ಆವರಣ ಗೋಡೆ ಕುಸಿಯುವ ಭೀತಿ

ಅವೈಜ್ಞಾನಿಕ ನಿರ್ಮಾಣದಿಂದಾಗಿ ಗೋಡೆಯಲ್ಲಿ ಬಿರುಕು

Team Udayavani, Sep 11, 2019, 5:00 AM IST

t-43

ಬಡಗನ್ನೂರು: ಶೇಕಮಲೆ- ದರ್ಭೆತ್ತಡ್ಕ ಸಮೀಪ ರಸ್ತೆ ನಿರ್ಮಾಣದ ವೇಳೆ ಇಲಾಖೆ ನಿರ್ಮಿಸಿದ ಆವರಣ ಗೋಡೆ ಬಿರುಕು ಬಿಟ್ಟಿದ್ದು, ಕುಸಿಯುವ ಭೀತಿಯಲ್ಲಿದೆ. ಮೂರು ವರ್ಷಗಳಿಂದ ಮನೆ ಮಂದಿ ಆತಂಕದಲ್ಲೇ ದಿನ ದೂಡುತ್ತಿದ್ದಾರೆ.

ಆವರಣ ಗೋಡೆ ತೆರವು ಮಾಡಿ ಅಥವಾ ಹೊಸ ಆವರಣ ಗೋಡೆಯನ್ನು ನಿರ್ಮಾಣ ಮಾಡಿ ಎಂದು ಎರಡು ವರ್ಷಗಳಿಂದ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಮನೆ ಮಾಲಕರು ಪುತ್ತೂರು ಸಹಾಯಕ ಆಯುಕ್ತರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅಡಿ ಭಾಗದಲ್ಲಿ ಕುಸಿತ
ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಕಮಲೆಯಿಂದ ದರ್ಬೆತ್ತಡ್ಕಕ್ಕೆ ತೆರಳುವ ರಸ್ತೆಯ ಪ್ರವೇಶದ ಬಳಿ ನಾಲ್ಕು ವರ್ಷಗಳ ಹಿಂದೆ ಈ ಕಾಂಕ್ರೀಟ್ ತಡೆಗೋಡೆಯನ್ನು ನಿರ್ಮಾಣ ಮಾಡಲಾಗಿದೆ. ಗೋಡೆ ನಿರ್ಮಾಣ ಸಂದರ್ಭದಲ್ಲಿ ವೈಜ್ಞಾನಿ ಕವಾಗಿ ಕಾಮಗಾರಿ ನಿರ್ವಹಿಸದಿರುವ ಹಿನ್ನೆಲೆಯಲ್ಲಿ ಅಡಿ ಭಾಗದಲ್ಲಿ ಕುಸಿತ ಉಂಟಾಗಿದೆ. ಧರೆಯ ಬದಿಯಲ್ಲಿರುವ ಕಾರಣ ಆವರಣ ಗೋಡೆ ಮನೆಯ ಮೇಲೆ ಬೀಳುವ ಸಾಧ್ಯತೆ ಇದೆ. ಮನೆಯ ಒಂದು ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಇದ್ದು, ಇನ್ನೊಂದು ಭಾಗದಲ್ಲಿ ಶೇಕಮಲೆ- ದರ್ಭೆತ್ತಡ್ಕ ಜಿ.ಪಂ. ರಸ್ತೆ ಇದೆ. ಜಿ.ಪಂ. ರಸ್ತೆ ವಿಸ್ತರಣೆ ಕಾಮಗಾರಿ ಸಂದರ್ಭ ರಸ್ತೆಯು ಮನೆಯ ಅಂಚಿನ ವರೆಗೂ ಬಂದಿದ್ದು, ಅರ್ಧ ಭಾಗದಲ್ಲಿ ಮಾತ್ರ ಆವರಣ ಗೋಡೆ ನಿರ್ಮಾಣ ಮಾಡಲಾಗಿದೆ. ಉಳಿದ ಭಾಗದಲ್ಲಿ ಇನ್ನೂ ಸುಮಾರು 30 ಮೀ. ಉದ್ದಕ್ಕೆ ಹಾಗೆಯೇ ಬಿಡಲಾಗಿದೆ.

