ಆಡಳಿತ ಮಂಡಳಿಯೇ ಇಲ್ಲದ ಕಡಬ ಪಟ್ಟಣ ಪಂಚಾಯತ್‌!

ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

Team Udayavani, Jun 11, 2024, 2:34 PM IST

ಆಡಳಿತ ಮಂಡಳಿಯೇ ಇಲ್ಲದ ಕಡಬ ಪಟ್ಟಣ ಪಂಚಾಯತ್‌!

ಕಡಬ: ಕಡಬ ಹಾಗೂ ಕೋಡಿಂಬಾಳ ಗ್ರಾಮಗಳನ್ನೊಳ ಗೊಂಡ ಕಡಬ ಗ್ರಾಮ ಪಂಚಾಯತ್‌ ಪಟ್ಟಣ ಪಂಚಾಯತ್‌ ಆಗಿ
ಮೇಲ್ದಜೇìಗೇರಿ ನಾಲ್ಕು ವರ್ಷಗಳು ಸಂದರೂ ಇಲ್ಲಿಗೆ ಆಡಳಿತ ಮಂಡಳಿ ಚುನಾವಣೆಯೇ ನಡೆದಿಲ್ಲ.ಆರಂಭ ದಿಂದಲೂ ಅಧಿಕಾರಿಗಳ ಪಾರು ಪತ್ಯದಲ್ಲೇ ಇರುವ ಇಲ್ಲಿನ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ.

ಕಡಬ ತಾಲೂಕು ಕೇಂದ್ರವಾಗಿ ರೂಪುಗೊಂಡ ಬಳಿಕ ತಾಲೂಕು ಕೇಂದ್ರವಾಗಿರುವ ಕಡಬ ಪಟ್ಟಣ ಗ್ರಾಮ ಪಂಚಾಯತ್‌ನಿಂದ ಸಹಜವಾಗಿ ಜನಸಂಖ್ಯೆ ಆಧಾರದಲ್ಲಿ ಪ. ಪಂ.ಆಗಿ ಮೇಲ್ದರ್ಜೆಗೇರಿದೆ. ಹಿಂದೆ ಗ್ರಾಮ ಪಂಚಾಯತ್‌ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದಲ್ಲಿಯೇ ಪಟ್ಟಣ ಪಂಚಾಯತ್‌ ಕಾರ್ಯನಿರ್ವಹಿಸುತ್ತಿದ್ದು, ಹಿಂದೆ ಗ್ರಾ. ಪಂ.ನಲ್ಲಿ ಸಿಬಂದಿಯಾಗಿದ್ದವರೇ
ಪಟ್ಟಣ ಪಂಚಾಯತ್‌ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಗ್ರಾ. ಪಂ.ನಿಂದ ಪ. ಪಂ.ಗೆ ಮೇಲ್ದಜೇìಗೇರಿದಾಗ
ಒಂದೆರಡು ವರ್ಷ ಕಡತಗಳನ್ನು ತಯಾರಿಸಿ ಕಂಪ್ಯೂಟರ್‌ ಗೆ ಅಪ್‌ಲೋಡ್‌ ಮಾಡುವುದೇ ಕೆಲಸವಾಯಿತು. ಪ್ರಾರಂಭದಲ್ಲಿ ಪ್ರಭಾರ ಮುಖ್ಯಾಧಿಕಾರಿ ಕಾರ್ಯನಿರ್ವಹಿಸಿದರೆ ಬಳಿಕ ಮುಖ್ಯಾಧಿಕಾರಿ ಹುದ್ದೆ ಭರ್ತಿ ಮಾಡಲಾಯಿತು. ಆಡಳಿತಾಧಿಕಾರಿ
ಯಾಗಿ ತಹಶೀಲ್ದಾರ್‌ ಕಾರ್ಯ ನಿರ್ವಹಿಸುತ್ತಿದ್ದಾರೆ.

ಹುದ್ದೆಗಳು ಖಾಲಿ
ಮುಖ್ಯಾಧಿಕಾರಿ ಹುದ್ದೆ ಮಾತ್ರ ಭರ್ತಿಯಾಗಿದ್ದು, ಆರೋಗ್ಯ ನಿರೀಕ್ಷಕರು, ಎಂಜಿನಿಯರ್‌ ಹುದ್ದೆಗಳು ಪ್ರಭಾರವಾಗಿ ಕಾರ್ಯನಿರ್ವಹಿಸುತ್ತಿದೆ. ಒಟ್ಟು 40 ಹುದ್ದೆಗಳಿದ್ದು ಆ ಪೈಕಿ 33 ಹುದ್ದೆಗಳು ಖಾಲಿ ಇವೆ. ಪೌರ ಕಾರ್ಮಿಕರನ್ನು ನೇರ ಪಾವತಿಯಲ್ಲಿ ನೇಮಕ ಮಾಡಿಕೊಳ್ಳಲಾಗಿದೆ.

ಕೆಲವು ಸಿಬಂದಿಯನ್ನು ಹೊರ ಗುತ್ತಿಗೆಯಾಧಾರಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಎಂಜಿನಿಯರ್‌ ಹಾಗೂ ಆರೋಗ್ಯ ನಿರೀಕ್ಷಕರು ವಾರದಲ್ಲಿ ಒಂದು ದಿನ ಮಾತ್ರ ಕಡಬದಲ್ಲಿ ಲಭ್ಯವಿರುತ್ತಾರೆ. ಅವರು ಯಾವ ದಿನ ಲಭ್ಯರಿರುತ್ತಾರೆ ಎನ್ನುವ ಮಾಹಿತಿಯೂ ಸ್ಪಷ್ಟವಿಲ್ಲ. ಅದರಿಂದಾಗಿ ಜನ ಸಾಮಾನ್ಯರಿಗೆ ತೀವ್ರ  ತೊಂದರೆಯಾಗುತ್ತಿದೆ.

