ರಾಷ್ಟ್ರ ಮಟ್ಟದ ಫ‌ುಟ್ಬಾಲ್ ಅಂಗಣದಲ್ಲಿ ಗಮನ ಸೆಳೆದ ಸಾಧಕ ಕಿಸು


Team Udayavani, Jun 21, 2019, 5:00 AM IST

41

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪದವಿ ವಿದ್ಯಾರ್ಥಿಗೆ ಭವಿಷ್ಯದಲ್ಲಿ ಕೋಚ್ ಆಗುವ ಗುರಿ

ಜೀವನದಲ್ಲಿ ಸಾಧನೆ ಮಾಡ ಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಆದರೆ ಅದನ್ನು ಈಡೇರಿಸಿಕೊಳ್ಳಲು ಅನೇಕ ಅಡೆ-ತಡೆಗಳು ಎದುರಾಗುತ್ತವೆ. ಆದರೆ, ಧೈರ್ಯ, ಪರಿಶ್ರಮ ಹಾಗೂ ಛಲದಿಂದ ಎದುರುಸಿದರೆ ಮಾತ್ರ ಗೆಲ್ಲಲು ಸಾಧ್ಯ. ಸಾಧನೆಯ ಮೂಲಕವೇ ಮಾದರಿಯಾಗಬೇಕು ಎಂದುಕೊಂಡು ಛಲ ಬಿಡದೆ ಗುರಿಯನ್ನು ಬೆನ್ನತ್ತಿದ ಪರಿಣಾಮ ಕಿಸು ಎಚ್.ಆರ್‌. ಅವರಿಂದು ರಾಷ್ಟ್ರ ಮಟ್ಟದಲ್ಲಿ ಎಲ್ಲರ ಗಮನ ಸೆಳೆದ ಆಟಗಾರರಾಗಿ ಮಿಂಚಿದ್ದಾರೆ.

ಸಾಮಾನ್ಯ ಕುಟುಂಬದಲ್ಲಿ ದಿ| ರಾಜು ಎಚ್.ಬಿ. ಹಾಗೂ ಗೀತಾ ದಂಪತಿಯ ಪುತ್ರನಾಗಿ ದುಬಾರೆ ಕಲ್ಲುಕೋರೆ ಪಾಲಿಬೆಟ್ಟ ಎಂಬ ಪುಟ್ಟ ಗ್ರಾಮದಲ್ಲಿ ಅವರು ಹುಟ್ಟಿ ಬೆಳೆದರು. ಪ್ರಾಥಮಿಕ ಶಿಕ್ಷಣ ಪಡೆಯುತ್ತಿದ್ದಾಗಲೇ ಜಾರ್ಖಾಂಡ್‌ನ‌ಲ್ಲಿ ನಡೆದ ರಾಷ್ಟ್ರ ಮಟ್ಟದ ಫ‌ುಟ್ಬಾಲ್ ಪಂದ್ಯಾವಳಿಯಲ್ಲಿ ಆಡಿದ ಹಿರಿಮೆ ಅವರದು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿ ಪೂರ್ಣಗೊಳಿಸಿ, ಗೋಣಿಕೊಪ್ಪದ ಕಾವೇರಿ ಕಾಲೇಜಿಗೆ ಸೇರಿದರು. ಪ್ರಸ್ತುತ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಓದಿನ ಜತೆಗೇ ಕ್ರೀಡಾಭ್ಯಾಸವನ್ನೂ ಮಾಡುತ್ತಿದ್ದಾರೆ.

ಫ‌ುಟ್ಬಾಲ್ ಆಟದ ಕುರಿತು ಬಾಲ್ಯದಿಂದಲೇ ಇದ್ದ ಒಲವು ಅವರನ್ನು ಅಂಗಣಕ್ಕೆ ಸೆಳೆದಿತ್ತು. ಪೋರ್ಚುಗಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಕಿಸು ಅವರ ಮೆಚ್ಚಿನ ಆಟಗಾರ. ಪ್ರಸ್ತುತ ಅವರು ನೆಹರೂ ಫ‌ುಟ್ಬಾಲ್ ಕ್ಲಬ್‌ನ ಆಟಗಾರರಾಗಿದ್ದಾರೆ. ಉತ್ತಮ ಫಾರ್ವರ್ಡ್‌ ಆಟಗಾರರಾಗಿರುವ ಕಿಸು ಕೊಡಗು, ಬೆಂಗಳೂರು, ಮೈಸೂರು, ತುಮಕೂರು, ಬಳ್ಳಾರಿ, ಮಂಡ್ಯ, ಕೇರಳ, ಚೆನ್ನೈ ಮುಂತಾದ ಕಡೆಗಳಲ್ಲಿ ನೀಡಿರುವ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆದಿದೆ.

