![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, May 16, 2021, 12:29 PM IST
ನರಿಮೊಗರು : ಮುಂಡೂರು ಗ್ರಾಮದ ಕಾಳಿಂಗಹಿತ್ತಲು ಎಂಬಲ್ಲಿ ರಹಿಮಾನ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಮಣ್ಣು ಪಾಲಾಗಿದ್ದು. ಮನೆಯ ಜಗಲಿ ಕೂಡ ಬಿರುಕು ಬಿಟ್ಟಿದ್ದು. ಮನೆ ಕುಸಿಯುವ ಬೀತಿಯಲ್ಲಿದೆ.
ರಹಿಮಾನ್ ಅವರಿಗೆ ಅಧಿಕಾರಿಗಳು ತಕ್ಷಣ ಪರಿಹಾರ ನೀಡಿ,ಮುಂದೆ ಮನೆಗೆ ತೊಂದರೆ ಯಾಗದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕಾದ ಅಗತ್ಯವಿದೆ.
ಸ್ಥಳೀಯ ಮುಖಂಡ ಅರುಣ್ ಪುತ್ತಿಲ,ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಪುತ್ತಿಲ,ಬಾಲಕೃಷ್ಣ ಪೂಜಾರಿ. ಅರುಣಾ ಕಣ್ಣರ್ನೂಜಿ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್,ಜನಾರ್ದನ ಪೂಜಾರಿ ಸೇರಿದಂತೆ ಗೆಳೆಯರ ಬಳಗದ ಸದಸ್ಯರು ಹಾಗು ಸ್ಥಳೀಯರು ಕಲ್ಲು ತೆರವು ಗೊಳಿಸಿ. ತಕ್ಷಣ ಕ್ಕೆ ಮನೆಗೆ ತೊಂದರೆ ಯಾಗದಂತೆ ಕೆಲಸ ನಿರ್ವಹಿಸುತ್ತಿದ್ದಾರೆ.
ಪಂಚಾಯತ್ ಅಧ್ಯಕ್ಷೆ ಭೇಟಿ :
ಸ್ಥಳಕ್ಕೆ ಮುಂಡೂರು ಗ್ರಾ.ಪಂ.ಅಧ್ಯಕ್ಷ ಪುಷ್ಪಾ ಅವರು ಬೇಟಿ ನೀಡಿ ಮೇಲಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವಂತೆ ಅದೇಶಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.