![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 3, 2023, 12:27 AM IST
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ರವಿವಾರವೂ ರಾತ್ರಿ ಒಂಟಿ ಸಲಗ ದಾಳಿ ನಡೆಸಿದೆ.
ಕೃಷ್ಣ ಭಟ್ ಅವರ ತೋಟಕ್ಕೆ ದಾಳಿ ಮಾಡಿದ ಒಂಟಿ ಸಲಗ 20ಕ್ಕಿಂತ ಅಧಿಕ ಅಡಿಕೆ ಮರ, ಒಂದು ತೆಂಗು, ಒಂದು ವಿದ್ಯುತ್ ಕಂಬ ಹಾಗೂ ಪಂಪು ಶೆಡ್ ಹಾನಿ ಮಾಡಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ವಿದ್ಯುತ್ ಕಂಬ ಮುರಿಯುವ ವೇಳೆ ವಿದ್ಯುತ್ ಪೂರೈಕೆ ನಿಂತಿದ್ದರಿಂದ ಸಂಭವನೀಯ ದುರಂತ ತಪ್ಪಿದಂತಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ, ಮೆಸ್ಕಾಂ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.