ಅಂಗಳಕ್ಕೆ ಬಿದ್ದಿತ್ತು ಜೀಪು
ಎರಡು ವರ್ಷಗಳ ಹಿಂದೆ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯಂಗಳಕ್ಕೆ ಬಿದ್ದು, ಮನೆಮಂದಿ ಅಪಾಯದಿಂದ ಪಾರಾಗಿದ್ದರು. ಈ ಘಟನೆ ನಡೆದ ಬಳಿಕವೂ ಇಲಾಖೆ ಎಚ್ಚೆತ್ತುಕೊಂಡಿಲ್ಲ.

ಹಲವು ಘಟನೆಗಳು
ಕಾಮಗಾರಿ ನಡೆಸುವ ವೇಳೆ ಆಗುವ ಎಡವಟ್ಟಿನಿಂದಾಗಿ ಕೌಡಿಚ್ಚಾರ್‌ ಮಡ್ಯಂಗಳ ರಸ್ತೆ ಬದಿಯಲ್ಲಿದ್ದ ಕೆರೆಯನ್ನು ಮುಚ್ಚದೇ ಇರುವ ಕಾರಣ ಕಾರು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಮಂಗಳೂರಿನಲ್ಲಿ ಮನೆ ಮೇಲೆ ಪಕ್ಕದ ಮನೆಯ ಆವರಣ ಗೋಡೆ ಕುಸಿದು ಗುತ್ತಿಗಾರಿನ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಎರಡು ದಿನಗಳ ಹಿಂದಷ್ಟೇ ನಡೆದಿದೆ. ಕಳೆದ ವರ್ಷ ಪುತ್ತೂರಿನಲ್ಲಿ ಇಂತಹದೇ ಆವರಣ ಗೋಡೆ ಕುಸಿದು ಪ್ರಾಣಹಾನಿ ಸಂಭವಿಸಿತ್ತು. ಇಂತಹ ಘಟನೆಗಳಿಂದ ಎಚ್ಚೆತ್ತು, ಹೊಸ ಆವರಣ ಗೋಡೆಯನ್ನು ಶೀಘ್ರದಲ್ಲೇ ಹಾಗೂ ವೈಜ್ಞಾನಿಕವಾಗಿ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪರಿಶೀಲಿಸುತ್ತೇನೆ
ಅಪಾಯಕಾರಿ ಸ್ಥಿತಿಯಲ್ಲಿರುವ ಆವರಣ ಗೋಡೆಯನ್ನು ಪರಿಶೀಲನೆ ಮಾಡುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗೆ ಸೂಚನೆ ನೀಡಿದ್ದೇನೆ. ಈ ಆವರಣ ಗೋಡೆಯನ್ನು ತೆರವು ಮಾಡಿ ಹೊಸದಾಗಿ ನಿರ್ಮಿಸುವ ಕುರಿತಾಗಿ ಪರಿಶೀಲನೆ ಮಾಡುತ್ತೇನೆ.

-ಎಚ್.ಕೆ.ಕೃಷ್ಣಮೂರ್ತಿ ಸಹಾಯಕ ಆಯುಕ್ತ, ಪುತ್ತೂರು

ನೆಮ್ಮದಿಯ ನಿದ್ದೆಯಿಲ್ಲ
ಆವರಣ ಗೋಡೆ ಕಾರಣದಿಂದ ನಮಗೆ ನೆಮ್ಮದಿಯಿಂದ ನಿದ್ದೆ ಮಾಡಲೂ ಆಗುತ್ತಿಲ್ಲ. ಮನೆ ಗೋಡೆಗೆ ತಾಗಿಕೊಂಡೇ ರಸ್ತೆ ನಿರ್ಮಾಣ ಮಾಡಿದರೂ ಇಲಾಖೆ ಆವರಣ ಗೋಡೆಯನ್ನು ಪೂರ್ಣವಾಗಿ ನಿರ್ಮಿಸದೇ ಇರುವುದು ಅಚ್ಚರಿಯನ್ನು ಉಂಟುಮಾಡಿದೆ. ಕಲ್ಲು ಕಟ್ಟಿಯಾದರೂ ಆವರಣ ಗೋಡೆಯನ್ನು ನಿರ್ಮಾಣ ಮಾಡಬಹುದಿತ್ತು. ಮಕ್ಕಳು ಮನೆಯಂಗಳದಲ್ಲಿ ಆಟವಾಡುವಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ.
– ಎಸ್‌.ಪಿ. ಬಶೀರ್‌ ಶೇಕಮಲೆ ಮನೆ ಮಾಲಕರು
ದಿನೇಶ್‌ ಬಡಗನ್ನೂರು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.