ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಕ್ರಮ: ಭೋಜೇಗೌಡ


Team Udayavani, Feb 2, 2019, 7:39 AM IST

february-15.jpg

ಸುಬ್ರಹ್ಮಣ್ಯ: ಸಮಾಜದ ಮುಖ್ಯ ವಾಹಿನಿಯಲ್ಲಿ ಕೆಲಸ ಮಾಡುವ ಶಿಕ್ಷಕರು, ಉಪನ್ಯಾಸಕರು ತಮ್ಮ ಹಕ್ಕುಗಳಿಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವುದು ನೋವಿನ ಸಂಗತಿ. ಕಳೆದ 20ಕ್ಕೂ ಅಧಿಕ ವರ್ಷಗಳಿಂದ ಜಡ್ಡುಗಟ್ಟಿದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಶಿಕ್ಷಣ ಮಂತ್ರಿಯ ಜವಾಬ್ದಾರಿ ಹೊಂದಿರುವ ಮುಖ್ಯಮಂತ್ರಿಗಳು ಕಟಿಬದ್ಧರಾಗಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಎಸ್‌.ಎಲ್‌. ಭೋಜೇಗೌಡ ಹೇಳಿದರು.

ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಅವರು ಪದವಿಪೂರ್ವ ಕಾಲೇಜು ಶಿಕ್ಷಕರು ಮತ್ತು ಉಪನ್ಯಾಸಕರ ಸಮಸ್ಯೆ ಆಲಿಸಿ ಅವರು ಮಾತನಾಡಿದರು.

ಶಿಕ್ಷಕರ ಪ್ರತಿನಿಧಿಯಾಗಿ ನಾನು ಶಿಕ್ಷಕರ ಹಲವಾರು ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಮುಖ್ಯಮಂತ್ರಿಗಳು ಕೂಡ ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಭಡ್ತಿ ಉಪನ್ಯಾಸಕರ ಸಮಸ್ಯೆ ನಿವಾರಿಸಲಾಗಿದೆ. ಎಕ್ಸ್‌ಗ್ರೇಷಿಯಾ 200 ಮತ್ತು 400ನ್ನು ಪ್ರಾಥಮಿಕ, ಪ್ರೌಢ ಶಿಕ್ಷಕರಿಗೆ ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ನೀಡಲಾಗಿದೆ. 2 ಲಕ್ಷಕ್ಕೂ ಅಧಿಕ ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ವೇತನ ತಾರತಮ್ಯ ವ್ಯವಸ್ಥೆ ಸರಿಪಡಿಸಲಾಗಿದೆ. ಪ್ರಾಂಶುಪಾಲರ ವೇತನದಲ್ಲಿ ಒಂದು ಸಾವಿರ ರೂ. ವ್ಯತ್ಯಯವಿತ್ತು. ಅದನ್ನು ಸರಿಪಡಿಸಲಾಗಿದೆ ಎಂದರು.

ಅತಿಥಿ ಉಪನ್ಯಾಸಕರಿಗೆ ಭದ್ರತೆ
ಕಾಲ್ಪನಿಕ ವೇತನದ ಬಗ್ಗೆ ಚರ್ಚೆ ನಡೆಯುತ್ತಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ,. ನೆಟ್, ಸ್ಲೆಟ್, ಪಿಎಚ್‌ಡಿ ಮಾಡಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲಾಗುವುದು. 10, 15 ವರ್ಷಗಳಿಂದ ದುಡಿಯುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಟ್ಟು ಅನಂತರ ಉಳಿದವರಿಗೆ ಹೊಸ ಆಯೋಗದ ಪ್ರಕಾರ ಮೆರಿಟ್ ಆಧಾರದಲ್ಲಿ ನೇಮಕ ಮಾಡಲಾಗುವುದು ಎಂದವರು ಹೇಳಿದರು.

ಪ್ರಾಂಶುಪಾಲೆ ಸಾವಿತ್ರಿ, ಉಪಪ್ರಾಂಶುಪಾಲೆ ರೇಖಾರಾಣಿ, ಪ್ರೌಢಶಾಲಾ ವಿಭಾಗ ಮುಖ್ಯಸ್ಥ ಯಶವಂತ ರೈ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯೆ ಲೕಲಾ ಜಾಕೆ ಉಪಸ್ಥಿತರಿದ್ದರು. ಉಪನ್ಯಾಸ ಸೋಮಶೇಖರ್‌ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Ajekar: ರಿಕ್ಷಾ-ಬೊಲೆರೊ ಢಿಕ್ಕಿ: ಐವರಿಗೆ ಗಾಯ

Ajekar: ರಿಕ್ಷಾ-ಬೊಲೆರೊ ಢಿಕ್ಕಿ: ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.