![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 3, 2021, 11:17 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಮನೆಯೊಂದರಲ್ಲಿ ಶೌಚಾಲಯದೊಳಗೆ ಚಿರತೆಯೊಂದು ಫೆ.3ರಂದು ಬೆಳಗ್ಗೆ ಬಂಧಿಯಾಗಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ಜಯಲಕ್ಷ್ಮಿ ಎಂಬವರ ಮನೆಯ ಟಾಯ್ಲೆಟ್ ಒಳಗಡೆ ನಾಯಿಯನ್ನು ಓಡಿಸಿಕೊಂಡು ಹೋದ ಚಿರತೆಯನ್ನು ಮನೆಯವರು ಬಾಗಿಲು ಹಾಕಿ ಒಳಗಡೆ ಕೂಡಿ ಹಾಕಿದ್ದಾರೆ.
ಇದನ್ನೂ ಓದಿ:ಸುಬ್ರಹ್ಮಣ್ಯ: ನಾಯಿಯನ್ನು ಓಡಿಸಿಕೊಂಡು ನಾಡಿಗೆ ಬಂದ ಚಿರತೆ ಶೌಚಾಲಯದಲ್ಲಿ ಬಂಧಿ!
ಸದ್ಯ ಚಿರತೆ ಹಾಗೂ ನಾಯಿ ಶೌಚಾಲಯದಲ್ಲಿ ಬಂಧಿಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ತಂಡ ಹಾಗೂ ಕಡಬ ಪೊಲೀಸರು ಆಗಮಿಸಿ ಕಾರ್ಯಚರಣೆಗೆ ಕ್ರಮ ಕೈಗೊಂಡಿದ್ದಾರೆ. ಅರೆವಳಿಕೆ ತಜ್ಞರನ್ನು ಕರೆಸಿಕೊಂಡಿದ್ದು, ಅರೆವಳಿಕೆ ನೀಡಿ ಹಿಡಿಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕೆರಳಿಸದಂತೆ ಮನವಿ: ಚಿರತೆ ಹಾಗೂ ನಾಯಿ ಶೌಚಾಲಯದಲ್ಲಿ ಬಂಧಿಯಾಗಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಆಗಮಿಸಿದ್ದಾರೆ. ಚಿರತೆ ಕೆರಳುವ ಸಂಭವಿರುವುದರಿಂದ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ, ಕೆರಳಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ದೆಹಲಿಯ ಸೀರಿಯಲ್ ನಟಿಗೆ ಕುಡುಕರಿಂದ ಕಿರುಕುಳ : ಆರೋಪಿಗಳು ಅಂದರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.