Puttur: ಕರ್ತವ್ಯನಿರತ ಅರಣ್ಯಾಧಿಕಾರಿ, ಸಿಬಂದಿಗೆ ನಿಂದನೆ: ಹರೀಶ್ ಪೂಂಜ ವಿರುದ್ಧ ದೂರು
Team Udayavani, Oct 17, 2023, 9:14 PM IST
ಪುತ್ತೂರು: ಕರ್ತವ್ಯನಿರತ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮತ್ತು ಸಿಬಂದಿಗೆ ಶಾಸಕ ಹರೀಶ್ ಪೂಂಜ ಅವರು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಆರೋಪಿಸಿ ಪುತ್ತೂರು ತಾಲೂಕು ರಾಜ್ಯ ಸರಕಾರಿ ನೌಕರರ ಸಂಘ ಖಂಡನೆ ವ್ಯಕ್ತಪಡಿಸಿದ್ದು, ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ದೂರು ನೀಡಿದೆ.
ಅ. 7ರಿಂದ 9ರ ವರೆಗೆ ಕೊಕ್ಕಡ ಹೋಬಳಿಯ ಕಳೆಂಜ ಗ್ರಾಮದ ಅಮ್ಮಿನಡ್ಕದ ಮೀಸಲು ಅರಣ್ಯದಲ್ಲಿ ಅಲ್ಲಿನ ನಿವಾಸಿ ಲೋಲಾಕ್ಷ ಗೌಡ ಕಟ್ಟಡ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದರು. ಈ ಅತಿಕ್ರಮಣ ತೆರವುಗೊಳಿಸಲು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಹಾಗೂ ಸಿಬಂದಿ ವಿಚಾರಣೆ ನಡೆಸುತ್ತಿರುವಾಗ ಶಾಸಕ ಹರೀಶ್ ಪೂಂಜ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಕರೆ ಮಾಡಿ ಒತ್ತಡ ಹೇರಿದ್ದಾರೆ. ಮಾತ್ರವಲ್ಲ, ಸಾರ್ವಜನಿಕವಾಗಿ ಅರಣ್ಯ ಸಿಬಂದಿ ಮೇಲೆ ಸುಳ್ಳು ಆರೋಪ ಹೊರಿಸಿ ಮಾನ ಹಾನಿ ಮಾಡಿದ್ದಾರೆ ಎಂದು ಆರೋಪಿಸಿರುವ ಸಂಘವು ಶಾಸಕ ಹರೀಶ್ ಪೂಂಜ ಹಾಗೂ ಮತ್ತಿತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.