Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು


Team Udayavani, Sep 29, 2023, 12:37 AM IST

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

ಬೆಳ್ತಂಗಡಿ: ದ.ಕ. ಜಿಲ್ಲೆ ಸಹಿತ ಹೊರ ರಾಜ್ಯಗಳಲ್ಲಿ ಕಳವು ಮಾಡುತ್ತಾ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ನಟೋರಿಯಸ್‌ ಕಳ್ಳನನ್ನು ಉಜಿರೆ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಅಗತೀಶ್ವರಂ ನಿವಾಸಿ ಉಮೇಶ್‌ ಯಾನೆ ಉಮೇಶ್‌ ಬಳೆಗಾರ (47) ಬಂಧಿತ ಆರೋಪಿ. ಕಳೆದ ಆ. 12ರಂದು ಉಜಿರೆ ಅಜಿತ್‌ ನಗರದ ಕಲ್ಲೆ ನಿವಾಸಿ ಫೆಲಿಕ್ಸ್‌ ರೋಡ್ರಿಗಸ್‌ ಅವರ ಮನೆಗೆ ನುಗ್ಗಿದ್ದ ಈತ 6.92 ಲಕ್ಷ ರೂ. ಮೌಲ್ಯದ 173 ಗ್ರಾಂ ಚಿನ್ನಾಭರಣ, 35,000 ರೂ. ನಗದು ಕಳವು ಮಾಡಿದ ವಿಚಾರಕ್ಕೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ದ.ಕ. ಜಿಲ್ಲಾ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಿಪಿಐ ನಾಗೇಶ್‌ ಕದ್ರಿ ಹಾಗೂ ಬೆರಳಚ್ಚು ಘಟಕದ ಡಿವೈಎಸ್‌ಪಿ ಗೌರೀಶ್‌ ನೇತೃತ್ವದ ತಂಡ ಆರೋಪಿತ ಉಮೇಶ್‌ನ ಜಾಡು ಹಿಡಿದು ಮೈಸೂರಿನ ಹುನ್ಸೂರಿನಲ್ಲಿ ಬಂಧಿಸಿದ್ದಾರೆ.

ಬಾಲಾಪರಾಧಿಯಾಗಿದ್ದ
ಆತ ಮಾರಾಟ ಮಾಡಿದ್ದ ಚಿನ್ನಾಭರಣ ಸಹಿತ ವಶಕ್ಕೆ ಪಡೆಸಿದ್ದಾರೆ. ಈತ ಕುಳಾÂತ ಕಳ್ಳನಾಗಿದ್ದು, ಬಟ್ಟೆ ವ್ಯಾಪಾರ ಮಾಡುವ ನೆಪದಲ್ಲಿ ಮನೆ-ಮನೆಗಳಿಗೆ ತೆರಳುತ್ತಿದ್ದ. ಈ ಸಂದರ್ಭ ಮನೆಯಲ್ಲಿ ಜನರಿದ್ದಾರೆಯೋ, ಹೊರಗೆ ಹೋಗಿದ್ದಾರೆಯೋ ಎನ್ನುವುದನ್ನು ತಿಳಿದುಕೊಳ್ಳುತ್ತಾ ಕಳವಿಗೆ ಹೊಂಚು ಹಾಕುತ್ತಿದ್ದ. ಆರೋಪಿ ಉಮೇಶ್‌ನಿಗೆ 14 ವರ್ಷವಿರುವಾಗಲೇ ಅಪರಾಧ ಕೃತ್ಯ ಆರಂಭಿಸಿದ್ದ. ಈತ ಮೊಬೈಲ್‌ ಬಳಸದೆ ಬೇರೆಯವರ ಮೊಬೈಲ್‌ ಪಡೆದು ಕರೆ ಮಾಡುವ ಮೂಲಕ ಪೊಲೀಸರಿಗೆ ಸುಳಿವೇ ಸಿಗದಂತೆ ತಪ್ಪಿಸಿಕೊಳ್ಳುತ್ತಿದ್ದ. ಆದರೂ ಸಿಕ್ಕ ಸುಳಿವುಗಳನ್ನಾಧರಿಸಿ ಬೆಳ್ತಂಗಡಿ ಪೊಲೀಸರು ಪ್ರಕರಣ ಬೇಧಿಸಿದ್ದಾರೆ.

