ಹೊಳಪು ಮಾಡಿಕೊಡುವುದಾಗಿ ಹೇಳಿ ಐದೂವರೆ ಪವನ್‌ ಚಿನ್ನ ಕರಗಿಸಿದ ವಂಚಕ!


Team Udayavani, Aug 27, 2021, 6:55 AM IST

ಹೊಳಪು ಮಾಡಿಕೊಡುವುದಾಗಿ ಹೇಳಿ ಐದೂವರೆ ಪವನ್‌ ಚಿನ್ನ ಕರಗಿಸಿದ ವಂಚಕ!

ಪುತ್ತೂರು: ಚಿನ್ನಾಭರಣಕ್ಕೆ ಹೊಳಪು ನೀಡುವುದಾಗಿ ಹೇಳಿ 2 ಪವನ್‌ನ ಮಾಂಗಲ್ಯ ಸರ ಸೇರಿದಂತೆ ಐದೂವರೆ ಪವನ್‌ ಚಿನ್ನಾಭರಣವನ್ನು ಕಳೆದುಕೊಂಡಿರುವ ಬಗ್ಗೆ ಗ್ರಾಮ ಪಂಚಾಯತ್‌ ಸದಸ್ಯೆ ಸಂಪ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ನೆಟ್ಟಣಿಗೆ ಮುಟ್ನೂರು ಗ್ರಾ.ಪಂ. ಸದಸ್ಯೆಯಾಗಿರುವ ಪೆರ್ನಾಜೆ ನಿವಾಸಿ ಇಂದಿರಾ ಅವರು ವಂಚನೆಗೆ ಒಳಗಾದವರು. ಚಿನ್ನಾಭರಣವನ್ನು ಹೊಳೆಯುವಂತೆ ಪಾಲಿಶ್‌ ಮಾಡಿ ಕೊಡುವುದಾಗಿ ನಂಬಿಸಿ ಪಡೆದುಕೊಂಡ ಆರೋಪಿ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್‌ ಚಿನ್ನಾಭರಣವನ್ನು ಅನುಮಾನವೇ ಬಾರದಂತೆ ಆಕೆಯ ಕಣ್ಣೆದುರೇ ವಂಚಿಸಿ ಪರಾರಿಯಾಗಿದ್ದಾನೆ.

