![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 26, 2023, 12:03 AM IST
ಪುತ್ತೂರು: ಮನೆಯ ಸಿಟೌಟ್ನ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಮೇಲ್ಛಾವಣಿ ಕುಸಿದು ಬಿದ್ದು ಕಾರ್ಮಿಕ ಗಾಯಗೊಂಡ ಹಾಗೂ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮ ಪಾದಲಾಡಿ ಎಂಬಲ್ಲಿ ಅ 25ರಂದು ಸಂಭವಿಸಿದೆ.
ಅರಿಯಡ್ಕ ಗ್ರಾಮದ ನಿವಾಸಿ ಶೇಖರ್ ಕುಲಾಲ್ (45) ಮೃತಪಟ್ಟವರು. ಘಟನೆಯಲ್ಲಿ ಸಂಜೀವ ಮೊಗೇರ ಗಾಯಗೊಂಡಿದ್ದಾರೆ. ಅರಿಯಡ್ಕ ಗ್ರಾಮದ, ಪಾದಲಾಡಿ ನಿವಾಸಿ ಕಮಲ ಅವರ ಮನೆಯಲ್ಲಿ ಸೆಂಟ್ರಿಂಗ್ ಕೆಲಸ ನಡೆಯುತ್ತಿದ್ದು, ಇದರ ಕಾಮಗಾರಿಗೆ ಅ. 25ರಂದು ಸಂಜೀವ ಮೊಗೇರ ಹಾಗೂ ಶೇಖರ್ ಕುಲಾಲ್ ಬಂದಿದ್ದರು.
ಮೇಲ್ಛಾವಣಿ ಕುಸಿದು ಬಿದ್ದು ಶೇಖರ್ಕುಲಾಲ್ ಗಂಭೀರವಾಗಿ ಗಾಯಗೊಂಡರು.
ತತ್ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ದಾರಿ ಮಧ್ಯೆ ಅವರು ಮೃತಪಟ್ಟರು. ಈ ಕುರಿತು ಮೃತರ ಸಹೋದರ ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.