![ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ](https://www.udayavani.com/wp-content/uploads/2024/07/HEBRI-415x276.jpg)
Kukke Subrahmanya Temple: ದೇವೇಗೌಡ ದಂಪತಿ ಆಶ್ಲೇಷಾ ಬಲಿ ಸೇವೆ
Team Udayavani, Jan 28, 2024, 12:16 AM IST
![Kukke Subrahmanya Temple: ದೇವೇಗೌಡ ದಂಪತಿ ಆಶ್ಲೇಷಾ ಬಲಿ ಸೇವೆ](https://www.udayavani.com/wp-content/uploads/2024/01/sub-2-620x413.jpg)
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಆಶ್ಲೇಷಾ ಬಲಿ ಸೇವೆ ನೆರವೇರಿಸಿದರು.
ಶುಕ್ರವಾರ ಕ್ಷೇತ್ರಕ್ಕೆ ಆಗಮಿಸಿದ್ದ ದೇವೇಗೌಡ ದಂಪತಿ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಕ್ಷೇತ್ರದ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು.ಶನಿವಾರ ಆಶ್ಲೇಷಾ ಬಲಿ ಸೇವೆಯ ಬಳಿಕ ಮಧ್ಯಾಹ್ನದ ಮಹಾಪೂಜೆ ಸೇವೆ ನೆರವೇರಿಸಿ ಪ್ರಸಾದ ಸ್ವೀಕರಿಸಿದರು.
ಬಳಿಕ ಅಪರಾಹ್ನ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್ಗೆ ತೆರಳಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳಿದರು. ಜೆಡಿಎಸ್ ಮುಖಂಡರು, ಕಾರ್ಯಕರ್ತರು ಜತೆಗಿದ್ದರು.
ರಾಜಕೀಯ ಮಾತು ಬೇಡ
ನಾನು ಸುಬ್ರಹ್ಮಣ್ಯ ದೇವರ ದರ್ಶನ ಪಡೆಯಲು ಬಂದಿದ್ದೇನೆ. ಕ್ಷೇತ್ರದ ಸರ್ವರಿಗೂ ಒಲಿತನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇನೆ. ಇಲ್ಲಿ ಯಾವುದೇ ರಾಜಕೀಯ ಮಾತು ಬೇಡ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
![ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ](https://www.udayavani.com/wp-content/uploads/2024/07/HEBRI-415x276.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.