Kukke Subrahmanya: ಸಂಭ್ರಮದ ಲಕ್ಷದೀಪೋತ್ಸವ


Team Udayavani, Dec 13, 2023, 12:13 AM IST

Kukke Subrahmanya: ಸಂಭ್ರಮದ ಲಕ್ಷದೀಪೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು.

ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ದೇವಸ್ಥಾನದ ಅರ್ಚಕರು ಉತ್ಸವದ ವಿಧಿ ವಿಧಾನ ನೆರವೇರಿಸಿದರು. ರಥಬೀದಿಯಿಂದ ಕಾಶಿಕಟ್ಟೆ ತನಕ ಬೆಳಗಿದ ಲಕ್ಷ ಹಣತೆ ದೀಪದ ನಡುವೆ ಭಕ್ತರ ಪರಾಕುಗಳೊಂದಿಗೆ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವ ನೆರವೇರಿತು. ಈ ಮೂಲಕ ಶ್ರೀ ದೇವರ ರಥಬೀದಿ ಉತ್ಸವ ಆರಂಭವಾಯಿತು.

ಇದಕ್ಕೂ ಪೂರ್ವನಲ್ಲಿ ಸಂಜೆ ಆದಿ ಸುಬ್ರಹ್ಮಣ್ಯದಲ್ಲಿ ದೀಪಾಂಕೃತ ರಂಗಪೂಜೆ ನಡೆಯಿತು. ಬಳಿಕ ಪ್ರಧಾನ ದೇವಾಲಯದಲ್ಲಿ 16 ಮಡಿಕೆಗಳಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಮಾಡಿ ಅದರಲ್ಲಿ ನವಧಾನ್ಯಗಳನ್ನು ಬಿತ್ತುವ ಅಂಕುರಾರ್ಪಣೆ ನೆರವೇರಿತು. ಮಹಾಪೂಜೆಯ ಬಳಿಕ ಶ್ರೀ ದೇವರ ಹೊರಾಂಗಣ ಉತ್ಸವ ಆರಂಭವಾಯಿತು.

ಪ್ರಥಮವಾಗಿ ಕಾಚುಕುಜುಂಬ ದೈವವು ಶ್ರೀ ದೇವರನ್ನು ಭೇಟಿಯಾಗಿ ನುಡಿಗಟ್ಟು ನಡೆಯಿತು. ಅನಂತರ ಆಕರ್ಷಕ ಸಾಲುದೀಪಗಳ ನಡುವೆ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ಮತ್ತು ವಿವಿಧ ಸಂಗೀತ ವಾದ್ಯಗಳ ಸುತ್ತುಗಳು ನೆರವೇರಿತು.

ಹೊರಾಂಗಣ ಉತ್ಸವದ ಬಳಿಕ ರಥಬೀದಿಗೆ ಆಗಮಿಸಿದ ಶ್ರೀ ದೇವರು ಪಂಚ ಶಿಖರಗಳನ್ನಳಗೊಂಡ ಚಂದ್ರಮಂಡಲ ರಥದಲ್ಲಿ ಆರೂಢರಾಗಿ ಪೂಜೆ ಸ್ವೀಕರಿಸಿದರು. ಬಳಿಕ ಶ್ರೀ ದೇವಳದಿಂದ ಕಾಶಿಕಟ್ಟೆ ತನಕ ಉತ್ಸವ ನೆರವೇರಿತು. ಶ್ರೀ ದೇವರು ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸುವುದು ಕೇವಲ ಲಕ್ಷ ದೀಪೋತ್ಸವದ ದಿನ ಮಾತ್ರ ಅನ್ನುವುದು ವಿಶೇಷ.

ಬೀದಿ ಉರುಳು ಸೇವೆ ಆರಂಭ
ಚಂದ್ರಮಂಡಲ ರಥೋತ್ಸವದ ಬಳಿಕ ಸುಬ್ರಹ್ಮಣ್ಯನಿಗೆ ಅತ್ಯಂತ ಪ್ರಿಯವಾದ ಬೀದಿ ಉರುಳು ಸೇವೆಯನ್ನು ಭಕ್ತರು ಆರಂಭಿಸಿದರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಟವಾದ ಈ ಸೇವೆಯನ್ನು ಸ್ವಯಂಸ್ಫೂರ್ತಿಯಿಂದ ಭಕ್ತರು ಲಕ್ಷದೀಪೋತ್ಸವ ರಥೋತ್ಸವದ ಬಳಿಕ ಆರಂಭಿಸಿ ಚಂಪಾಷಷ್ಠಿ ಮಹಾರಥೋತ್ಸವದ ತನಕ ನೆರವೇರಿಸುತ್ತಾರೆ.

ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ
ಸುಬ್ರಹ್ಮಣ್ಯ/ಮಂಗಳೂರು: ಲಕ್ಷದೀಪೋತ್ಸವದ ಸಂಭ್ರಮದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ, ಸುಳ್ಯದಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆ ಸುರಿಯಿತು. ಮಳೆಯ ಮಧ್ಯೆ ಭಜನಾರ್ಥಿಗಳು ಕುಣಿತ ಭಜನೆ ನೆರವೇರಿಸಿದರು. ಸಂಜೆ ಗುತ್ತಿಗಾರು ಪರಿಸರದಲ್ಲಿ ಮಳೆಯಾಗಿತ್ತು. ಬೆಳ್ತಂಗಡಿ, ಕೊಲ್ಲಮೊಗ್ರ ಮೊದಲಾದೆಡೆಗಳಲ್ಲೂ ಮಳೆಯಾಗಿದೆ.

 

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.