ಕೊಕ್ಕಡ ಕೋರಿ ಜಾತ್ರೆ ಸಂಪನ್ನ : ಹರಕೆಯ ರೂಪದಲ್ಲಿ ಗದ್ದೆಗಿಳಿದ ಜಾನುವಾರು


Team Udayavani, Dec 17, 2021, 3:20 AM IST

ಕೊಕ್ಕಡ ಕೋರಿ ಜಾತ್ರೆ ಸಂಪನ್ನ : ಹರಕೆಯ ರೂಪದಲ್ಲಿ ಗದ್ದೆಗಿಳಿದ ಜಾನುವಾರು

ಬೆಳ್ತಂಗಡಿ: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ಕೋರಿ ಜಾತ್ರೆಯು ಸಂಭ್ರಮದಿಂದ ಸಮಾಪನಗೊಂಡಿತು.

ಸಂಪ್ರದಾಯದ ಪ್ರಕಾರ ನೀಲೇಶ್ವರ ಎಡಮನೆ ದಾಮೋದರ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ದೇವಸ್ಥಾನದಲ್ಲಿ ಆರಂಭಗೊಂಡ ಧನುಪೂಜೆಯ ಅನಂತರ ಬೆಳಗ್ಗೆ ದೇವರ ಗದ್ದೆಯಲ್ಲಿ ಹರಕೆ ಹೊತ್ತ ಭಕ್ತರು ಸೊಪ್ಪನ್ನು ಗದ್ದೆಗೆ ಹಾಕುವ ಮೂಲಕ ಸಂಭ್ರಮಿಸಿದರು.

ಬಳಿಕ ದೇವಾಲಯದಲ್ಲಿ ಗಣಪತಿ ಹೋಮ, ಏಕಾದಶರುದ್ರ ಮಧ್ಯಾಹ್ನ ಮಹಾಪೂಜೆ ಬಳಿಕ ಸಂಪ್ರದಾಯದಂತೆ ದೇವರ ಗದ್ದೆಗೆ ಕಂಬಳದ ರೀತಿಯಲ್ಲಿ ಜಾನುವಾರುಗಳನ್ನು ಇಳಿಸಲಾಯಿತು. ಜಿಲ್ಲೆಯ ನಾನಾ ಭಾಗಗಳಿಂದ ಬಂದ ರೈತರು ತಮ್ಮ ಜಾನುವಾರಗಳನ್ನು ಈ ಗದ್ದೆಗೆ ಹರಕೆಯ ರೂಪದಲ್ಲಿ ಇಳಿಸಿದರು.

ಕೊಕ್ಕಡ ಕೋರಿ ಇತಿಹಾಸ:

ಕೊಕ್ಕಡ ಕೋರಿ ಜಾತ್ರೆಯು ಮಣ್ಣು ಹಾಗೂ ಮನುಷ್ಯನ ಕೃಷಿ ಕಾಯಕಕ್ಕಿರುವ ನಂಟನ್ನು ಬಿಂಬಿಸುತ್ತದೆ. ದೇವರ ಗದ್ದೆಯನ್ನು ಮೊದಲು ಉಳುಮೆ ಮಾಡಿ ಹದ ಮಾಡಿಕೊಳ್ಳಲಾಗುತ್ತದೆ. ಹಿಂದಿನ ಕಾಲದಿಂದ ಜಾತ್ರೆಗೆ ಒಂದು ತಿಂಗಳ ಮೊದಲು ಕೊಕ್ಕಡ ಸೀಮೆಗೊಳಪಟ್ಟ ಪ್ರತಿ ಗ್ರಾಮಗಳ ಮನೆಮನೆಗೂ ಕೋರಿ ಜಾತ್ರೆಗೆ ಕೊರಗ ಭೂತದ ವೇಷ ತೊಟ್ಟು ಆಹ್ವಾನಿಸುವ ಸಂಪ್ರದಾಯ ಇದೆ. ಕೊರಗ ವೇಷದ ಜತೆಗೆ ಡೋಲು ಬಾರಿಸಿಕೊಂಡು ಬೇರೆಯೇ ಒಂದು ತಂಡ ಊರಿಡೀ ತಿರುಗುತ್ತದೆ. ಕೊರಗ ದೈವಕ್ಕೂ ಕೃಷಿ ಹಾಗೂ ಜಾನುವಾರು ಸಂಬಂಧಿ ಹರಕೆ ಹೇಳಿ ತೀರಿಸಿಕೊಳ್ಳುವ ಪದ್ಧತಿ ಇಲ್ಲಿದೆ.