ಜೈಲುವಾಸ ಅನುಭವಿಸಿದ್ದ
ಈತ ಅನೇಕ ಪ್ರಕರಣಗಳಲ್ಲಿ ಈಗಾಗಲೇ ಸೆರೆವಾಸ ಅನುಭವಿಸಿ ಹೊರಬಂದಿದ್ದ. ಈತನನ್ನು ಬಂಧಿಸಲು ನಾಲ್ಕು ರಾಜ್ಯದ ವಿವಿಧ ಪೊಲೀಸ್‌ ಠಾಣೆಯ ಪೊಲೀಸರು ಹಲವು ವರ್ಷಗಳಿಂದ ಹುಟುಕಾಟ ನಡೆಸುತ್ತಿದ್ದರು. ಆದರೂ ಈತ ಕೃತ್ಯ ನಡೆಸಿ ರಾಜ್ಯದಿಂದ ಮತ್ತೂಂದು ರಾಜ್ಯಕ್ಕೆ ಪಲಾಯನ ಮಾಡುವುದಲ್ಲಿ ನಿಸ್ಸೀಮನಾಗಿದ್ದ.

ಸ್ಥಳ ಮಹಜರು
ಆರೋಪಿತ ಉಮೇಶ್‌ನನ್ನು ಸೆ. 28ರಂದು ಕಳ್ಳತನ ನಡೆಸಿದ ಉಜಿರೆ ಮನೆಗೆ ಕರೆದೊಯ್ದು ಪೊಲೀಸರು ಮಹಜರು ನಡೆಸಿ ಪೊಲೀಸ್‌ ಕಷ್ಟಡಿಗೆ ಪಡೆದಿದ್ದಾರೆ. ಸೆ. 29ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್‌ ಠಾಣೆಯ ಪಿಎಸ್‌ಐ ಧನರಾಜ್‌ ಟಿ.ಎಂ., ಚಂದ್ರಶೇಖರ ಎ.ಎಂ., ಎಎಸ್‌ಐ ಕೆ.ಜೆ. ತಿಲಕ್‌, ಶಿವರಾಮ ನಾಯ್ಕ, ಎಚ್‌ಸಿ ಬೆನ್ನಿಚ್ಚನ್‌, ಸುಂದರ ಶೆಟ್ಟಿ, ಪಳನಿವೇಲು, ಪ್ರಮೋದ್‌, ಇಬ್ರಾಹಿಂ, ಸಂಪತ್‌, ಪಿಸಿ ಚರಣ ರಾಜ್‌, ಆನಂದ ಹಾಗೂ ಜಿಲ್ಲಾ ಪೊಲೀಸ್‌ ಗಣಕಯಂತ್ರ ವಿಭಾಗದ ದಿವಾಕರ್‌, ಸಂಪತ್‌ ಅವರಿದ್ದ ತಂಡ ಆರೋಪಿಯ ಪತ್ತೆ ಕಾರ್ಯದಲ್ಲಿದ್ದರು.

15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು
ಆರೋಪಿ ಉಮೇಶ್‌ ಪುತ್ತೂರು ನಗರ ಠಾಣೆ, ಸುಳ್ಯ, ಬಂಟ್ವಾಳ, ಮಂಗಳೂರಿನಲ್ಲಿ ಬಂದರು ಠಾಣೆ, ಉರ್ವ ಠಾಣೆ, ಮೂಡುಬಿದಿರೆ ಠಾಣೆ ಮತ್ತು ಕೇರಳ ರಾಜ್ಯದ ಕಾಸರಗೋಡು, ಕುಂಬಳೆ, ಪಾಲಕ್ಕಾಡು, ತೃಶ್ಯೂರ್‌, ತಿರುವನಂತಪುರ ಹಾಗೂ ತಮಿಳುನಾಡು ರಾಜ್ಯದ ಸೇಲಮ್‌, ಧರ್ಮಪುರಿ, ಕನ್ಯಾಕುಮಾರಿ, ದಿಂಡುಗಲ್ಲು ಮತ್ತು ಆಂಧ್ರ ರಾಜ್ಯದ ವೈಜಾಕ್‌ ಠಾಣಾ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಳ್ಳತನ ಮಾಡಿರುವುದು ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ.

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.