ಓರ್ವ ಫ‌ುಟ್ಬಾಲ್ ಆಟಗಾರನಿಗೆ ಉತ್ತಮ ಕೈಚಳಕ, ವೇಗದ ಓಟ, ಕೌಶಲ, ಕಷ್ಣಸಹಿಷ್ಣುತೆ ಪ್ರಧಾನ ವಾಗಿರುತ್ತವೆ. ಶಿಸ್ತು, ತಾಳ್ಮೆ, ಧೈರ್ಯ, ಕರ್ತವ್ಯ ಪ್ರಜ್ಞೆ ಯನ್ನು ಮೈಗೂಡಿಸಿಕೊಂಡಿರಬೇಕು. ಎದುರಾಳಿ ಆಟಗಾರರನ್ನು ವಂಚಿಸಿ, ಚೆಂಡನ್ನು ದಾಟಿಸುವ, ಗುರಿ ತಲಸುಪಿಸುವ ಜಾಣ್ಮೆ ಇರಬೇಕು.

2017ರಲ್ಲಿ ಪಾಲಿಬೆಟ್ಟು ಎಂಬಲ್ಲಿ ನಡೆದ ಇಂಡಿಪೆಂಡೆನ್ಸ್‌ ಕಪ್‌ ಟ್ರೋಫಿಯನ್ನು ಇವರ ತಂಡ ಮುಡಿಗೇರಿಸಿಕೊಂಡಿತ್ತು. 2018ರಲ್ಲಿ ಮಂಗಳೂರಿನಲ್ಲಿ ನಡೆದ ಇಂಡಿಪೆಂಡೆನ್ಸ್‌ ಕಪ್‌ ಕೂಡ ಗೆದ್ದುಕೊಂಡಿದ್ದರು. ಇತ್ತೀಚೆಗೆ ಪಾಲಿಬೆಟ್ಟದಲ್ಲಿ ನಡೆದ ರಿಪಬ್ಲಿಕ್‌ ಕಪ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. 2017ರಲ್ಲಿ ಕೇರಳದಲ್ಲಿ ನಡೆದ ಫ‌ುಟ್ಬಾಲ್ ಟೂರ್ನಿಯಲ್ಲಿ ಗೆಲುವು ದಾಖಲಿಸಿದ್ದು, ಈ ಪಂದ್ಯಾವಳಿಯಲ್ಲಿ ಕಿಸು ಗರಿಷ್ಠ ಗೋಲು ದಾಖಲಿಸಿದ್ದರು. ಸೋಮವಾರ ಪೇಟೆಯ ಗೌಡ್ರಳ್ಳಿಯಲ್ಲಿ ನಡೆದ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಇವರ ತಂಡ ಪ್ರಶಸ್ತಿ ಗಳಿಸಿದ್ದು, ಕಿಸು ಅವರು ಅತ್ಯುತ್ತಮ ಫಾರ್ವರ್ಡ್‌ ಆಟಗಾರನೆಂಬ ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಕೋಚ್ ಆಗುವ ಬಯಕೆ
ಗುರು ಇಬ್ರಾಹಿಂ ಅವರ ಮಾರ್ಗದರ್ಶನ, ಸಲಹೆಗಳು ತಮ್ಮ ಸಾಧನೆಗೆ ಪ್ರೇರಕವಾಗಿವೆ. ಹೆತ್ತವರ ಪ್ರೋತ್ಸಾಹವೂ ಕಾರಣವಾಗಿದೆ. ಫ‌ುಟ್ಬಾಲ್ ಮಾತ್ರವಲ್ಲದೆ ನೃತ್ಯ, ಸಂಗೀತ, ಲಾಂಗ್‌ ಡ್ರೈವ್‌ ಇವರಿಗೆ ತುಂಬ ಇಷ್ಟವಂತೆ. ಉತ್ತಮ ಫ‌ುಟ್ಬಾಲ್ ಕೋಚ್ ಆಗುವ ಬಯಕೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಕ್ರೀಡೆ ಒಂದು ತಪಸ್ಸು. ಅದು ಎಲ್ಲರಿಗೂ ಒಲಿಯುವುದಿಲ್ಲ. ಪ್ರೀತಿಸಿದರೆ ಮಾತ್ರ ಕ್ರೀಡೆ ನಮಗೆ ಒಲಿಯುತ್ತದೆ. ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ, ಮತ್ತೆ ಮತ್ತೆ ಗೆಲುವಿನ ಕಡೆಗೆ ಹೆಜ್ಜೆ ಹಾಕಬೇಕು ಎಂದು ಖಚಿತವಾಗಿ ನಂಬಿರುವ ಕಿಸು, ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಇರಾದೆ ಹೊಂದಿದ್ದಾರೆ. ಕಠಿನ ಪರಿಶ್ರಮದಿಂದ ಅದನ್ನು ಸಾಧ್ಯ ಮಾಡಿಕೊಳ್ಳುವತ್ತಲೂ ಮುಂದಡಿ ಇಡುತ್ತಿದ್ದಾರೆ.
-ಕೀರ್ತಿ ಪುರ, ವಿದ್ಯಾರ್ಥಿನಿ, ಸಂತ ಫಿಲೋಮಿನಾ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.