ಜಾತ್ರೆಯ ಹಿಂದಿನ ದಿನ ಸಾಯಂಕಾಲ ಕಂಬಳದ ಗದ್ದೆಗೆ ಹಾಲು ಹಾಕಿ ಗದ್ದೆಯ ಸುತ್ತ ದೀಪ ಹಚ್ಚಿ ಅಲಂಕರಿಸುತ್ತಾರೆ. ಮರುದಿನ ಬೆಳಗ್ಗೆ ಗುತ್ತಿನ ಮನೆಯಿಂದ ಅಲಂಕರಿಸಿದ ಹೋರಿ ಹಾಗೂ ಕೋಣಗಳ ಜತೆಗೆ ಪ್ರತಿ ಊರಿನಿಂದ ಹರಕೆ ಹೇಳಿ ಬಂದ ಜಾನುವಾರುಗಳನ್ನು ದೇವಸ್ಥಾನಕ್ಕೆ ಕರೆ ತಂದು ಅನಂತರ ದೇವರ ಗದ್ದೆಗೆ ವಾದ್ಯ ಘೋಷದೊಂದಿಗೆ ಕರೆದೊಯ್ಯಲಾಗುತ್ತದೆ. ಗುತ್ತಿನ ಹೋರಿಗಳನ್ನು ಮೊದಲು ಇಳಿಸಿ ಬಳಿಕ ಇತರ ಜಾನುವಾರುಗಳನ್ನು ಒಂದು ಬದಿಯಿಂದ ಇನ್ನೊಂದು ಬದಿಗೆ ಓಡಿಸಲಾಗುತ್ತದೆ. ಅನಾರೋಗ್ಯದ ಕಾರಣದಿಂದ ಹರಕೆ ಹೇಳಿಕೊಂಡ ಮಂದಿ ಸೊಪ್ಪಿನ ಕಟ್ಟನ್ನು ತಲೆಯಲ್ಲಿ ಹೊತ್ತು ಒಂದು ಸುತ್ತು ಬಂದು ಸೊಪ್ಪನ್ನು ಗದ್ದೆಗೆ ಹಾಕಿ ಗದ್ದೆಯ ನೀರನ್ನು ತೀರ್ಥವಾಗಿ ಸೇವಿಸಿ ಪ್ರೋಕ್ಷಣೆ ಮಾಡಿಕೊಳ್ಳುತ್ತಾರೆ. ಇದಕ್ಕೆಂದು ದೂರದೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಸಂಜೆ ದೇಗುದಲ್ಲಿ ಶ್ರೀ ವೈದ್ಯನಾಥೇಶ್ವರ ಹಾಗೂ ವಿಷ್ಣುಮೂರ್ತಿ ದೇವರ ಬಲಿ ಸೇವೆ ನಡೆಸಿ, ದೇವರ ಗದ್ದೆಗೆ ಭಕ್ತರ ಮೆರವಣಿಗೆಯೊಂದಿಗೆ ದೇವರು ಕೋರಿ ಗದ್ದೆಯ ಮಜಲಿನಲ್ಲಿರುವ ಕಟ್ಟೆಯಲ್ಲಿ ರಾರಾಜಿಸಿದರು. ರಾತ್ರಿ ಅನ್ನದಾನ ಸೇವೆ ನಡೆದು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜರಗಿತು.

ಪವಿತ್ರಪಾಣಿ ಎ.ರಾಧಕೃಷ್ಣ ಎಡಪಡಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಸಿಎ ಬ್ಯಾಂಕ್‌ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್‌ ಆಲಂಬಿಲ, ಅನ್ನದಾನ ಸೇವಕರ್ತರಾದ ಬಸವರಾಜ್‌ ಬೆಂಗಳೂರು, ವಿಶ್ವನಾಥ್‌ ಕೊಲ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.