ಕೆಲಸಗಳಿಗೆ ಅಲೆದಾಟ; ಜನರ ಆಕ್ರೋಶ
ವ್ಯಾಪಾರ ಪರವಾನಿಗೆಯಿಂದ ಹಿಡಿದು ವಿವಿಧ ಕೆಲಸ ಕಾರ್ಯಗಳಿಗೆ ದಿನ ನಿತ್ಯ ಹಲವಾರು ಗ್ರಾಮಸ್ಥರು ಪಂ.ಗೆ ಭೇಟಿ ನೀಡುತ್ತಿದ್ದು, ಇಲ್ಲಿ ಕೆಲಸಗಳಿಗಾಗಿ ಪದೇ ಪದೇ ಅಲೆದಾಡಬೇಕಿದೆ ಎನ್ನುವುದು ಬಹುತೇಕ ಗ್ರಾಮಸ್ಥರ ಆರೋಪ. ಬಹುತೇಕ ಸಂದರ್ಭಗಳಲ್ಲಿ ಇಲ್ಲಿ ಕೊಟ್ಟ ಅರ್ಜಿಗಳು, ದಾಖಲೆಗಳು ನಾಪತ್ತೆ ಯಾಗುತ್ತವೆ. ತಿಂಗಳು ಗಟ್ಟಳೆ ಅದನ್ನು ಹುಡುಕಿ ಕೊನೆಗೆ ಹೊಸ ಅರ್ಜಿ, ದಾಖಲೆ ಕೊಡುವ ಪರಿಸ್ಥಿತಿ ಎದುರಾದ ಹಲವು ಉದಾಹರಣೆಗಳು ಇಲ್ಲಿವೆ. ಇಲ್ಲಿನ ಕೆಲವು ಸಿಬಂದಿ ಕಚೇರಿಗೆ ಬರುವ
ಜನರ ಜತೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳೂ ಇವೆ.

ಸಮರ್ಪಕವಾಗಿ ಅನುದಾನ ಬಳಕೆಯಾಗಿಲ್ಲ
ಪಟ್ಟಣ ಪಂಚಾಯತ್‌ ನಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ಈಗಾಗಲೇ ನಡೆದಿವೆ. ಆದರೆ ಅನುದಾನಗಳು ಸಮರ್ಪಕವಾಗಿ ಬಳಕೆಯಾಗಿಲ್ಲ ಎನ್ನುವ ಆರೋಪ ಬಲವಾಗಿ ಕೇಳಿ ಬರುತ್ತಿದೆ. ಅದಕ್ಕೆ ಪೂರಕ ಎಂಬಂತೆ ಕೆಲವು ದಿನಗಳ ಹಿಂದೆ ಕಡಬಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ನಗರೋತ್ಥಾನ ಯೋಜನೆಯ ಕಾಮಗಾರಿ ಪರಿಶೀಲಿಸಿ ಎಂಜಿನಿಯರ್‌ ಹಾಗೂ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

13 ವಾರ್ಡ್‌ಗಳಾಗಿ ವಿಂಗಡಣೆ
ಕಳಾರ, ಕೋಡಿಬೈಲು, ಪನ್ಯ, ಬೆದ್ರಾಜೆ, ಮಾಲೇಶ್ವರ, ಕಡಬ, ಪಣೆಮಜಲು, ಪಿಜಕಳ, ಮೂರಾಜೆ, ದೊಡ್ಡಕೊಪ್ಪ, ಕೋಡಿಂಬಾಳ, ಮಜ್ಜಾರು, ಪುಳಿಕುಕ್ಕು ಎಂದು 13 ವಾರ್ಡುಗಳನ್ನಾಗಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯನ್ನು ವಿಂಗಡಣೆ ಮಾಡಲಾಗಿದೆ. 2011ರ ಜನಗಣತಿ ಪ್ರಕಾರ ಎರಡು ಗ್ರಾಮಗಳಲ್ಲಿ 10500 ಜನಸಂಖ್ಯೆ ಇದೆ.

ನಗರಾಭಿವೃದ್ಧಿ ಸಚಿವರಿಗೆ ಮನವಿ
ಕಡಬ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ವಾರ್ಡ್‌ ವಿಂಗಡಣೆ ಇತ್ಯಾದಿ ಕೆಲಸಗಳು ಈಗಾಲೇ ಪೂರ್ತಿಗೊಂಡಿದೆ. ಅಗತ್ಯ ಸಿಬಂದಿ ನೇಮಕ ಮತ್ತು ಶೀಘ್ರ ಇಲ್ಲಿ ಚುನಾವಣೆ ನಡೆಸಿ ಜನರಿಗೆ ಅನುಕೂಲವಾಗುವಂತೆ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳನ್ನು ಆರಿಸಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವರಲ್ಲಿ ಮನವಿ ಮಾಡಲಾಗುವುದು.
*ಭಾಗೀರಥಿ ಮುರುಳ್ಯ, ಶಾಸಕರು, ಸುಳ್ಯ

*ನಾಗರಾಜ್‌ ಎನ್‌. ಕೆ

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.