ಕಾವು: ದೇವರ ಆರಾಧನೆಯಿಂದ ಇಷ್ಟಾರ್ಥ ಸಿದ್ಧಿ


Team Udayavani, Jan 12, 2020, 4:05 AM IST

18

ಬಡಗನ್ನೂರು: ಧನು ಸಂಕ್ರಮಣದ ಸಂದರ್ಭದಲ್ಲಿ ಪ್ರಾತಃಕಾಲ ದೇವರ ಆರಾಧನೆಯಿಂದ ದೇವರು ಪ್ರಸನ್ನರಾಗಿ ಇಷ್ಟಾರ್ಥ ಸಿದ್ಧಿ ಆಗುತ್ತದೆ ಎಂಬುದು ಸನಾತನ ಹಿಂದೂ ಸಂಸ್ಕೃತಿಯ ನಂಬಿಕೆ.

ಪೂರ್ವ ಪರಂಪರೆಯಿಂದಲೂ ಕಾವು ಪಂಚಲಿಂಗೇಶ್ವರನಿಗೆ ತಿಂಗಳ 30 ದಿವಸವೂ ಧನು ಪೂಜೆ ನಡೆಯುತ್ತಿತ್ತು. ಆದರೆ ಬಳಿಕ ನಿಂತು ಹೋಗಿತ್ತು. ಆ ಬಳಿಕ ಧನುರ್ಮಾಸದಲ್ಲಿ ಪವಿತ್ರಪಾಣಿ ಅಚ್ಯುತ ಮೂಡಿತ್ತಾಯ ಮನೆಯ ವತಿಯಿಂದ ಧನುಪೂಜೆ ನಡೆಯುತ್ತಿತು. ಅದು ಈಗಲೂ ಪೂರ್ವ ಪದ್ಧತಿಯಂತೆ ನಡೆಯುತ್ತಿದೆ. ಅನಂತರದ ವರ್ಷಗಳಲ್ಲಿ ಸಾರ್ವಜನಿಕ ಸಹಯೋಗದಲ್ಲಿ ತಿಂಗಳ 30 ದಿನಗಳಲ್ಲೂ ಸೇವಾ ರೂಪದಲ್ಲಿ ಧನುಪೂಜೆ ನಡೆಯುತ್ತಿದ್ದು, ಆಸುಪಾಸಿನ ನೂರಾರು ಭಕ್ತರು ಬಂದು ಶ್ರೀ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ಸುತ್ತಲೂ ಪ್ರಕೃತಿ ಸೌಂದರ್ಯಗಳಿಂದ ಕಂಗೊಳಿಸುವ ಪಂಚಲಿಂಗೇಶ್ವರ ದೇವರಿಗೆ ದೇವಾಲಯದಲ್ಲಿ ವರ್ಷದ 365 ದಿನಗಳಲ್ಲೂ ಬೆಳಗ್ಗೆ 5.30ಕ್ಕೆ, ಮಧ್ಯಾಹ್ನ 12 ಹಾಗೂ ಸಾಯಂಕಾಲ 7 ಗಂಟೆಗೆ ನಿತ್ಯ ಪೂಜೆ ನಡೆಯುತ್ತಿದೆ. ಧನುರ್‌ ಮಾಸ ಸಂದರ್ಭದಲ್ಲಿ ಮುಂಜಾನೆ 5 ಗಂಟೆಗೆ ಧನು ಪೂಜೆ ಆಗುತ್ತದೆ. ಬಳಿಕ ನಿತ್ಯಪೂಜೆ ನಡೆಯುತ್ತದೆ. ಮಕರ ಸಂಕ್ರಮಣ ಪೂಜೆಗೆ ಸಾವಿರಾರು ಭಕ್ತರು ಸಾಕ್ಷಿಯಾಗುತ್ತಾರೆ.

ಹುಗ್ಗಿ ಪ್ರಸಾದ ಸಮರ್ಪಣೆ
ಧನು ಪೂಜೆ ದಿನಗಳಲ್ಲಿ ಅರ್ಚಕರು ಪ್ರಾತಃಕಾಲ ದೇವಸ್ಥಾನದ ಗರ್ಭಗುಡಿಯ ಬಾಗಿಲು ತೆರೆದು ರುದ್ರಾಭಿಷೇಕ, ಸೀಯಾಳ ಅಭಿಷೇಕ ನೆರವೇರಿಸಿ, ಬಳಿಕ ಮುಂಜಾನೆ 5ಕ್ಕೆ ಪೂಜಾ ಕಾರ್ಯ ಪೂರ್ಣಗೊಳಿಸುತ್ತಾರೆ. ಧನುಪೂಜೆ ಸಂದರ್ಭದಲ್ಲಿ ದೇವರಿಗೆ ಅಕ್ಕಿ, ತೆಂಗಿನಕಾಯಿ, ಹೆಸರುಬೇಳೆ, ಕಾಳುಮೆಣಸು ಹುಡಿ, ಬೆಲ್ಲ ಬೆರೆಸಿ ಹುಗ್ಗಿ ನೈವೇದ್ಯ ಸಮರ್ಪಣೆ ಮಾಡಲಾಗುತ್ತದೆ. ಬಳಿಕ ಭಕ್ತರಿಗೆ ಅದನ್ನೇ ಪ್ರಸಾದವಾಗಿ ವಿತರಣೆ ಮಾಡಲಾಗುತ್ತದೆ. ಮಕರ ಸಂಕ್ರಾಂತಿ ದಿನದಂದು ಉಪಾಹಾರ ವ್ಯವಸ್ಥೆ ಮಾಡಲಾಗುತ್ತದೆ.

ಪೂರ್ವಕಾಲದಿಂದಲೂ ಪಂಚಲಿಂಗೇಶ್ವರ ದೇವರಿಗೆ ಧನು ಪೂಜೆ ನಡೆಯುತ್ತಿದೆ. ತಿಂಗಳ ಮೂವತ್ತು ದಿನಗಳಲ್ಲಿಯೂ ಧನು ಪೂಜೆ ನಡೆಯುತ್ತಿತ್ತು. ಆನಂತರ ಪ್ರತಿ ದಿನ ಮಾಡದೆ ಧನುರ್‌ ಮಾಸದ ಯತಿಪಾಠಯೇವ ತಿಥಿ ದಿವಸದಂದು ನಮ್ಮ ಮನೆಯ ವತಿಯಿಂದ ಒಂದು ಪೂಜೆ ಮಾಡಲಾಗುತ್ತಿತ್ತು. ಅನಂತರದ ದಿನಗಳಲ್ಲಿ ಸಾರ್ವಜನಿಕ ಸಹಯೋಗದಲ್ಲಿ ಪ್ರತಿ ನಿತ್ಯ ಒಂದು ತಿಂಗಳು ಧನುಪೂಜೆ ಮಾಡಲಾಗುತ್ತದೆ.
-ಅಚ್ಯುತ ಮೂಡಿತ್ತಾಯ, ದೇವಸ್ಥಾನದ ಪವಿತ್ರ ಪಾಣಿ

– ದಿನೇಶ್‌ ಬಡಗನ್ನೂರು

ಟಾಪ್ ನ್ಯೂಸ್

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.