![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 4, 2023, 6:45 AM IST
ವಿಟ್ಲ: ಹಳೆಯ ದ್ವೇಷವನ್ನಿಟ್ಟುಕೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಶನಿವಾರ ಕಂಬಳಬೆಟ್ಟುವಿನಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಮಹಮ್ಮದ್ ಸರ್ವನ್ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರ ಮೂವರು ಹಲ್ಲೆ ಮಾಡಿದ ಆರೋಪಿಗಳು.
ಕಂಬಳಬೆಟ್ಟುವಿನಲ್ಲಿ ಅಕ್ರಮ ಕೂಟ ಸೇರಿಕೊಂಡು ಮಹಮ್ಮದ್ ಸರ್ವನ್ ಅವರನ್ನು ಕಾರಿನಿಂದ ಕೆಳಗೆ ಎಳೆದು ಕೈಯಿಂದ ಮುಖಕ್ಕೆ, ಬೆನ್ನಿಗೆ, ಹೊಟ್ಟೆಗೆ ಹೊಡೆದರಲ್ಲದೇ ತುಳಿದಿದ್ದಾರೆ. ಸರ್ವನ್ ಜತೆ ಕೆಲಸ ಮಾಡುವ ಫಾರೂಕ್ ತಡೆಯಲು ಬಂದಾಗ ಮರದ ದೊಣ್ಣೆಯಿಂದ ಆತನ ತಲೆಗೆ, ಬೆನ್ನಿಗೆ ಹೊಡೆದಿದ್ದಾರೆ. ಬಳಿಕ ಜೀವ ಬೆದರಿಕೆ ಹಾಕಿ ದೊಣ್ಣೆಯನ್ನು ಅಲ್ಲೇ ಎಸೆದು ಹೋಗಿದ್ದಾರೆಂದು ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಗಾಯಾಳು ಮಹಮ್ಮದ್ ಸರ್ವನ್ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದರೆ, ಫಾರೂಕ್ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.