![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 8, 2024, 11:24 PM IST
ಬಂಟ್ವಾಳ: ಕೆಲವು ದಿನಗಳ ಹಿಂದೆ ಬಿ.ಸಿ. ರೋಡಿನ ಕೈಕಂಬದಲ್ಲಿ ಸುಮಾರು 12 ಅಂಗಡಿಗಳಿಗೆ ನುಗ್ಗಿ ನಗದು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು ಬೆಂಗ್ರೆ ನಿವಾಸಿ ಮಹಮ್ಮದ್ ಆಸಿಫ್ (33) ಬಂಧಿತ ಆರೋಪಿಯಾಗಿದ್ದು, ಪ್ರಕರಣದ ಹಿಂದಿರುವ ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಬಂಧಿತನ ವಿರುದ್ಧ ಈಗಾಗಲೇ ವಿವಿಧ ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದೆ. ಆರೋಪಿಯು ಸುಮಾರು 12 ಅಂಗಡಿಗಳಿಗೆ ನುಗ್ಗಿ ಮೂರು ಅಂಗಡಿಗಳಿಂದ ಒಟ್ಟು 61 ಸಾವಿರ ರೂ. ನಗದು ಕಳವು ಮಾಡಿದ್ದ.
ಆತ ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಬಂದು ಅಂಗಡಿಗಳಿಗೆ ನುಗ್ಗುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿತ್ತು. ಅಂಗಡಿಗಳ ಮಾಲಕರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಬಂಟ್ವಾಳ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.