‘ದೇವಸ್ಥಾನ, ವಿದ್ಯಾದೇಗುಲ ಕಣ್ಣುಗಳಿದ್ದಂತೆ’


Team Udayavani, Oct 12, 2018, 2:52 PM IST

12-october-15.gif

ಸುಬ್ರಹ್ಮಣ್ಯ: ದೇವಸ್ಥಾನ ಮತ್ತು ವಿದ್ಯಾ ಕೇಂದ್ರಗಳು ಕಣ್ಣುಗಳಿದ್ದಂತೆ. ದೇವಸ್ಥಾನದ ಅಭಿವೃದ್ಧಿಯಷ್ಟೇ ಪ್ರಾಧಾನ್ಯ ಶಿಕ್ಷಣ ಸಂಸ್ಥೆಗೂ ನೀಡಬೇಕಿದೆ. ದೇವಸ್ಥಾನದಲ್ಲಿ ಭಕ್ತರಿಗೆ ಮತ್ತು ದೇವಸ್ಥಾನದ ಆಡಳಿತವಿರುವ ಶಿಕ್ಷಣ ಸಂಸ್ಥೆಗಳ ಮೂಲ ಸೌಕರ್ಯ ಈಡೇರಿಕೆ ಒತ್ತು ನೀಡಿದ್ದೇವೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 1.84 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 1 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಭಕ್ತರು ತಮ್ಮ ಇಷ್ಟಾರ್ಥ ನೆರವೇರಿಸಿಕೊಳ್ಳಲು ಕ್ಷೇತ್ರ ಸಂದರ್ಶನ ಮಾಡುತ್ತಾರೆ. ಅವರಿಗೆ ಸೂಕ್ತ ಮೂಲಸೌಕರ್ಯಗಳನ್ನು ದೇಗುಲದದ ವತಿಯಿಂದ ಪೂರೈಸಲು ಆಡಳಿತ ಮಂಡಳಿ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

ಶಂಕುಸ್ಥಾಪನೆ
ಶ್ರೀ ದೇಗುಲದ ಶೃಂಗೇರಿ ಮಠದ ನೆಲ ಹಾಸುಗಳಿಗೆ ಮಾರ್ಬಲ್‌ ಅಳವಡಿಕೆಗೆ ಶಂಕುಸ್ಥಾಪನೆ ನೆರವೇರಿತು.  ಪುರೋಹಿತ ಸುಬ್ರಹ್ಮಣ್ಯ ಕೋರ್ನಾಯ ಧಾರ್ಮಿಕ ವಿಧಿ- ವಿಧಾನ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಕೆ.ಎಸ್‌.ಎಸ್‌. ಕಾಲೇಜಿನ ಕಟ್ಟಡಗಳಿಗೆ ಬಣ್ಣ ಬಳಿಯುವ ವ್ಯವಸ್ಥೆಗೆ ಚಾಲನೆ, ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ರಂಗಮಂದಿರಕ್ಕೆ ಇಂಟರ್‌ಲಾಕ್‌ ಅಳವಡಿಕೆಗೆ ಶಂಕುಸ್ಥಾಪನೆ, ವಸತಿ ಗೃಹದ ಬಳಿ ಮಹಿಳೆ ಯರ, ಪುರುಷರ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿತು.

ದೇಗುಲದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್‌, ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಹೇಶ್‌ ಕುಮಾರ್‌ ಕೆ.ಎಸ್‌. ಕರಿಕ್ಕಳ, ಕೃಷ್ಣಮೂರ್ತಿ ಭಟ್‌, ಬಾಲಕೃಷ್ಣ ಬಳ್ಳೇರಿ, ಮಾಧವ ಡಿ., ರಾಜೀವಿ ಆರ್‌. ರೈ, ಮಾಸ್ಟರ್‌ ಪ್ಲಾನ್‌ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವರಾಮ ರೈ, ಲೋಲಾಕ್ಷ ಕೈಕಂಬ, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯೆ ವಿಮಲಾ ರಂಗಯ್ಯ, ಅಭಿಯಂತರ ಉದಯ ಕುಮಾರ್‌, ದೇಗುಲದ ಹೆಬ್ಟಾರ್‌ ಷಣ್ಮುಖ ಉಪರ್ಣ, ಕೆ.ಎಸ್‌.ಎಸ್‌. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ.ಆರ್‌. ಶೆಟ್ಟಿಗಾರ್‌, ಎಸ್‌ ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ ಕೆ., ಪ್ರೌಢಶಾಲಾ ಮುಖ್ಯಗುರು ಕೆ. ಯಶವಂತ ರೈ, ಗುತ್ತಿಗೆದಾರರಾದ ಪ್ರಕಾಶ್‌ ಎಸ್‌. ಶೆಟ್ಟಿ ಬನ್ನಾಡಿ, ಸಿ.ಎನ್‌. ಎಸ್‌. ಮೂರ್ತಿ ಬೆಂಗಳೂರು, ಉದಯ ಕುಮಾರ್‌ ಪಡುಕೋಣೆ, ಸೋಮಶೇಖರ ನಾಯಕ್‌, ಶ್ರೀ ದೇಗುಲದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್‌ ಉಪಸ್ಥಿತರಿದ್ದರು.

ಉದ್ಘಾಟನೆ 
ಅರ್ಚಕ ಪ್ರಸನ್ನ ಭಟ್‌ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿ, ಪೂಜೆ ಸಲ್ಲಿಸಿದರು. ಶ್ರೀ ದೇಗುಲದ ಆಡಳಿತ ಕಚೇರಿಗೆ ಅಳವಡಿಸಿ ಲಿಫ್ಟ್, ಬ್ಯಾಟರಿ ಚಾಲಿತ ಪರಿಸರ ಸ್ನೇಹಿ ವಾಹನ, ಅಕ್ಷರಾ ವಸತಿ ಗೃಹದ ಲಿಫ್ಟ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿಗೆ ನಿರ್ಮಿಸಲಾದ ಮೆಟ್ಟಿಲು, ಶ್ರೀ ದೇಗುಲದ ವಾಹನಗಳಿಗೆ ನಿರ್ಮಿತವಾದ ನೂತನ ಶೆಡ್‌ ಉದ್ಘಾಟನೆ ಮಾಡಲಾಯಿತು.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.