ನಿರ್ವಹಣೆ ಇಲ್ಲದೆ ಸೊರಗಿದ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು

 ಆಡಳಿತದ ನಿರ್ಲಕ್ಷ್ಯ, ಜನರ ಪೇಚಾಟ ,ಶೀಘ್ರ ಕ್ರಮಕ್ಕೆ ಆಗ್ರಹ

Team Udayavani, Mar 12, 2021, 2:40 AM IST

ನಿರ್ವಹಣೆ ಇಲ್ಲದೆ ಸೊರಗಿದ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು

ಸುಳ್ಯ: ಪಶ್ಚಿಮ ವಾಹಿನಿ ಯೋಜನೆಯ ಮೂಲಕ ರಾಜ್ಯಾದ್ಯಂತ ನದಿಗಳಿಗೆ ಕಿಂಡಿ ಅಣೆಕಟ್ಟು ಕಟ್ಟಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿಯೂ 1,348 ಕಿಂಡಿ ಅಣೆಕಟ್ಟೆ ನಿರ್ಮಿಸಲು 3,986 ಕೋಟಿ ರೂ. ಮೀಸಲಿರಿಸಲಾಗಿದೆ. ಆದರೆ ಅತ್ಯಾವಶ್ಯಕವಾದ ಕೆಲವು ಪ್ರಮುಖ ಪ್ರದೇಶಗಳಿಗೆ ಕಿಂಡಿ ಅಣೆಕಟ್ಟು ಭಾಗ್ಯ ದೊರೆತಿಲ್ಲ. ಕಿಂಡಿ ಅಣೆಕಟ್ಟು ಇರುವ ಕೆಲವೆಡೆ ಅದರ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಇದಕ್ಕೆ ಉದಾರಣೆ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು.

ಸುಳ್ಯ-ಉಬರಡ್ಕ-ಮಿತ್ತೂರು- ದೊಡ್ಡತೋಟ ರಸ್ತೆ ಬದಿ 2 ವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆ ವತಿಯಿಂದ 45 ಲಕ್ಷ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು.  ಮೊದಲು ಸೇತುವೆ  ಕಟ್ಟುವ ವೇಳೆ ಸ್ವಲ್ಪ ಪ್ರಮಾಣದ ಮರಳು, ಸಿಮೆಂಟ್‌ ಪಯಸ್ವಿನಿ ಪಾಲಾಗಿತ್ತು. ಮತ್ತೆ ಪುನಃ ಸೇತುವೆ ನಿರ್ಮಿಸಲಾಗಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಮೊತ್ತ ಪಾವತಿಯಾಗಿಲ್ಲ ಎಂದು ಗುತ್ತಿಗೆ ಪಡೆದುಕೊಂಡವರು ಕಿಂಡಿ ಅಣೆಕಟ್ಟು ನಿರ್ಮಿಸಲು ಬಳಸುವ ಹಲಗೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಈಗ ಹಲಗೆಗಳ ಗುಣಮಟ್ಟ ಕಡಿಮೆಯಾಗಿದೆ.  ನೀರಾವರಿ ಇಲಾಖೆಯಿಂದ ದುಡ್ಡು ಸಿಕ್ಕಿಲ್ಲ ಎಂದು ಜನರಿಗೆ ಉಪಕಾರಿಯಾಗಿರುವ ಹಲಗೆಗಳನ್ನು ಇಟ್ಟು ಗೆದ್ದಲು ಬರಿಸುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕಸ ತೆರವುಗೊಳಿಸಿಲ್ಲ :

