಗಳಿಂದ ಒಂದೇ ಸ್ಥಳದಲ್ಲಿ ವಾಸವಿದ್ದರೂ ಮನೆಗಳ ಮಾಲಕತ್ವದ ಹಕ್ಕು ಹೊಂದಿರದ ವಾರಸುದಾರರಿಗೆ ಮನೆ ಸ್ಥಳದ ನಾಲ್ಕು ದಿಕ್ಕಿನಲ್ಲೂ ಗಡಿ ನಿಗದಿಪಡಿಸಿ ಮನೆ ಮಾಲಕತ್ವದ ಹಕ್ಕುಪತ್ರ ನೀಡುವ ಯೋಜನೆ ಇದಾಗಿದೆ. ಹಳ್ಳಿಗಳಲ್ಲಿ ಯಾರ ಬಳಿ ಭೂ ದಾಖಲೆ ಲಭ್ಯ ಇಲ್ಲವೋ ಅಂಥವರಿಗೆ ಮಾಲಕತ್ವ ಒದಗಿಸುವುದು ಈ ಯೋಜನೆಯ ಉದ್ದೇಶ. ಇದು ಕೇಂದ್ರ ಅನುದಾನಿತ ಯೋಜನೆಯಾಗಿದ್ದು, ಪಂಚಾಯತ್‌ ರಾಜ್‌ ಇಲಾಖೆ ಈ ಯೋಜನೆ ನೋಡೆಲ್‌ ಇಲಾಖೆಯಾಗಿದೆ. ಯೋಜನೆಯ ಅನುಷ್ಠಾನಕ್ಕೆ ಸರ್ವೇ ಆಫ್‌ ಇಂಡಿಯಾ ತಾಂತ್ರಿಕ ಸಹಭಾಗಿತ್ವ ಹೊಂದಿದೆ.

ಯೋಜನೆಯ ಉದ್ದೇಶ

ಪಿಎಂ ಸ್ವಾಮಿತ್ವ ಯೋಜನೆಯಡಿ ಡ್ರೋನ್‌ ಮ್ಯಾಪಿಂಗ್‌ ಮಾಡಲಾಗುತ್ತದೆ. ಭೂಮಿಯ ನಿಜವಾದ ಮಾಲಕರಿಗೆ ಅದರ ಹಕ್ಕು ದೊರೆಕಿಸ ಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಮನೆ/ಕೃಷಿ ಸಾಲ ಸುಲಭವಾಗಿ ದೊರೆ ಯಲು ಆ ಆಸ್ತಿಗೆ ಸಂಬಂಧಿಸಿದ ಡಿಜಿಟಲ್‌ ಕಾರ್ಡ್‌ಗಳನ್ನು ರೈತರಿಗೆ ವಿತರಿ ಸುವುದು ಈ ಯೋಜನೆಯ ಉದ್ದೇಶ.

ಅರ್ಜಿ ಪ್ರಕ್ರಿಯೆ ಹೇಗೆ?

ಪಿಎಂ ಸ್ವಾಮಿತ್ವ ಯೋಜನೆಯ ಅಧಿ ಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಫಾರ್ಮ್ನಲ್ಲಿರುವ ಮಾಹಿತಿ ಭರ್ತಿ ಮಾಡಬೇಕು. ಸಮೀಕ್ಷೆ ಮುಗಿದು ಇ- ಪ್ರಾಪರ್ಟಿ ಆದ ಬಳಿಕ ಆಸ್ತಿಯ ಮಾಲಕರ ಮೊಬೈಲ್‌ಗೆ ಸಂದೇಶ ಬರುತ್ತದೆ. ಪ್ರಾಪರ್ಟಿ ಕಾರ್ಡ್‌ಗಳನ್ನು ಕಂದಾಯ ಇಲಾಖೆ ಮೂಲಕ ಆಯಾ ಆಸ್ತಿ ಮಾಲಕರಿಗೆ ಹಂಚಲಾಗುತ್ತಿದೆ.

ಏನು ಲಾಭ?

ಇ-ಪ್ರಾಪರ್ಟಿ ಕಾರ್ಡ್‌ ಅನ್ನು ಪಡೆಯುವುದರಿಂದ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಅನುಕೂಲವಾಗುತ್ತದೆ. ಇತರ ಹಣಕಾಸು ಸೌಲಭ್ಯ ಪಡೆಯಲು ಕೂಡ ಇದನ್ನು ದಾಖಲಾತಿಯಾಗಿ ಬಳಸಿಕೊಳ್ಳಬಹುದು. ಅನೇಕ ಮಂದಿಗೆ ಈಗಲೂ ತಮ್ಮದೇ ಭೂಮಿಯಾದರೂ, ಮಾಲಕತ್ವ ಕುರಿತ ದಾಖಲಾತಿ ಇಲ್ಲದೆ ಅನೇಕ ಯೋಜನೆಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ. ಬ್ಯಾಂಕ್‌ಗಳಿಂದಲೂ ಸಾಲ ಪಡೆಯಲು ದಾಖಲಾತಿಗಳ ಕೊರತೆ ಉಂಟಾಗುತ್ತಿದೆ. ಸ್ವಾಮಿತ್ವ ಯೋಜನೆಯಿಂದ ಈ ಸಮಸ್ಯೆ ನೀಗಲಿದೆ.

ಮುಂದುವರಿದ ಸರ್ವೇ

ದ.ಕ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆಯಡಿ 8 ಸಾವಿರ ಸರ್ವೇ ನಡೆದಿದ್ದು 1,500 ಮಂದಿಗೆ ಇ-ಪ್ರಾಪರ್ಟಿ ಕಾರ್ಡ್‌ ವಿತರಿಸಲಾಗಿದೆ. ಸರ್ವೇ ಕಾರ್ಯ ಮುಂದುವರಿದಿದೆ. ಡಾ| ಕುಮಾರ್‌, ಸಿಇಒ ದ.ಕ. ಜಿ.ಪಂ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.