ಮನೆಯ ಶೋಕೇಸ್‌, ಟಿವಿ, ಬೆಳ್ಳಿ, ಬಂಗಾರದ ಆಭರಣ ಸೇರಿದಂತೆ ಹಲವು ವಸ್ತುಗಳನ್ನು ಸ್ವತ್ಛಗೊಳಿಸಿ ಹೊಳಪು ನೀಡುವ ಪೌಡರ್‌ ಮಾರಾಟ ಮಾಡುತ್ತಿರುವುದಾಗಿ ಹೇಳಿಕೊಂಡು ಇಂದಿರಾ ಅವರ ಮನೆಗೆ ಬಂದ ಅಪರಿಚಿತ ಯುವಕ, ಬೆಳ್ಳಿ, ಚಿನ್ನಾಭರಣ ಹೊಳೆಯುವಂತೆ ಈಗಲೇ ಪಾಲಿಶ್‌ ಮಾಡಿಕೊಡುವ ಮೂಲಕ ಮಾದರಿ ತೊರಿಸುವುದಾಗಿ ತಿಳಿಸಿದ್ದ. ಇದನ್ನು ನಂಬಿದ ಇಂದಿರಾ ಅವರು ತಮ್ಮ ಬಳಿಯಿದ್ದ ಕಾಲಿನ ಗೆಜ್ಜೆ ತೆಗೆದುಕೊಟ್ಟಿದ್ದರು. ಅದನ್ನು ಆ ವ್ಯಕ್ತಿ ಹಳದಿ ಪೌಡರ್‌ ಬಳಸಿ ಫಳಫಳ ಹೊಳೆಯುವಂತೆ ಮಾಡಿಕೊಟ್ಟಿದ್ದ. ಆ ಬಳಿಕ ಚಿನ್ನದ ಆಭರಣಗಳಿದ್ದರೆ ಅವುಗಳನ್ನೂ ಹೊಳೆಯುವಂತೆ ಮಾಡಿಕೊಡುತ್ತೇನೆಂದು ವಂಚಕ ನಂಬಿಸಿದ್ದ. ಈ ವೇಳೆ ಇಂದಿರಾ ಅವರು ತಮ್ಮ ಮಾಂಗಲ್ಯ ಸರ, ಚೈನು, ಎರಡು ಬಳೆ ನೀಡಿದ್ದಾರೆ. ಈ ವೇಳೆ ಚಿನ್ನಾಭರಣಗಳ ಮೇಲೆ ಹಳದಿ ಪೌಡರ್‌ ಸುರಿದು, ಲಿಕ್ವಿಡ್‌ ಮತ್ತು ಜೆಲ್‌ ಹಾಕಿ ಬ್ರಷ್‌ ಬಳಸಿ ತೊಳೆಯುವಂತೆ ನಟಿಸಿ ಬಳಿಕ ಬ್ಯಾಟರಿ ಚಾಲಿತ ಬೆಂಕಿ ನೀರಲ್ಲಿ ಕುದಿಸಿದ್ದಾನೆ. ಅನಂತರ ನೀರಿನಿಂದ ತೊಳೆದು ಅರಿಶಿನ ಪುಡಿ ಹಾಕಿ, ಪೇಪರ್‌ ಒಂದರಲ್ಲಿ ಪೊಟ್ಟಣ ಕಟ್ಟಿ ಕೊಟ್ಟಿದ್ದಾನೆ. ಅರ್ಧ ಗಂಟೆಯ ಬಳಿಕ ಪೊಟ್ಟಣ ತೆಗೆಯುವಂತೆ ಇಂದಿರಾ ಅವರಿಗೆ ತಿಳಿಸಿದ ವಂಚಕ ಅಲ್ಲಿಂದ ಕಾಲ್ಕಿತ್ತಿದ್ದ.

ಆತನ ವರ್ತನೆ ಬಗ್ಗೆ ಅನುಮಾನಪಟ್ಟ ಇಂದಿರಾ ಅವರು ಐದೇ ನಿಮಿಷದಲ್ಲಿ ಪೊಟ್ಟಣ ತೆರೆದು ನೋಡಿದಾಗ ಮಾಂಗ್ಯಲ ಸರ ಸೇರಿದಂತೆ ಚಿನ್ನಾಭರಣಗಳು ತುಂಡು ತುಂಡಾಗಿರುವುದು ಕಂಡು ಬಂತು. ವಂಚಕ ಚಿನ್ನದಂಶವನ್ನು ದ್ರವ ಮಾದರಿಯಲ್ಲಿ ಸಂಗ್ರಹಿಸಿ ಪಡೆದು ಪರಾರಿಯಾಗಿದ್ದ. ಈ ಕುರಿತು ಇಂದಿರಾ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ಆಟೋ ರಿಕ್ಷಾದಲ್ಲಿ ಬಂದಿದ್ದ:

ವಂಚಕ ಆಟೋ ರಿಕ್ಷಾದಲ್ಲಿ ಬಂದಿದ್ದ. ಇಂದಿರಾ ಅವರ ಹತ್ತಿರದ ಮನೆಯಲ್ಲಿಯೂ ಆತ ಇದೇ ಮಾದರಿಯಲ್ಲಿ ವಂಚನೆಗೆ ಪ್ರಯತ್ನ ಪಟ್ಟಿದ್ದ. ಆದರೆ ಆ ಮನೆಯಲ್ಲಿ ಅವರು ನಮಗೆ ಯಾವುದೂ ಬೇಡ ಎಂದು ತಿಳಿಸಿದ್ದರಿಂದ ಆತ ಇಂದಿರಾ ಅವರ ಮನೆಗೆ ಬಂದಿದ್ದ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.