ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ; ಕುಕ್ಕೆ ಸುಬ್ರಹ್ಮಣ್ಯದ ಹೆದ್ದಾರಿ ಜಲಾವೃತ


Team Udayavani, Jul 10, 2022, 8:13 AM IST

news-1

ಬಂಟ್ವಾಳ/ ಸುಬ್ರಹ್ಮಣ್ಯ:  ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, 8.5 ಮಿ. ಎತ್ತರದಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಶನಿವಾರ ಬೆಳಿಗ್ಗೆ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿದ್ದು, 6.3 ಮಿ. ಎತ್ತರದಲ್ಲಿ ಹರಿಯುತ್ತಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ನೇತ್ರಾವತಿ ನದಿ ತುಂಬಿ‌ ಹರಿಯಲು ಪ್ರಾರಂಭಿಸಿದೆ. ಬಾರಿ ವೇಗವಾಗಿ ನೀರು ಹರಿಯುತ್ತಿದ್ದು ರಾತ್ರಿ ವೇಳೆ ನೀರಿನ ಮಟ್ಟದಲ್ಲಿ ಇನ್ನಷ್ಟು ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಲಾಗಿದ್ದು ಬೆಳಿಗ್ಗೆ 6 ಗಂಟೆಯ ವೇಳೆಗೆ 8.5 ಮಿ.ಎತ್ತರದಲ್ಲಿ ಅಪಾಯದ ಮಟ್ಟವನ್ನು ತಲುಪಿದೆ.

ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಉಪ್ಪಿನಂಗಡಿಯಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿದೆ.

 ತಗ್ಗು ಪ್ರದೇಶಗಳು ಜಲಾವೃತ

ಬಂಟ್ವಾಳ ನೇತ್ರಾವತಿ ನದಿ ತೀರದ ಎಲ್ಲಾ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನದಿ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ‌.

ಪಾಣೆಮಂಗಳೂರು, ಕಂಚಿಕಾರ್ ಪೇಟೆ, ಜಕ್ರಿಬೆಟ್ಟು, ಕೈಕುಂಜೆ ಬಸ್ತಿಪಡ್ಪು ಮುಂತಾದ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಪಾಣೆಮಂಗಳೂರು ಮತ್ತು ಕಂಚಿಕಾರ್ ಪೇಟೆಯ ರಸ್ತೆಗೆ ನೀರು ಬಂದಿದೆ. ರಾತ್ರಿ ವೇಳೆ ಅತಿಯಾದ ಗಾಳಿ ಮಳೆಗೆ ನೀರಿನ ಮಟ್ಟ ಏರಿಕೆಯಾಗಿದೆ .

ತಹಶೀಲ್ದಾರ್ ಸ್ಮಿತಾ ರಾಮು , ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಟಿ.ಡಿ.ನಾಗರಾಜ್, ವಿವೇಕಾನಂದ, ಎಸ್.ಐ.ಗಳಾದ ಅವಿನಾಶ್, ಹರೀಶ್, ಮೂರ್ತಿ ಅವರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ನೆರೆ ಬರುವ ಬಗ್ಗೆ ಮುನ್ಸೂಚನೆ ಇದ್ದ ಕಾರಣ ತಾಲೂಕು ಆಡಳಿತ ಸಂಪೂರ್ಣ ಸಜ್ಜಾಗಿದೆ. ಇದರ ಜೊತೆ ಸ್ಥಳೀಯ ಬೋಟ್ ಹಾಗೂ ಮುಳುಗು ತಜ್ಞರು ಅಗ್ನಿಶಾಮಕ ದಳ ಸಂಪೂರ್ಣ ಸಜ್ಜಾಗಿ ನಿಂತಿದೆ.

ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಭಾರೀ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ನದಿ ನೀರು ಹೆದ್ದಾರಿಗೆ ನುಗ್ಗಿರುವ ಘಟನೆ ನಡೆದಿದೆ.

ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ದರ್ಪಣ ತೀರ್ಥ ಸೇತುವೆಯಿಂದ ಸುಮಾರು ಇನ್ನೂರು ಮೀಟರ್ ದೂರದವರೆಗೆ ಹೆದ್ದಾರಿ ಜಲಾವೃತಗೊಂಡಿದೆ.

ಕುಮಾರಪರ್ವತ ಸುಬ್ರಹ್ಮಣ್ಯ ಸುತ್ತಮುತ್ತ ಭಾರಿ ಮಳೆ ಹಿನ್ನೆಲೆ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಹಲವು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ನದಿಯ ಉಪನದಿ ರಾಜ್ಯ ಹೆದ್ದಾರಿಯಲ್ಲಿರುವ ದರ್ಪಣ ತೀರ್ಥ ಸೇತುವೆ ಜಲಾವೃತಗೊಂಡಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.