Kaikamba; ಮನೆಯಿಂದ ಸೊತ್ತುಗಳ ಕಳವು: ಇಬ್ಬರು ಆರೋಪಿಗಳ ಸೆರೆ
Team Udayavani, Apr 6, 2024, 12:31 AM IST
ಕೈಕಂಬ: ಬಡಗ ಎಡಪದವು ತಿಪ್ಲಬೆಟ್ಟು ಕೆ. ಯುವರಾಜ್ ಆಚಾರ್ಯ ಅವರ ಮನೆಯಲ್ಲಿ 1.40 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಬಡಗ ಎಡಪದವಿನ ಉರ್ಕಿ ಬೆಟ್ಟು ಜ್ವಾರಮನೆಯ ರವಿ ಶೆಟ್ಟಿ (55) ಮತ್ತು ಮೂಡುಬಿದಿರೆ ತೋಡಾರ್ ಗ್ರಾಮದ ಕಲ್ಲಸಂಕ ನಿವಾಸಿ ಶಿವಪ್ರಸಾದ್ ಶೆಟ್ಟಿ (29) ಬಂಧಿತ ಆರೋಪಿಗಳು. ಮೂಡುಬಿದಿರೆ ಸ್ವರಾಜ್ ಮೈದಾನದ ಸಮೀಪದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು.
ಎಲ್ಲ ಸೊತ್ತುಗಳು ಪೊಲೀಸರ ವಶಕ್ಕೆಅವರು ಬೀಗವನ್ನು ಒಡೆದು ಮನೆಯಲ್ಲಿದ್ದ ಸುಮಾರು 1.40 ಲಕ್ಷ ರೂಪಾಯಿ ಬೆಲೆಬಾಳುವ ಕೇಬಲ್, ಫ್ಯಾನ್, ಬಾಗಿಲು, ಕಿಟಕಿ ಇನ್ನಿತರ ವಸ್ತುಗಳನ್ನು ಕಳವು ಮಾಡಿದ ಬಗ್ಗೆ ಎ. 3ರಂದು ಪ್ರಕರಣ ದಾಖಲಾಗಿತ್ತು. ಕಳವು ಮಾಡಿದ್ದ ಎಲ್ಲ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ನಿರೀಕ್ಷಕರ ನೇತೃತ್ವದ ಪತ್ತೆ ತಂಡ
ಆರೋಪಿಗಳ ಪತ್ತೆ ಕಾರ್ಯಕ್ಕೆ ಬಜಪೆ ಠಾಣೆಯ ಪೊಲೀಸ್ ನಿರೀಕ್ಷಕ ನಂದೀಶ್ವರ್ ಬಿ. ಕುಂಬಾರ ನೇತೃತ್ವದ ತಂಡ ರಚನೆ ಮಾಡಲಾಗಿತ್ತು. ಅವರೊಂದಿಗೆ ತಂಡದಲ್ಲಿದ್ದ ಪಿಎಸ್ಸೆ„ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ, ರವಿ ಎನ್.ಎನ್., ಶೋಭಾ ಆರ್. ಹಾಗೂ ಎಎಸ್ಐ ರಾಮ ಪೂಜಾರಿ ಮತ್ತು ಸಿಬಂದಿ ಸುಜನ್, ಪುರುಷೋತ್ತಮ, ರಶೀದ್, ದೇವಪ್ಪ ಹೊಸಮನಿ, ಬಸವರಾಜ್ ಪಾಟೀಲ್, ಪ್ರಕಾಶ್ ಚಿದಾನಂದ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.