ಎಂಜಿನಿಯರ್‌ಗಳು ಅನಿವಾರ್ಯ: ಡಾ| ವೀರೇಂದ್ರ ಹೆಗ್ಗಡೆ


Team Udayavani, Aug 13, 2018, 2:23 PM IST

13-agust-11.jpg

ಬೆಳ್ತಂಗಡಿ: ಪ್ರಸ್ತುತ ಆಧುನಿಕ ಜಗತ್ತಿನಲ್ಲಿ ಬದುಕಿನ ಎಲ್ಲ ರಂಗಗಳಲ್ಲಿಯೂ ಎಂಜಿನಿಯರ್‌ಗಳು ಅನಿವಾರ್ಯವಾಗುತ್ತಿದ್ದು, ಅವರಲ್ಲೂ ಸರಕಾರಿ ಎಂಜಿನಿಯರ್‌ಗಳು ಶಿಸ್ತು, ಬದ್ಧತೆಯಿಂದ ಕೆಲಸ ಮಾಡಿ, ಜನರಿಗೆ ಸೇವೆ ನೀಡಬೇಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ರವಿವಾರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಲೋಕೋಪಯೋಗಿ, ಜಲ ಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಇಲಾಖೆಗಳನ್ನೊಳಗೊಂಡ ಕರ್ನಾಟಕ ಎಂಜಿನಿಯರ್‌ಗಳ ಸಂಘದ 6ನೇ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಂಘದ ವತಿಯಿಂದ ಡಾ| ಹೆಗ್ಗಡೆ ಅವರನ್ನು ಸಮ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಎಂಜಿನಿಯರ್‌ಗಳ ಸಂಘದ ಅಧ್ಯಕ್ಷ ಡಿ.ಎಸ್‌. ದೇವರಾಜ್‌ ಅವರು ಸಂಘದ ಸೇವೆ, ಸಾಧನೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ನಿವೃತ್ತ ಎಂಜಿನಿಯರ್‌ ಕಲ್ಲಪ್ಪ ಅವರನ್ನು ಗೌರವಿಸಲಾಯಿತು. ಅಧೀಕ್ಷಕ ಎಂಜಿನಿಯರ್‌ ಕಾಂತರಾಜು ಬಿ., ಸಂಘದ ಹಿರಿಯ ಉಪಾಧ್ಯಕ್ಷ ಬಿ.ಡಿ. ನಸಲಾಂಪುರೆ, ಉಪಾಧ್ಯಕ್ಷರಾದ ಎಸ್‌.ಡಿ. ತಿಮ್ಮೇಗೌಡ, ಎಸ್‌.ಎಂ. ಮೇಟಿ, ನಾರಾಯಣ ಎಂ., ಎಚ್‌.ಕೆ. ಕಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಸ್‌. ಚಂದ್ರಶೇಖರ್‌, ಖಜಾಂಚಿ ಚಂದ್ರೇಗೌಡ ಎಚ್‌.ಸಿ., ಕಾನೂನು ಕಾರ್ಯದರ್ಶಿ ಎಂ.ಎನ್‌. ಮಾರ್ತಾಂಡಪ್ಪ, ಯಶವಂತಕುಮಾರ್‌ ಉಪಸ್ಥಿತರಿದ್ದರು. ಲೋಕೋಪಯೋಗಿ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಶಿವಪ್ರಸಾದ ಅಜಿಲ ಸ್ವಾಗತಿಸಿ, ಉಡುಪಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಚಂದ್ರಶೇಖರ ವಂದಿಸಿದರು.

ಪಾತ್ರ ಮಹತ್ತರ
ಪ್ರಸ್ತುತ ವಿವಿಧ ವಿನ್ಯಾಸಗಳ ಸ್ಮಾರಕ, ದೇವಸ್ಥಾನ, ಚರ್ಚ್‌, ಮಸೀದಿ ಹಾಗೂ ಮಂದಿರ ಮೊದಲಾದ ನಿರ್ಮಾಣಗಳಲ್ಲಿ ಎಂಜಿನಿಯರ್‌ ಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಸಮಾಜದಲ್ಲಿ ಎಂಜಿನಿಯರ್‌ಗಳಿಗೆ ವಿಶೇಷ ಸ್ಥಾನಮಾನವಿದ್ದು, ಅವರು ಜನರ ನೆನಪಿನಲ್ಲಿ ಉಳಿಯುವ ಹಾಗೂ ದೇಶದ ಪ್ರಗತಿಗೆ ಪೂರಕ ಕರ್ತವ್ಯ ನಿರ್ವಹಿಸಬೇಕು.
– ಡಾ| ಡಿ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.