ಮಾಣಿಲ ಶ್ರೀಧಾಮ-ಧರ್ಮಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಬಸ್‌


Team Udayavani, Jun 16, 2019, 5:00 AM IST

z-16

ವಿಟ್ಲ: ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನೂತನವಾಗಿ ಪ್ರಾರಂಭ ಗೊಂಡ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಮಾಣಿಲ ಗ್ರಾಮದ ಪಕಳಕುಂಜದಿಂದ ಧರ್ಮಸ್ಥಳಕ್ಕೆ ಪ್ರತಿನಿತ್ಯ ಬಸ್‌ ಸಂಚಾರ ಪ್ರಾರಂಭಿಸಬೇಕೆಂದು ಮಾಣಿಲ ಶ್ರೀಧಾಮ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿತ್ತು. ಸಂಚಾರಕ್ಕೆ ಹಲವು ಅಡೆತಡೆಗಳು ಎದುರಾಗಿತ್ತು. ಬಳಿಕ ಹಲವು ಅಧಿಕಾರಿ ಗಳ, ಜನಪ್ರತಿನಿಧಿಗಳ, ಸಚಿವರ ಜತೆ ಮಾತುಕತೆ ಮಾಡಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್‌ಕುಮಾರ್‌ ಮೂಲಕ ಮನವಿ ಮಾಡಲಾಯಿತು. ಕೊನೆಗೂ ಬಸ್‌ ಸಂಚಾರಕ್ಕೆ ಅನುಮತಿ ದೊರಕಿದೆ.

ಬಸ್ಸಿಗೆ ಪೂಜೆ
ಬೆಳಗ್ಗೆ ಮಾಣಿಲ ಕ್ಷೇತ್ರದಲ್ಲಿ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಬಸ್ಸಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಪಕಳಕುಂಜ ದಲ್ಲಿ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಿಶಾಲ್‌ ಮೋನಿಸ್‌, ಮಾಣಿಲ ಶ್ರೀಗಳು ಪ್ರಥಮ ಸಂಚಾರಕ್ಕೆ ಚಾಲನೆ ನೀಡಿದರು.

ಮಾಣಿಲ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಕುಮಾರ್‌ ಬಾಳೆಕಲ್ಲು, ಉಪಾಧ್ಯಕ್ಷೆ ವಿಶಾಲಾಕ್ಷಿ, ಪೆರುವಾಯಿ ಗ್ರಾ.ಪಂ. ಅಧ್ಯಕ್ಷ ರಾಲ್ಫ್ ಡಿ’ಸೋಜಾ, ಜುಮಾ ಮಸೀದಿ ಅಧ್ಯಕ್ಷ ಮೊಹಿದು ಕುಟ್ಟಿ, ಸಾಮಾಜಿಕ ಹೋರಾಟಗಾರ್ತಿ ಕುಂಞಿಪಾತು, ಗೋಪಾಲಕೃಷ್ಣ ನಾಯಕ್‌, ತಾ.ಪಂ. ಮಾಜಿ ಸದಸ್ಯ ರಾಜೇಂದ್ರನಾಥ ರೈ, ನ್ಯಾಯವಾದಿ ವಿನೋದ್‌ ಪಕಳಕುಂಜ, ಅಶ್ರಫ್‌ ಕಾಮಜಲು, ಉದಯಕುಮಾರ್‌ ಪಕಳಕುಂಜ, ಚಂದ್ರಶೇಖರ್‌, ಪ್ರಭಾಕರ, ರಾಮ ಕುಲಾಲು ಸಾಯ, ವಿನಯ್‌, ಶ್ರೀಧರ್‌ ಬಾಳೆಕಲ್ಲು, ಸುಶೀಲ್‌ ಬಾಳೆಕಾನ, ಸತ್ಯಶಂಕರ್‌ ಭಟ್‌, ಮೀನಾಕ್ಷಿ ಸಾಯ, ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿ ಗೀತಾ ಪುರುಷೋತ್ತಮ, ವಿಟ್ಟಲ ಶೆಟ್ಟಿ ಸುಣ್ಣಂಬಳ, ಶ್ರೀಧಾಮ ಮಿತ್ರ ಮಂಡಳಿ ಅಧ್ಯಕ್ಷ ಯೋಗೀಶ್‌ ಬಾಳೆಕಾನ ಉಪಸ್ಥಿತರಿದ್ದರು.

ವಿಟ್ಲ ಪರಿಸರದವರಿಗೂ ಪ್ರಯೋಜನ
ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಮಾಣಿಲ ಕ್ಷೇತ್ರಕ್ಕೂ ಧರ್ಮಸ್ಥಳ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ. ಹಲವು ಜನರು ತಮ್ಮ ಕಷ್ಟಗಳನ್ನು ನಿವಾರಿಸಲು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ. ಈ ಬಸ್‌ ಸೇವೆ ಭಕ್ತರಿಗೆ ಇನ್ನಷ್ಟು ಪ್ರಯೋಜನವಾಗಲಿದೆ. ಇದರಿಂದ ವಿಟ್ಲ ಪರಿಸರದವರಿಗೂ ಪ್ರಯೋಜನವಾಗಲಿದೆ. ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಎಲ್ಲರೂ ಒಗ್ಗೂಟ್ಟಿನಿಂದ ಕೆಲಸ ಮಾಡಿದಾಗ ಸಾಧ್ಯವಾಗುತ್ತದೆ. ಸಮಾಜದಲ್ಲಿ ಏಕತೆ-ಸಾಮರಸ್ಯ ಉಂಟು ಮಾಡುವ ಕೆಲಸಗಳು ನಡೆಯಬೇಕು ಎಂದರು.

ವೇಳಾಪಟ್ಟಿ
ಪ್ರತಿದಿನ ಬೆಳಗ್ಗೆ 7.30ಕ್ಕೆ ಪಕಳಕುಂಜದಿಂದ ಹೊರಟು ವಿಟ್ಲ, ಉಪ್ಪಿನಂಗಡಿ ರಸ್ತೆಯಾಗಿ ಧರ್ಮಸ್ಥಳಕ್ಕೆ ತಲುಪಲಿದೆ. ಸಂಜೆ 5.30ಕ್ಕೆ ಪಕಳಕುಂಜಕ್ಕೆ ಹಿಂದಿರುಗಲಿದೆ ಎಂದು ಬಸ್ಸಿನ ನಿರ್ವಾಹಕರು ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.