ವನಜ ರಂಗಮನೆ ಪ್ರಶಸ್ತಿಗೆ ಲೀಲಾವತಿ ಬೈಪಾಡಿತ್ತಾಯ ಆಯ್ಕೆ


Team Udayavani, Aug 3, 2019, 5:15 AM IST

z-29

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ವತಿಯಿಂದ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 6ನೇ ವರ್ಷದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷಗಾನದ ಪ್ರಥಮ ಮಹಿಳಾ ವೃತ್ತಿಪರ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.

ಆ. 25ರಂದು ಸುಳ್ಯದ ರಂಗಮನೆಯಲ್ಲಿ ನಡೆಯುವ ಯಕ್ಷ ಸಂಭ್ರಮದ ಸಂದರ್ಭ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯು ಯಕ್ಷ ಸ್ಮರಣಿಕೆ, ಪ್ರಶಸ್ತಿ ಫಲಕ, 10,000 ರೂ. ನಗದು ಒಳ ಗೊಂಡಿರುತ್ತದೆ ಎಂದು ರಂಗಮನೆ ರೂವಾರಿ ಜೀವನ್‌ ರಾಂ ಸುಳ್ಯ ತಿಳಿಸಿದ್ದಾರೆ.

ಅಗ್ರಮಾನ್ಯ ಭಾಗವತರು
ಮೂಢ ನಂಬಿಕೆಗಳ ಕಟ್ಟಳೆಯನ್ನೆಲ್ಲ ಮೆಟ್ಟಿ ನಿಂತು, ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಾಗಿ ಮೆರೆದ ಲೀಲಾವತಿ ಬೈಪಾಡಿತ್ತಾಯ, ಪ್ರಥಮ ವೃತ್ತಿಪರ ಮಹಿಳಾ ಭಾಗವತರು. ಸುಬ್ರಹ್ಮಣ್ಯ ಮೇಳ, ಪುತ್ತೂರು ಮೇಳ, ಕದ್ರಿ ಮೇಳ, ಕರ್ನಾಟಕ ಮೇಳ, ಅರುವ (ಅಳದಂಗಡಿ) ಮೇಳ, ಬಪ್ಪನಾಡು ಮೇಳ, ಕುಂಬಳೆ, ತಲಕಳ ಮೇಳ ಮುಂತಾದವುಗಳಲ್ಲಿ ಸತತ 20 ವರ್ಷಗಳ ಕಾಲ ಡೇರೆ ಹಾಗೂ ಬಯಲಾಟಗಳ ಪ್ರದರ್ಶನಗಳಲ್ಲಿ ಪತಿ ಹರಿ ನಾರಾಯಣ ಬೈಪಡಿತ್ತಾಯರೊಂದಿಗೆ ತಿರುಗಾಟ ನಡೆಸಿದ್ದಾರೆ. 80ರ ದಶಕದಲ್ಲಿ ಅರುವ ನಾರಾಯಣ ಶೆಟ್ಟರು ಕಟ್ಟಿದ ಅಳದಂಗಡಿ ಮೇಳದಲ್ಲಿ ಪ್ರಧಾನ ಭಾಗವತರಾಗಿ ಮೆರೆದರು. ಭಾಗವತಿಕೆಗೆ ಮಹಿಳೆಯ ಇಂಪಾದ ಕಂಠವೂ ಹೊಂದುತ್ತದೆ ಎನ್ನುವುದನ್ನು ತೋರಿಸಿಕೊಟ್ಟವರು. ಅನಿವಾರ್ಯ ಸಂದರ್ಭಗಳಲ್ಲಿ ಇಡೀ ರಾತ್ರಿ ಭಾಗವತಿಕೆ ಮಾಡಿದ ನಿದರ್ಶನಗಳೂ ಇವೆ.

ಸಾಹಿತ್ಯ ಶುದ್ಧಿ, ಭಾಷಾ ಶುದ್ಧಿ, ಪುರಾಣ ಜ್ಞಾನ ಹಾಗೂ ಮಾಧುರ್ಯದಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. 45 ವರ್ಷಗಳ ಸುದೀರ್ಘ‌ ಯಕ್ಷ ಪಯಣದಲ್ಲಿ ಹಲವು ಶಿಷ್ಯರನ್ನೂ ರೂಪಿಸಿ ಯಕ್ಷರಂಗಕ್ಕೆ ಕೊಡುಗೆ ನೀಡಿದ್ದಾರೆ. ಯಕ್ಷ ಸೇವೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಅಗರಿ ಭಾಗವತ ಪ್ರಶಸ್ತಿ, ಉಳ್ಳಾ ಲದ ರಾಣಿ ಅಬ್ಬಕ್ಕ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ, ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ, ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನ ಪ್ರಶಸ್ತಿ ಸಂದಿವೆ.

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.