Bantwal “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ’: ರಾಜ್ಯದೆಲ್ಲೆಡೆ ಮನೆ ಮನೆ ಭೇಟಿ ಅಭಿಯಾನ


Team Udayavani, Oct 7, 2023, 12:29 AM IST

Bantwal “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ’: ರಾಜ್ಯದೆಲ್ಲೆಡೆ ಮನೆ ಮನೆ ಭೇಟಿ ಅಭಿಯಾನ

ಬಂಟ್ವಾಳ: ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ ಪರಿಣಾಮಕಾರಿ ಅನುಷ್ಠಾನದ ದೃಷ್ಟಿಯಿಂದ ಕಾಲಮಿತಿ ಯೊಳಗೆ ಕಾರ್ಮಿಕ ಆಯವ್ಯಯ ತಯಾರಿಗಾಗಿ ಸರಕಾರವು ಪ್ರತೀ ವರ್ಷ ಮನೆ ಭೇಟಿ ಕಾರ್ಯ ನಡೆಸುತ್ತಿದ್ದು, ಈ ಬಾರಿ ಅಕ್ಟೋಬರ್‌ ಪೂರ್ತಿ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ’ ಎಂಬ ಅಭಿಯಾನ ನಡೆಸಲಿದೆ.

ಮುಂದಿನ ಸಾಲಿನ ಆಯವ್ಯಯಕ್ಕಾಗಿ ವೇಳಾಪಟ್ಟಿಯನ್ನು ನಿಗದಿ ಮಾಡಿ ಕಾಲಮಿತಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾ ಲಯದಿಂದ ಬಂದ ಸೂಚನೆಯಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ರಾಜ್ಯದ ಪ್ರತೀ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳಿಗೆ ಈಗಾಗಲೇ ಆದೇಶ ನೀಡಿದೆ.

ಪ್ರತೀ ಮನೆಗಳ ಭೇಟಿಗೂ ಆದೇಶ
ಅ. 2ರಿಂದಲೇ ಮನೆ ಮನೆ ಭೇಟಿಯ ಅಭಿಯಾನ ಆರಂಭಗೊಂಡಿದ್ದು, ಅ. 31ರೊಳಗೆ ಪೂರ್ಣಗೊಳ್ಳಬೇಕಿದೆ. ಸಂಬಂಧಪಟ್ಟ ಗ್ರಾ.ಪಂ. ತಂಡ ಮನೆಗಳಿಗೆ ಭೇಟಿ ನೀಡಿ ನರೇಗಾದಲ್ಲಿ ಸಿಗುವ ಕೂಲಿಯ ಮೊತ್ತ, ಕೆಲಸ ಪ್ರಮಾಣ, ಅವಧಿ, ವೈಯಕ್ತಿಕ ಸೌಲಭ್ಯಗಳು, ಅರ್ಹತೆಗಳು, ಹಿರಿಯ ನಾಗರಿಕರು, ಅಂಗವಿಕಲರಿಗೆ ಕಾಮಗಾರಿ ಪ್ರಮಾಣದಲ್ಲಿ ಸಿಗುವ ಶೇ. 50 ರಿಯಾಯಿತಿ, ಅಕುಶಲ ಮಹಿಳೆಯರು, ಲಿಂಗತ್ವ ಅಲ್ಪ ಸಂಖ್ಯಾಕರಿಗೆ ಶೇ. 20 ಅವಕಾಶ ಮೊದಲಾದ ಮಾಹಿತಿಗಳನ್ನು ತಿಳಿಸಲಿದ್ದಾರೆ.