ಈಗಲೇ ನೀರಿನ ಅಭಾವದ ಮುನ್ಸೂಚನೆ ಗೋಚರಿಸಿದ್ದು, ಮಳೆಗಾಲದಲ್ಲಿ ಕಿಂಡಿಗಳಲ್ಲಿ  ತುಂಬಿದ್ದ ಹೂಳು ಹಾಗೂ  ಕಡ್ಡಿಗಳನ್ನು ಇನ್ನೂ ತೆರವುಗೊಳಿಸಿಲ್ಲ.  ಆಡಳಿತ ವೈಫಲ್ಯ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸ್ವ ಹಿತಾಸಕ್ತಿಗೆ ಬಲಿಯಾಗಿ ಸಾರ್ವಜನಿಕರು ನೀರಿನ ಬರ ಎದುರಿಸಬೇಕಾದ ದುಸ್ಥಿತಿಯಲ್ಲಿದ್ದಾರೆ. ಈ ರೀತಿ ನಿರ್ಲಕ್ಷ್ಯ ಮುಂದುವರಿದರೆ ಬೇಸಿಗೆ ಅಂತ್ಯದಲ್ಲಿ ನೀರಿನ ಅಭಾವ ಎದುರಾಗಲಿದೆ ಎಂದು ಜನರು ಆತಂಕ ವ್ಯಕ್ತಪಡಿಸುತ್ತಾರೆ.

ಕ್ರಮಕ್ಕೆ ಮುಂದಾಗಬೇಕು :

ಸ್ಥಳೀಯರು ಈ ನೀರನ್ನೇ ಬಳಸುತ್ತಿರುವುದರಿಂದ ಬೋರ್‌ ಅಥವಾ ಪರ್ಯಾಯ ಮಾರ್ಗಗಳನ್ನು ಕಂಡು ಕೊಂಡಿಲ್ಲ. ಈಗ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಯನ್ನು ಸರಿಯಾದ ರೀತಿ ನಿರ್ವಹಿಸಿ ಜನರ ಬಳಕೆಗೆ ಲಭ್ಯವಾಗಲು ನೂತನ ಆಡಳಿತ ಕಾರಣ ನೀಡದೇ ಕ್ರಮಕ್ಕೆ ಮುಂದಾಗಬೇಕು ಎಂದು ಉಬರಡ್ಕ-ಮಿತ್ತೂರಿನ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.  ಸಣ್ಣ ನೀರಾವರಿ ಇಲಾಖೆಯು ಗುತ್ತಿಗೆದಾರರ ಬಿಲ್‌ ಪರಿಶೀಲಿಸಬೇಕು ಎನ್ನುವುದು ಸಾರ್ವಜನಿಕರ ಸಲಹೆ.

ಕಿಂಡಿ ಅಣೆಕಟ್ಟು ನಿರ್ಮಿಸಲು ಮಾತ್ರವೇ ಟೆಂಡರ್‌ ನೀಡಿದ್ದರು. ಆದರೆ ಅದಕ್ಕೆ ನೀಡಬೇಕಾದ ಮೊತ್ತವನ್ನೇ ಇಲಾಖೆ ಮಂಜೂರು ಮಾಡಿಲ್ಲ. ಇದರಿಂದ ನಮಗೆ ಸಂಕಷ್ಟ ಎದುರಾಗಿದೆ. ಹಾಗಾಗಿ ಮೊತ್ತ ಪಾವತಿಯಾಗುವವರೆಗೆ ಹಲಗೆ ನಮ್ಮಲ್ಲಿ ಇಟ್ಟುಕೊಂಡಿದ್ದೇವೆ. -ಆನಂದ,ಗುತ್ತಿಗೆದಾರ

ಈ ಬಾರಿಯ ಗ್ರಾ.ಪಂ. ಆಡಳಿತ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಮೊದಲು ಅಲ್ಲಿನ ಹೂಳನ್ನು ತೆಗೆಸಲಾಗುವುದು. ಹಲಗೆಯ ವ್ಯವಸ್ಥೆ ಆಗಬೇಕು. ಸಂಬಂಧಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.   -ವಿದ್ಯಾಧರ,  ಪಿಡಿಒ, ಉಬರಡ್ಕ-ಮಿತ್ತೂರು

 

– ಸುದೀಪ್‌ರಾಜ್‌ ಕೋಟೆಮೂಲೆ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.