![1-mofdd](https://www.udayavani.com/wp-content/uploads/2024/07/1-mofdd-415x270.jpg)
ಬೆಳ್ತಂಗಡಿ: ಬಳಂಜದ ಮನೆಯೊಂದರ ಅಂಗಳದಲ್ಲೇ ಚಿರತೆ ಪ್ರತ್ಯಕ್ಷ: ಸೆರೆಗೆ ಬೋನ್ ಕಾರ್ಯಾಚರಣೆ
Team Udayavani, Jun 11, 2022, 5:37 PM IST
![ಬೆಳ್ತಂಗಡಿ: ಬಳಂಜದ ಮನೆಯೊಂದರ ಅಂಗಳದಲ್ಲೇ ಚಿರತೆ ಪ್ರತ್ಯಕ್ಷ: ಸೆರೆಗೆ ಬೋನ್ ಕಾರ್ಯಾಚರಣೆ](https://www.udayavani.com/wp-content/uploads/2022/06/Untitled-1-268-620x372.jpg)
ಬೆಳ್ತಂಗಡಿ: ಬಳಂಜ ಗ್ರಾಮದ ಪರಾರಿ ನಿವಾಸಿ ರಾಮಣ್ಣ ಪೂಜಾರಿ ಎಂಬುವರ ಮನೆಯ ಅಂಗಳದಲ್ಲಿ ರಾತ್ರಿ ಚಿರತೆಯೊಂದು ಅಲೆದಾಡುತ್ತಿದ್ದ ದೃಶ್ಯ ಅವರ ಮನೆಯ ಸಿಸಿ ಕ್ಯಾಮರಾದಲ್ಲಿ ಜೂ.10 ರಂದು ಸೆರೆಯಾಗಿದೆ.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಅರಣ್ಯ ಇಲಾಖೆಯವರು ಇದರ ಸೆರೆಗಾಗಿ ಬೋನ್ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಗ್ರಾಮದಲ್ಲಿ ನಾಯಿ, ಬೆಕ್ಕುಗಳು ಕಾಣೆಯಾಗುತ್ತಿದ್ದು ಜನ ಆತಂಕದಲ್ಲಿದ್ದರು. ಇದೀಗ ಮನೆಯಂಗಳಕ್ಕೆ ಚಿರತೆಗಳು ಬರುವುದರಿಂದ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.
ಇದೇ ಜೂನ್ 2 ರಂದು ಸುಲ್ಕೇರಿ ಸಮೀಪ ನಾವರ ಗ್ರಾಮದಲ್ಲಿ ವಸಂತ ಕೋಟ್ಯಾನ್ ಎಂಬುವರ ಮನೆಯ ಹಿಂಬದಿ ಬಾಯಿಗೆ ಚಿರತೆ ಬಿದ್ದತ್ತು. ಬಳಿಕ ಕಾರ್ಕಳ ಅರಣ್ಯ ಇಲಾಖೆ ತಂಡ ರಕ್ಷಿಸಿದ್ದರು. ಈ ಪ್ರದೇಶದಲ್ಲಿ ಆಗಾಗ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಮನೆಯಂಗಳಕ್ಕೆ ಚಿರತೆ ಬಂದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಇದರ ಸೆರೆಗಾಗಿ ಬೋನ್ ಅಳವಡಿಕೆ ಮಾಡಿದ್ದೇವೆ. ಬೋನಿನೊಳಗೆ ನಾಯಿಯನ್ನು ಇಡಲಾಗಿದ್ದು ಶೀಘ್ರವಾಗಿ ಸೆರೆ ಹಿಡಿಯಲಾಗುವುದು ಎಂದು ಅಳದಂಗಡಿ ಉಪ ವಲಯ ಅರಣ್ಯಾಧಿಕಾರಿ ಸುರೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-mofdd](https://www.udayavani.com/wp-content/uploads/2024/07/1-mofdd-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.