ಜತೆಗೆ ಯೋಜನೆಯ ಮಾಹಿತಿ, ವೀಡಿಯೋಕ್ಕಾಗಿ ಕ್ಯುಆರ್‌ ಕೋಡ್‌ಯನ್ನೊಳಗೊಂಡ ಕರಪತ್ರ ಹಂಚಿಕೆ ಮಾಡಬೇಕಿದೆ. ಅಭಿಯಾನದಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್‌ ಸಿಬಂದಿ, ಅನುಷ್ಠಾನ ಇಲಾಖೆಯ ಅಧಿಕಾರಿ, ಸಿಬಂದಿ ಎಲ್ಲರೂ ಪಾಲ್ಗೊಳ್ಳಬೇಕಿದೆ. ಅಭಿಯಾನದ ಮೂಲಕ ಜಲ ಸಂಜೀವಿನಿ ಯೋಜನೆಯ ವಿಸ್ತೃತ ವರದಿ ಸಿದ್ಧಪಡಿಸುವ ನಿಟ್ಟಿನಲ್ಲೂ ಮಾಹಿತಿ ಸಂಗ್ರಹಗೊಳ್ಳಬೇಕಿದೆ ಎಂದು ವಿವರಿಸಲಾಗಿದೆ.

ಮನೆ ಭೇಟಿಯ ಜತೆಗೆ ಜಾಗೃತಿ ವಾಹನದ ಮೂಲಕ ಪ್ರಚಾರಕ್ಕೂ ಸೂಚನೆ ನೀಡಲಾಗಿದ್ದು, ಪ್ರತೀ ಗ್ರಾಮದಲ್ಲಿ “ಕಾಮಗಾರಿ ಬೇಡಿಕೆ ಪೆಟ್ಟಿಗೆ’ ಯನ್ನಿರಿಸಿ ಅರ್ಜಿ ಸ್ವೀಕರಿಸುವಂತೆ ಸೂಚಿಸಿದ್ದಾರೆ.

ಮುಂದಿನ ಪ್ರಕ್ರಿಯೆ
ಜನರಿಂದ ಸಂಗ್ರಹಿಸಿ ಅರ್ಜಿಗಳನ್ನು ಪರಿಶೀಲಿಸಿ ನ. 15ರೊಳಗೆ ವಾರ್ಡ್‌ ಸಭೆಗಳಲ್ಲಿ ಕಾಮಗಾರಿ ಪಟ್ಟಿ ಅನುಮೋದಿಸಿ ಗ್ರಾಮಸಭೆಗೆ ಸಲ್ಲಿಸಬೇಕು. ನ. 30ರೊಳಗೆ ಗ್ರಾಮಸಭೆ ಪೂರ್ಣಗೊಳಿಸಿ ವಾರ್ಷಿಕ ಕ್ರಿಯಾಯೋಜನೆಗೆ ಅನುಮೋದನೆ ಪಡೆದುಕೊಳ್ಳಬೇಕು. ಗ್ರಾಮಸಭೆಯ ಕ್ರಿಯಾಯೋಜನೆಯನ್ನು ಡಿ. 5ರೊಳಗೆ ತಾ.ಪಂ. ಸಲ್ಲಿಸಿ ಡಿ. 20ರೊಳಗೆ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿಗಳಿಗೆ, ಅಲ್ಲಿಂದ ರಾಜ್ಯ, ಕೇಂದ್ರಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆದು 2024ರ ಫೆ. 20ರ ಬಳಿಕ ಆಯವ್ಯಯ ಪೂರ್ಣಗೊಳ್ಳಲಿದೆ ಎಂದು ಆದೇಶದಲ್ಲಿ ವಿರಿಸಲಾಗಿದೆ.

ಜನರಲ್ಲಿ ತಿಳುವಳಿಕೆ ಮೂಡಿಸುವ ಉದ್ದೇಶದಿಂದ ಅಭಿಯಾನ ನಡೆಯುತ್ತಿದ್ದು, ಗ್ರಾ.ಪಂ.ಗಳ ಕಳೆದ ವರ್ಷದ ಪ್ರಗತಿ ಏನು, ಮುಂದಿನ ವರ್ಷದ ಬೇಡಿಕೆಗಳೇನು ಎಂಬುದನ್ನು ತಿಳಿದುಕೊಳ್ಳಲು ಅನುಕೂಲವಾಗಲಿದೆ.
– ಡಾ| ಆನಂದ್‌ ಕೆ., ಸಿಇಒ, ದ.ಕ. ಜಿ.ಪಂ.

 

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.