Kadaba: ಸಿದ್ಧವಾಯಿತು ಪಾಲೋಳಿ ಸರ್ವಋತು ಸೇತುವೆ

19.68 ಕೋ.ರೂ. ವೆಚ್ಚ ; ಸಂಚಾರಕ್ಕೆ ತೆರೆಯಲು ಆಗ್ರಹ ; ನನಸಾಗುತ್ತಿದೆ ಬಹುಕಾಲದ ಕನಸು

Team Udayavani, Aug 26, 2024, 1:08 PM IST

Kadaba: ಸಿದ್ಧವಾಯಿತು ಪಾಲೋಳಿ ಸರ್ವಋತು ಸೇತುವೆ

ಕಡಬ: ಕುಮಾರಾಧಾರಾ ನದಿಗೆ ಪಾಲೋಳಿಯಲ್ಲಿ ನಿರ್ಮಾಣ ಗೊಂಡಿರುವ ಸರ್ವಋತು ಸೇತುವೆಯ ಕಾಮಗಾರಿ ಪೂರ್ಣಗೊಂಡಿದ್ದು, ಜನರ ಬಹುಕಾಲದ ಕನಸು ನನಸಾಗಿದೆ.

ಕಡಬ ಹಾಗೂ ಎಡಮಂಗಲ ಗ್ರಾಮ ಗಳನ್ನು ಬೆಸೆಯುವ ಈ ಸೇತುವೆಯ ಕಾಮಗಾರಿ 2022 ನವೆಂಬರ್‌ನಲ್ಲಿ ಪ್ರಾರಂಭಗೊಂಡಿತ್ತು. ಕಳೆದ ವರ್ಷ ಮಳೆ ಗಾಲದ ಕಾರಣದಿಂದಾಗಿ ಕೆಲವು ತಿಂಗಳು ಕಾಮಗಾರಿ ನಿಲ್ಲಿಸಲಾಗಿತ್ತು. ಬಳಿಕ ಶೀಘ್ರ ವಾಗಿ ಕಾಮಗಾರಿ ನಡೆದು ಈಗ ಪೂರ್ಣಗೊಂಡಿದೆ. ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್‌ ಪ್ರಮೋದ್‌ಕುಮಾರ್‌ ಕೆ.ಕೆ. ಉಸ್ತುವಾರಿಯಲ್ಲಿ ಸೇತುವೆಗೆ ಬಣ್ಣ ಬಳಿಯುವುದು, ಸೋಲಾರ್‌ ದೀಪಗಳ ಅಳವಡಿಕೆ ಕಾರ್ಯವೂ ಪೂರ್ಣಗೊಂಡಿದೆ.

ಗ್ರಾಮಸ್ಥರಿಂದಲೇ ತಾತ್ಕಾಲಿಕೆ ಸೇತುವೆ
ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ ಕಳೆದ ಕೆಲವು ವರ್ಷಗಳಿಂದ ಇಲ್ಲಿ ತಾತ್ಕಾಲಿಕ ನೆಲೆಯ ಸೇತುವೆ ನಿರ್ಮಾಣ ಮಾಡಿ ಬೇಸಗೆಯಲ್ಲಿ ವಾಹನ ಸಂಚರಿಸಲು ವ್ಯವಸ್ಥೆಮಾಡಿಕೊಂಡಿದ್ದರು. ಇಲ್ಲಿ ಬೇಸಗೆಯಲ್ಲಿ ಉಪಯೋಗಿಸಬಹುದಾದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುವ ಕಲ್ಪನೆಯನ್ನು ಕಂಡವರು ಸ್ಥಳೀಯ ಕುಮಾರಧಾರಾ ಯುವಕ ಮಂಡಲದ ಯುವಕರು. ಅದರ ಫಲವಾಗಿ 10 ವರ್ಷಗಳ ಹಿಂದೆ ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ ಸುಮಾರು 120 ಮೀ. ಉದ್ದದ 10 ಮೀ. ಆಗಲದ ಸೇತುವೆ ನಿರ್ಮಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ಕೊಚ್ಚಿಹೋಗುವ ಕಚ್ಚಾ ಸೇತುವೆಯನ್ನು ಪ್ರತೀ ಬೇಸಗೆಯಲ್ಲಿ ಊರವರು ಪುನರ್ನಿರ್ಮಾಣ ಮಾಡುತ್ತಲೇ ಬಂದಿದ್ದರು.

ವಾಹನ ಸಂಚಾರಕ್ಕೆ ತೆರೆಯಲು ಆಗ್ರಹ
ನೂತನ ಸೇತುವೆಯ ಮೇಲೆ ಸಂಚರಿಸಲು ಜನರು ಕಾತರದಿಂದ ಕಾಯುತ್ತಿದ್ದಾರೆ. ಆದುದರಿಂದ ಸಂಬಂಧಪಟ್ಟವರು ಸೇತುವೆಯನ್ನು ಶೀಘ್ರ ಸಾರ್ವಜನಿಕರ ಬಳಕೆಗೆ ಬಿಟ್ಟುಕೊಡಬೇಕೆನ್ನುವುದು ನಮ್ಮೆಲ್ಲರ ಆಗ್ರಹವಾಗಿದೆ. .
-ಸಾಂತಪ್ಪ ಗೌಡ ಪಿಜಕಳ, ಪಾಲೋಳಿ ಶಾಶ್ವತ ಸೇತುವೆ ಹೋರಾಟ ಸಮಿತಿ ಮುಂದಾಳು.

175 ಮೀ. ಉದ್ದದ ಸೇತುವೆ
ಪರಿಸರದ ಜನರ ನಿರಂತರ ಹೋರಾಟದ ಫಲವಾಗಿ ಸರಕಾರವು ಲೋಕೋಪಯೋಗಿ ಇಲಾಖೆಯ ಮುಖಾಂತರ ಪಾಲೋಳಿ ಸೇತುವೆ ನಿರ್ಮಾಣಕ್ಕೆ 19.68 ಕೋಟಿ ರೂ.ಅನುದಾನ ಮಂಜೂರಾಗಿತ್ತು. 175 ಮೀ. ಉದ್ದದ ಈ ಸೇತುವೆ 12 ಮೀ. ಅಗಲದಲ್ಲಿ (ಒಂದು ಬದಿಯಲ್ಲಿ ಫೂಟ್‌ಪಾತ್‌ ಸೇರಿದಂತೆ) ನಿರ್ಮಾಣವಾಗಿದ್ದು, ಸೇತುವೆಯ ಎಡಮಂಗಲ ಭಾಗದಲ್ಲಿನ 675 ಮೀ. ಸಂಪರ್ಕದ ಕಚ್ಛಾ ರಸ್ತೆಯ ಸ್ವಲ್ಪ ಭಾಗವನ್ನು ಕಾಂಕ್ರೀಟ್‌ ಸಹಿತ ಅಭಿವೃದ್ಧಿಪಡಿಸಲಾಗಿದೆ. ಪಿಜಕಳ ಭಾಗದ ಸಂಪರ್ಕ ರಸ್ತೆ (100 ಮೀ.) ಯನ್ನು ಕಾಂಕ್ರೀಟ್‌ ಹಾಸಿ ಅಭಿವೃದ್ಧಿಪಡಿಸುವ ಕೆಲಸ ನಡೆಯಲಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.